January 11, 2026

ಶಿವಮೊಗ್ಗದ ರಾಗಿಗುಡ್ಡದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ – 144 ಸೆಕ್ಷನ್ ಜಾರಿ

ಶಿವಮೊಗ್ಗದ ರಾಗಿಗುಡ್ಡದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ – 144 ಸೆಕ್ಷನ್ ಜಾರಿ


ಶಿವಮೊಗ್ಗ ನಗರದಲ್ಲಿ ಸಂಭ್ರಮದ ಈದ್ ಮಿಲಾದ್ ಮೆರವಣಿಗೆ ನಡೆಯುತ್ತಿದ್ದು, ಇನ್ನೊಂದೆಡೆ ರಾಗಿಗುಡ್ಡದಲ್ಲಿ ಅಹಿತಕರ ಘಟನೆಯೊಂದು ಸಂಭವಿಸಿದೆ. ಸ್ಥಳದಲ್ಲೀಗ 144 ಸೆಕ್ಷನ್ ವಿಧಿಸಲಾಗಿದೆ. 

ನಡೆದಿದ್ದೇನು?

ರಾಗಿಗುಡ್ಡದಲ್ಲಿ ನಡೆದ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ ಸಂಭವಿಸಿದೆ. ಇದರ ಬೆನ್ನಲ್ಲೆ ಪೊಲೀಸರು ಜನರನ್ನು ಚದುರಿಸಿ, ಕೆಲವರನ್ನ ವಶಕ್ಕೆ ಪಡೆದಿದ್ದರು. ಆನಂತರ ಕೆಲವರು ಪೊಲೀಸರ ಮೇಲೂ ಕಲ್ಲು ತೂರಾಟ ನಡೆಸಿದ್ದಾರೆ. ಈ ವೇಳೆ ಪರಿಸ್ಥಿತ ತಿಳಿಗೊಳಿಸಲು ಮುಂದಾದ ಎಸ್​ಪಿ ಮಿಥುನ್ ಕುಮಾರ್​ ರವರ ಕಡೆಗೂ ಕಲ್ಲು ಬೀಸಿದ್ದಾರೆ. , ಅಲ್ಲಿದ್ದ ಮನೆಗಳು ಹಾಗೂ ವಾಹನಗಳ ಮೇಲೆ ಕಲ್ಲೂ ತೂರಿದ್ದಾರೆ. ಈ ವೇಳೆ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು  ಲಾಠಿ ಪ್ರಹಾರ ಮಾಡಿದ್ದಾರೆ.

ತಕ್ಷಣವೇ ಸ್ಥಳದಲ್ಲಿದ್ದ ಎಸ್​ಪಿ ಮಿಥುನ್ ಕುಮಾರ್, ಮುನ್ನೆಚ್ಚರಿಕೆ ಕ್ರಮವಾಗಿ 144 ಸೆಕ್ಷನ್​ ಜಾರಿ  ಮಾಡಲಾಗಿದೆ. ಜನರು ಗುಂಪು ಸೇರದಂತೆ ಮನವಿ ಮಾಡಿದ್ದು ವದಂತಿಗಳಿಗೂ ಕಿವಿಗೊಡದಂತೆ ಮನವಿ ಮಾಡಿದ್ದಾರೆ. ಸದ್ಯ ಸ್ಥಳದಲ್ಲಿ ಪರಿಸ್ಥಿತಿ ಪೊಲೀಸರ ಕಂಟ್ರೋಲ್​ನಲ್ಲಿ ಆರ್​ಎಎಫ್​ ಪಡೆ ಸ್ಥಳದಲ್ಲಿ ಮೊಕ್ಕಾಂ ಹೂಡಿದೆ. ಘಟನೆಗಳ ಸಂಬಂಧ ಏಳು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.



 


About The Author

Leave a Reply

Your email address will not be published. Required fields are marked *

Exit mobile version