ಶಾಸಕ ಬೇಳೂರು ಬಹಿರಂಗ ಕ್ಷಮೆಯಾಚನೆಗೆ ತಾಲೂಕ್ ವೀರಶೈವ ಲಿಂಗಾಯಿತ ಮಹಾಸಭಾ ಆಗ್ರಹ|rpet

ರಿಪ್ಪನ್‌ಪೇಟೆ : ಸಾಗರ ಕ್ಷೇತ್ರದ ಶಾಸಕರಾದ ಗೋಪಾಲಕೃಷ್ಣ ಬೇಳೂರು ರವರು ನಮ್ಮ ಸಮಾಜದ ಹಿರಿಯರಾದ ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಮತ್ತು ಅಖಿಲ ಭಾರತ ರಾಷ್ಟ್ರೀಯ ವೀರಶೈವ ಲಿಂಗಾಯಿತ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ ರವರ ಬಗ್ಗೆ ಹಗುರವಾಗಿ ಮಾತಾನಾಡಿರುವುದನ್ನ ಹೊಸನಗರ ತಾಲ್ಲೂಕು ಅಖಿಲಭಾರತ ವೀರಶೈವ ಮಹಾಸಭಾ ಘಟಕ ಖಂಡಿಸುತ್ತದೆ ಎಂದು ತಾಲ್ಲೂಕು ಘಟಕದ ಅಧ್ಯಕ್ಷರಾದ ಮಲ್ಲಿಕಾರ್ಜುನ್ ತಿಳಿಸಿದ್ದಾರೆ.

ಪಟ್ಟಣದ ಕುವೆಂಪು ಸಭಾಂಗಣದಲ್ಲಿ ಪತ್ರೀಕಾಗೋಷ್ಟಿಯಲ್ಲಿ ಮಾತನಾಡಿದ ಅವರು ಹೇಳಿಕೆಯಲ್ಲಿ ತಿಳಿಸಿದ ಬಿ.ಎಸ್.ಯಡಿಯೂರಪ್ಪನವರು ನಾಲ್ಕು ಬಾರಿ ಈ ರಾಜ್ಯದ ಮುಖ್ಯಮಂತ್ರಿಯಾಗಿ ಎಲ್ಲಾ ವರ್ಗದ ಜನರ ಒಳಿತಿಗಾಗಿ ಜನಪರ ಯೋಜನೆಗಳನ್ನ ನೀಡುವುದರ ಮೂಲಕ ತನ್ನದೇ ಆದ ಕೊಡುಗೆಯನ್ನು ಈ ರಾಜ್ಯಕ್ಕೆ ನೀಡಿದ್ದಾರೆ. ವಿಶೇಷವಾಗಿ ಜಿಲ್ಲೆಯ ಅಭಿವೃದ್ಧಿಗೆ ತನ್ನದೇ ಆದ ಕೊಡುಗೆಯನ್ನ ನೀಡಿದ್ದಾರೆ. ಇವರು ಯಾವುದೇ ಜಾತಿಯ ವ್ಯವಸ್ಥೆಯಲ್ಲಿ ರಾಜಕರಣ ಮಾಡದೇ ಸರ್ವರಿಗೂ ಸಮ ಬಾಳು ಸರ್ವರಿಗೂ ಸಮ ಪಾಲು ರೀತಿಯಲ್ಲಿ ಆಡಳಿತವನ್ನು ನೀಡಿದ್ದಾರೆ, ಇವರು ರೈತಪರ ಹೋರಾಟ ನಡೆಸುತ್ತಾ ಬಂದ ಇವರು ಈ ದೇಶದಲ್ಲಿಯೇ ಪ್ರತ್ಯೇಕ ಕೃಷಿ ಬಜೆಟ್ ಮಂಡನೆ ಮಾಡುವ ಮೂಲಕ ಕೃಷಿ ಕ್ರಾಂತಿಗೆ ಮುನ್ನುಡಿ ಬರೆದ, ಇಂತಹ ಮಹಾನ್ ನಾಯಕನ ಬಗ್ಗೆ ಶಾಸಕರಾದ ಗೋಪಾಲಕೃಷ್ಣ ಬೇಳೂರುರವರು ಆಡಿರುವ ಮಾತು ನಮ್ಮ ಮನಸ್ಸಿಗೆ ನೋವು ತಂದಿದೆ.

ಶಾಮನೂರು ಶಿವಶಂಕರಪ್ಪನವರು ಒಂದು ಸಮಾಜದ ಅಧ್ಯಕ್ಷರಾಗಿ ಸಮಾಜದ ಅಧಿಕಾರಿಗಳ ಸಂಕಷ್ಟದ ಬಗ್ಗೆ ಹೇಳಿರುವುದಕ್ಕೆ ಬಿಎಸ್ ವೈ ಸಹಮತ ವ್ಯಕ್ತಪಡಿಸಿ ಸರ್ಕಾರ ಇದರ ಬಗ್ಗೆ ಗಮನ ಹರಿಸಬೇಕೆಂದು ಕೇಳಿದ್ದರು ಅಷ್ಟೇ ಅದಕ್ಕೆ ಶಾಸಕರ ಈ ರೀತಿಯ ಹೇಳಿಕೆ ಅವರಿಗೆ ಶೋಭೆ ತರುವುದಿಲ್ಲ,ಯಡಿಯೂರಪ್ಪನವರಿಗೆ ಮಾನ ಮರ್ಯಾದೆ ಇಲ್ಲ ಎಂದು ಹೇಳುವ ಶಾಸಕರು ಹಿಂದಿನದನ್ನು ಮರೆತಿದ್ದಾರೆ,ಹತ್ತು ವರ್ಷ ಶಾಸಕರಾಗಿದ್ದ ಅವರು ನಮ್ಮ ಸಮಾಜದ ಬೆಂಬಲವನ್ನು ಮರೆತಿದ್ದಾರೆ.ಕೂಡಲೇ ಇಂತಹ ಬೇಜವಾಬ್ದಾರಿ ಹೇಳಿಕೆಗೆ ಸಾರ್ವಜನಿಕವಾಗಿ ಶಾಸಕ ಬೇಳೂರು ಕ್ಷಮೆ ಯಾಚಿಸಬೇಕು ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರವಾದ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.

ನಂತರ ಮಾತನಾಡಿದ ಸೋಮಶೇಖರ್ (ರಾಜು ದೂನ ) ಶಾಸಕ ಬೇಳೂರು ಗೋಪಾಲಕೃಷ್ಣ ಯಡಿಯೂರಪ್ಪ ನವರಿಂದ ಎಲ್ಲವನ್ನೂ ಪಡೆದು ಈಗ ಅವರ ವಿರುದ್ದ ಆಧಾರ ರಹಿತವಾಗಿ ಶಾಸಕ ಬೇಳೂರು ಆರೋಪ ಮಾಡುತಿದ್ದು,ವೀರಶೈವ ಸಮಾಜ ಎಂದಿಗೂ ಭಿಕ್ಷೆ  ಕೊಟ್ಟಿರುವ ಸಮಾಜವೇ ಹೊರತು ಭಿಕ್ಷೆ ಬೇಡಿದ ಸಮಾಜವಲ್ಲ ಎಂದು ಹೇಳಿದರು.

ಸುದ್ದಿಗೋಷ್ಟಿಯಲ್ಲಿ ವೀರಶೈವ ಲಿಂಗಾಯತ ಮಹಾಸಭಾ ಹೊಸನಗರ ತಾಲ್ಲೂಕು ಘಟಕದ ಜೆ.ಎಂ.ಶಾಂತಕುಮಾರ್, ಬೆನವಳ್ಳಿ ಮಹೇಂದ್ರಗೌಡ, ಬಿ.ಬಿ.ಶಾಂತಪ್ಪಗೌಡ, ತಾಲ್ಲೂಕು ಯುವಘಟಕದ ಅಧ್ಯಕ್ಷ ಹೆಚ್.ಆರ್.ತೀರ್ಥೇಶ್, ಎಸ್.ಪಿ.ಧರ್ಮರಾಜ್‌ ರಿಪ್ಪನ್‌ಪೇಟೆ ಹಾಜರಿದ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in…

3 hours ago

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…

6 hours ago

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…

18 hours ago

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ – ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ - ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು…

18 hours ago

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ Former Education Minister Kimmane Ratnakar…

20 hours ago

ಪಟಗುಪ್ಪ ಸೇತುವೆ ಬಳಿಯ ಹಿನ್ನೀರಿನಲ್ಲಿ ಅನಾಮಧೇಯ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ

ಪಟಗುಪ್ಪ ಸೇತುವೆ ಬಳಿಯ ಹಿನ್ನೀರಿನಲ್ಲಿ ಅನಾಮಧೇಯ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ An unidentified man’s partially decomposed…

20 hours ago