ರಿಪ್ಪನ್ಪೇಟೆ : ಪಟ್ಟಣದ ಸಾಗರ ರಸ್ತೆಯಲ್ಲಿನ ಭಗತ್ ಸಿಂಗ್ ನಗರದ ನಿವಾಸಿ ಕನ್ನಡ ಪರ ಹೋರಾಟಗಾರ ಸಮಾಜ ಸೇವಕ ಹಾಗೂ ಪುನೀತ್ ರಾಜ್ ಅಭಿಮಾನಿಗಳ ಸಂಘದ ಅಧ್ಯಕ್ಷ ವಿನಾಯಕ್ ಶೆಟ್ಟಿ (26) ಇಂದು ಬೆಳಗಿನಜಾವ ಹೃದಯಘಾತದಿಂದ ನಿಧನರಾಗಿದ್ದಾರೆ.
ಇಂದು ಬೆಳಗಿನಜಾವ ವಿನಾಯಕ್ ಶೆಟ್ಟಿ ರವರಿಗೆ (ಭಾನುವಾರ) ಎದೆ ನೋವು ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಸಂದರ್ಭದಲ್ಲಿ ಹೃದಯಘಾತದಿಂದ ನಿಧನರಾಗಿದ್ದಾರೆ.
ಮೃತ ವಿನಾಯಕ್ ಶೆಟ್ಟಿ ತಂದೆ, ತಾಯಿ, ಓರ್ವ ಸಹೋದರಿ, ಓರ್ವ ಸಹೋದರ ಸೇರಿದಂತೆ ಅಪಾರ ಕುಟುಂಬ ವರ್ಗದವರನ್ನು ಮತ್ತು ಸ್ನೇಹಿತರನ್ನು ಅಗಲಿದ್ದಾರೆ.
ಕನ್ನಡ ಪರ ಹೋರಾಟದಿಂದ ಪಟ್ಟಣದಾದ್ಯಂತ ಮನೆ ಮಾತಾಗಿದ್ದ ವಿನಾಯಕ್ ಶೆಟ್ಟಿ ನಿಧನದಿಂದ ಅವರ ಅಪಾರ ಸ್ನೇಹಿತ ಬಳಗದಲ್ಲಿ ದುಃಖ ಮಡುಗಟ್ಟಿದೆ. ಪಟಪಟನೆ ಮಾತನಾಡುತ್ತ ಕನ್ನಡಪರ ಹೋರಾಟದ ಬಗ್ಗೆ ಕಿಚ್ಚು ಹತ್ತಿಸುತಿದ್ದ ಯುವಕ ಇನ್ನಿಲ್ಲ ಎಂಬ ಸುದ್ದಿಯನ್ನು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ.
ವಿನಾಯಕ್ ಶೆಟ್ಟಿ ನಿಧನಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ಹಾಗೂ ಕನ್ನಡಪರ ಸಂಘಟನೆಗಳು ಸಂತಾಪ ವ್ಯಕ್ತಪಡಿಸಿದ್ದಾರೆ
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್