ರಿಪ್ಪನ್ಪೇಟೆ : ಚರ್ಚ್ ಬಳಿಯ ತಿರುವಿನಲ್ಲಿ ಟಿಂಬರ್ ಲಾರಿ ಪಲ್ಟಿ – ತಪ್ಪಿದ ಭಾರಿ ಅನಾಹುತ
ರಿಪ್ಪನ್ಪೇಟೆ : ಇಲ್ಲಿನ ತೀರ್ಥಹಳ್ಳಿ ರಸ್ತೆಯ ಜ್ಯೋತಿ ಮಾಂಗಲ್ಯ ಮಂದಿರದ ಬಳಿಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟಿಂಬರ್ ಲಾರಿಯೊಂದು ಪಲ್ಟಿಯಾದ ಘಟನೆ ಶುಕ್ರವಾರ ರಾತ್ರಿ ನಡೆದಿದೆ.
ತೀರ್ಥಹಳ್ಳಿ ಕಡೆಯಿಂದ ರಿಪ್ಪನ್ಪೇಟೆ ಕಡೆಗೆ ಟಿಂಬರ್ ಹೊತ್ತು ಸಾಗುತ್ತಿದ್ದ ಲಾರಿ ಚಾಲಕನ ಅತೀ ವೇಗ ಹಾಗೂ ಅಜಾಗರೂಕತೆಯಿಂದ ತಿರುವಿನಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು ಲಾರಿಯಲ್ಲಿದ್ದ ಮರದ ತುಂಡುಗಳೆಲ್ಲ ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದೆ.
ಅಪಘಾತದ ರಭಸಕ್ಕೆ ಲಾರಿಯ ಪಲ್ಟಿಯಾಗಿ ಟಾಪ್ ಕಿತ್ತುಹೋಗಿದ್ದು ಚಾಲಕ ಮರದ ದಿಂಬುಗಳ ನಡುವೆ ಸಿಲುಕಿಕೊಂಡಿದ್ದಾನೆ ಕೂಡಲೇ ಸ್ಥಳೀಯರು ಧಾವಿಸಿ ಆತನನ್ನು ಹೊರಗೆ ಎಳೆದಿದ್ದಾರೆ.ಅದೃಷ್ಟವಶಾತ್ ಚಾಲಕನಿಗೆ ಗಂಭೀರ ಗಾಯಗಳಾಗಿರುವುದಿಲ್ಲ.ಅಪಘಾತದಲ್ಲಿ ಲಾರಿ ಸಂಪೂರ್ಣ ನಜ್ಜುಗುಜ್ಜಾಗಿದೆ.
ಲಾರಿ ಚಾಲಕ ಸೈಯದ್ ಎಂಬಾತನನ್ನು ಸ್ಥಳಿಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ತಪ್ಪಿದ ಭಾರಿ ಅನಾಹುತ :
ತೀರ್ಥಹಳ್ಳಿ ರಸ್ತೆಯ ಜ್ಯೋತಿ ಮಾಂಗಲ್ಯ ಮಂದಿರದ ಬಳಿಯ ತಿರುವಿನಲ್ಲಿ ಲಾರಿ ಪಲ್ಟಿಯಾದ ಸಮೀಪದಲ್ಲಿಯೇ ವಿದ್ಯುತ್ ಟ್ರಾನ್ಸ್ ಫರ್ ಇದ್ದು ಕೂದಳೆಲೆ ಅಂತರದಲ್ಲಿ ಭಾರಿ ಅನಾಹುತ ತಪ್ಪಿದೆ.
ರಿಪ್ಪನ್ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಹಂಪ್ಸ್ ಹಾಗೂ ಬ್ಯಾರಿಕೇಡ್ ಅಳಡಿಕೆಗೆ ಆಗ್ರಹ
ಇತ್ತೀಚಿನ ದಿನಗಳಲ್ಲಿ ಈ ತಿರುವಿನಲ್ಲಿ ಅನೇಕ ಅಪಘಾತಗಳು ನಡೆಯುತಿದ್ದು ಇದಕ್ಕೆ ಅತೀ ವೇಗವೆ ಕಾರಣವಾಗಿದೆ.ಮುಂದೆ ಭಾರಿ ಅನಾಹುತವಾಗುವ ಮುಂಚೆ ಸಂಬಂಧಪಟ್ಟವರು ಬರುವೆ ಬಸ್ ಸ್ಟ್ಯಾಂಡ್ ಬಳಿಯಲ್ಲಿ ಹಂಪ್ಸ್ ಹಾಗೂ ಬ್ಯಾರಿಕೇಡ್ ಅಳವಡಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್