ಹೊಸನಗರದಲ್ಲಿ ಒಂದು ಮನೆ ಹಾಗೂ ಎರಡು ದೇವಸ್ಥಾನಗಳ ಬೀಗ ಮುರಿದು ಕಳ್ಳತನ !!!|
ಹೊಸನಗರ : ಜನನಿಬಿಡ ಪ್ರದೇಶವಾದ ಪಟ್ಟಣದ ಚೌಡಮ್ಮ ರಸ್ತೆಯ ಶ್ರೀ ನಾಗ ಚೌಡೇಶ್ವರಿ ಗುಡಿ ಬೀಗ ಹಾಗೂ ಹಳೆ ಸಾಗರ ರಸ್ತೆಯ ಜಿ.ವಿ ವೇಣುಗೋಪಾಲ್ ಎಂಬುವರ ಮನೆಯಲ್ಲಿ ಬಾಡಿಗೆಗಿದ್ದ ಶಿಕ್ಷಕ ರಮೇಶ್ ಮನೆಯ ಹೊರ ಹಾಗೂ ಒಳಗಿನ ಬಾಗಿಲಿನ ಬೀಗ ಮುರಿದು ಕಳ್ಳತನಕ್ಕೆ ವಿಫಲ ಯತ್ನ ನಡೆಸಿದ ಘಟನೆ ಇಂದು ಬೆಳಗಿನಜಾವ ಸಂಭವಿಸಿದ್ದು ಜನರಲ್ಲಿ ಆತಂಕ ಉಂಟು ಮಾಡಿದೆ.
ಇಲ್ಲಿ ವಿಫಲ ಯತ್ನ ನಡೆಸಿದ ಕಳ್ಳರು ಹಳೆ ಸಾಗರ ರಸ್ತೆಯ ಮಾರಿಕಾಂಬಾ ದೇವಸ್ಥಾನದ ಬೀಗ ಮುರಿದು ದೇವಸ್ಥಾನದ ಹುಂಡಿಯ ಚಿಲ್ಲರೆ ಹಣ ಬಿಟ್ಟು ನೋಟುಗಳನ್ನು ಕದ್ದೊಯ್ದ ಬಗ್ಗೆ ದೇವಸ್ಥಾನ ಸಮಿತಿಯ ಹೆಚ್.ಎನ್ ಶ್ರೀಪತಿ ರಾವ್ ಹಾಗೂ ಎನ್ ಶ್ರೀಧರ ಉಡುಪ ಪೊಲೀಸರಿಗೆ ದೂರು ನೀಡಿದ ಬಗ್ಗೆ ತಿಳಿದು ಬಂದಿದೆ.
ಕಳ್ಳತನ ಸುದ್ದಿ ತಿಳಿದಾಕ್ಷಣ ಸಿಪಿಐ ಗುರಣ್ಣ ಎಸ್ ಹೆಬ್ಬಾಳ್ ಪಿಎಸ್ಐ ಶಿವಾನಂದ ಕೋಳಿ ಸಿಬ್ಬಂದಿಗಳ ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕಳ್ಳತನದ ಪತ್ತೆಗಾಗಿ ಬೆರಳಚ್ಚು ತಜ್ಞರು ಹಾಗೂ ಶ್ವಾನದಳ ಕರೆಸುವುದಾಗಿ ಮಾಧ್ಯಮದವರೊಂದಿಗೆ ಮಾತನಾಡುತ್ತಾ ಸಿಪಿಐ ಗುರಣ್ಣ ತಿಳಿಸಿದ್ದಾರೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್