ಶಿವಮೊಗ್ಗದ ರಾಗಿಗುಡ್ಡದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ – 144 ಸೆಕ್ಷನ್ ಜಾರಿ
ಶಿವಮೊಗ್ಗ ನಗರದಲ್ಲಿ ಸಂಭ್ರಮದ ಈದ್ ಮಿಲಾದ್ ಮೆರವಣಿಗೆ ನಡೆಯುತ್ತಿದ್ದು, ಇನ್ನೊಂದೆಡೆ ರಾಗಿಗುಡ್ಡದಲ್ಲಿ ಅಹಿತಕರ ಘಟನೆಯೊಂದು ಸಂಭವಿಸಿದೆ. ಸ್ಥಳದಲ್ಲೀಗ 144 ಸೆಕ್ಷನ್ ವಿಧಿಸಲಾಗಿದೆ.
ರಾಗಿಗುಡ್ಡದಲ್ಲಿ ನಡೆದ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ ಸಂಭವಿಸಿದೆ. ಇದರ ಬೆನ್ನಲ್ಲೆ ಪೊಲೀಸರು ಜನರನ್ನು ಚದುರಿಸಿ, ಕೆಲವರನ್ನ ವಶಕ್ಕೆ ಪಡೆದಿದ್ದರು. ಆನಂತರ ಕೆಲವರು ಪೊಲೀಸರ ಮೇಲೂ ಕಲ್ಲು ತೂರಾಟ ನಡೆಸಿದ್ದಾರೆ. ಈ ವೇಳೆ ಪರಿಸ್ಥಿತ ತಿಳಿಗೊಳಿಸಲು ಮುಂದಾದ ಎಸ್ಪಿ ಮಿಥುನ್ ಕುಮಾರ್ ರವರ ಕಡೆಗೂ ಕಲ್ಲು ಬೀಸಿದ್ದಾರೆ. , ಅಲ್ಲಿದ್ದ ಮನೆಗಳು ಹಾಗೂ ವಾಹನಗಳ ಮೇಲೆ ಕಲ್ಲೂ ತೂರಿದ್ದಾರೆ. ಈ ವೇಳೆ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ ಮಾಡಿದ್ದಾರೆ.
ತಕ್ಷಣವೇ ಸ್ಥಳದಲ್ಲಿದ್ದ ಎಸ್ಪಿ ಮಿಥುನ್ ಕುಮಾರ್, ಮುನ್ನೆಚ್ಚರಿಕೆ ಕ್ರಮವಾಗಿ 144 ಸೆಕ್ಷನ್ ಜಾರಿ ಮಾಡಲಾಗಿದೆ. ಜನರು ಗುಂಪು ಸೇರದಂತೆ ಮನವಿ ಮಾಡಿದ್ದು ವದಂತಿಗಳಿಗೂ ಕಿವಿಗೊಡದಂತೆ ಮನವಿ ಮಾಡಿದ್ದಾರೆ. ಸದ್ಯ ಸ್ಥಳದಲ್ಲಿ ಪರಿಸ್ಥಿತಿ ಪೊಲೀಸರ ಕಂಟ್ರೋಲ್ನಲ್ಲಿ ಆರ್ಎಎಫ್ ಪಡೆ ಸ್ಥಳದಲ್ಲಿ ಮೊಕ್ಕಾಂ ಹೂಡಿದೆ. ಘಟನೆಗಳ ಸಂಬಂಧ ಏಳು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.
ರಿಪ್ಪನ್ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in…
ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…
ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…
RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ - ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು…
ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ Former Education Minister Kimmane Ratnakar…
ಪಟಗುಪ್ಪ ಸೇತುವೆ ಬಳಿಯ ಹಿನ್ನೀರಿನಲ್ಲಿ ಅನಾಮಧೇಯ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ An unidentified man’s partially decomposed…