ಹೊಸನಗರದಲ್ಲಿ ಒಂದು ಮನೆ ಹಾಗೂ ಎರಡು ದೇವಸ್ಥಾನಗಳ ಬೀಗ ಮುರಿದು ಕಳ್ಳತನ !!!|
ಹೊಸನಗರ : ಜನನಿಬಿಡ ಪ್ರದೇಶವಾದ ಪಟ್ಟಣದ ಚೌಡಮ್ಮ ರಸ್ತೆಯ ಶ್ರೀ ನಾಗ ಚೌಡೇಶ್ವರಿ ಗುಡಿ ಬೀಗ ಹಾಗೂ ಹಳೆ ಸಾಗರ ರಸ್ತೆಯ ಜಿ.ವಿ ವೇಣುಗೋಪಾಲ್ ಎಂಬುವರ ಮನೆಯಲ್ಲಿ ಬಾಡಿಗೆಗಿದ್ದ ಶಿಕ್ಷಕ ರಮೇಶ್ ಮನೆಯ ಹೊರ ಹಾಗೂ ಒಳಗಿನ ಬಾಗಿಲಿನ ಬೀಗ ಮುರಿದು ಕಳ್ಳತನಕ್ಕೆ ವಿಫಲ ಯತ್ನ ನಡೆಸಿದ ಘಟನೆ ಇಂದು ಬೆಳಗಿನಜಾವ ಸಂಭವಿಸಿದ್ದು ಜನರಲ್ಲಿ ಆತಂಕ ಉಂಟು ಮಾಡಿದೆ.
ಇಲ್ಲಿ ವಿಫಲ ಯತ್ನ ನಡೆಸಿದ ಕಳ್ಳರು ಹಳೆ ಸಾಗರ ರಸ್ತೆಯ ಮಾರಿಕಾಂಬಾ ದೇವಸ್ಥಾನದ ಬೀಗ ಮುರಿದು ದೇವಸ್ಥಾನದ ಹುಂಡಿಯ ಚಿಲ್ಲರೆ ಹಣ ಬಿಟ್ಟು ನೋಟುಗಳನ್ನು ಕದ್ದೊಯ್ದ ಬಗ್ಗೆ ದೇವಸ್ಥಾನ ಸಮಿತಿಯ ಹೆಚ್.ಎನ್ ಶ್ರೀಪತಿ ರಾವ್ ಹಾಗೂ ಎನ್ ಶ್ರೀಧರ ಉಡುಪ ಪೊಲೀಸರಿಗೆ ದೂರು ನೀಡಿದ ಬಗ್ಗೆ ತಿಳಿದು ಬಂದಿದೆ.
ಕಳ್ಳತನ ಸುದ್ದಿ ತಿಳಿದಾಕ್ಷಣ ಸಿಪಿಐ ಗುರಣ್ಣ ಎಸ್ ಹೆಬ್ಬಾಳ್ ಪಿಎಸ್ಐ ಶಿವಾನಂದ ಕೋಳಿ ಸಿಬ್ಬಂದಿಗಳ ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕಳ್ಳತನದ ಪತ್ತೆಗಾಗಿ ಬೆರಳಚ್ಚು ತಜ್ಞರು ಹಾಗೂ ಶ್ವಾನದಳ ಕರೆಸುವುದಾಗಿ ಮಾಧ್ಯಮದವರೊಂದಿಗೆ ಮಾತನಾಡುತ್ತಾ ಸಿಪಿಐ ಗುರಣ್ಣ ತಿಳಿಸಿದ್ದಾರೆ.
ರಿಪ್ಪನ್ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in…
ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…
ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…
RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ - ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು…
ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ Former Education Minister Kimmane Ratnakar…
ಪಟಗುಪ್ಪ ಸೇತುವೆ ಬಳಿಯ ಹಿನ್ನೀರಿನಲ್ಲಿ ಅನಾಮಧೇಯ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ An unidentified man’s partially decomposed…