Breaking
13 Jan 2026, Tue

ರಿಪ್ಪನ್‌ಪೇಟೆ – ಒಕ್ಕಲಿಗರ ಸಂಘದ ನಿರ್ದೇಶಕರ ಚುನಾವಣೆಗೆ ಹೈಕೋರ್ಟ್ ತಡೆಯಾಜ್ಞೆ|Highcourt

ರಿಪ್ಪನ್‌ಪೇಟೆ – ಒಕ್ಕಲಿಗರ ಸಂಘದ ನಿರ್ದೇಶಕರ ಚುನಾವಣೆಗೆ ಹೈಕೋರ್ಟ್ ತಡೆಯಾಜ್ಞೆ

ರಿಪ್ಪನ್‌ಪೇಟೆ – ಇಲ್ಲಿನ ತಾಲೂಕ್ ಒಕ್ಕಲಿಗರ ಸಂಘದ ನಿರ್ದೇಶಕ ಸ್ಥಾನಕ್ಕೆ 29|10|2023 ರಂದು ನಡೆಯಬೇಕಿದ್ದ ಚುನಾವಣೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ ಎಂದು ಸಂಘದ ನಿರ್ದೇಶಕ ಹಾಗೂ ದೂರುದಾರ ಪುರುಷೋತ್ತಮ್ ಹೆಚ್ ಹೆಚ್ ಪತ್ರೀಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

29|10|2023 ರಂದು ಹೊಸನಗರ ತಾಲೂಕ್ ಒಕ್ಕಲಿಗರ ಸಂಘ ರಿಪ್ಪನ್‌ಪೇಟೆಯ 19 ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ನಡೆಸಲು ತೀರ್ಮಾನಿಸಲಾಗಿತ್ತು.

ಈ ಸಂಬಂಧ ಸಂಘದ ಹಾಲಿ ನಿರ್ದೇಶಕರುಗಳಾದ ಹಾಲುಗುಡ್ಡೆಯ ಪುರುಷೋತ್ತಮ್ ಹೆಚ್ ಹೆಚ್ ಮತ್ತು ರಾಜೇಶ್ ಹೆಚ್ ವೈ ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಮೂರ್ತಿ ಸಿ ಎಂ ಪೂನಚ್ಚ  ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿ ಚುನಾವಣೆಗೆ ತಡೆಯಾಜ್ಞೆ ನೀಡಿದೆ ಎಂದರು.

ಮೇಲ್ಮನವಿದಾರರ ಪರ ಹಾಜರಾಗಿದ್ದ ವಕೀಲ ಭಾರ್ಗವ್ ವಾದ ಮಂಡಿಸಿ 04|09|2022 ರಂದು ಒಕ್ಕಲಿಗರ ಸಂಘದ ಚುನಾವಣೆ ನಡೆದು 15 ನಿರ್ದೇಶಕರುಗಳ ಆಯ್ಕೆ ಪ್ರಕ್ರಿಯೆ ನಡೆದಿತ್ತು ಆದರೆ ಕೆಲವು ನಿರ್ದೇಶಕರುಗಳು ಸಂಘವನ್ನು ತಮ್ಮ ಕಪಿ ಮುಷ್ಟಿಯಲ್ಲಿ ಪಡೆಯುವ ಹುನ್ನಾರದಿಂದ ಕಾನೂನು ಬಾಹಿರವಾಗಿ ಅವಧಿಪೂರ್ವ ಚುನಾವಣೆ ನಡೆಸುತಿದ್ದಾರೆ ಎಂದು ವಾದ ಮಂಡಿಸಿದರು.

ಈ ಹಿನ್ನಲೆಯಲ್ಲಿ 29|10|2023 ರಂದು ನಡೆಯಬೇಕಿದ್ದ ಹೊಸನಗರ ತಾಲೂಕ್ ಒಕ್ಕಲಿಗರ ಸಂಘ ರಿಪ್ಪನ್‌ಪೇಟೆ ಘಟಕದ ಚುನಾವಣೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ ಎಂದು ದೂರುದಾರ ಪುರುಷೋತ್ತಮ್ ತಿಳಿಸಿದ್ದಾರೆ.

About The Author

By ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Leave a Reply

Your email address will not be published. Required fields are marked *

Exit mobile version