ಹೊಸನಗರ – ಎಂ ಗುಡ್ಡೆಕೊಪ್ಪದಲ್ಲಿ ಮನೆ ಬಾಗಿಲು ಮುರಿದು ಕಳ್ಳತನ
ಹೊಸನಗರ: ಹೊಸನಗರ ತಾಲ್ಲೂಕು ಎಂ ಗುಡ್ಡೆಕೊಪ್ಪ ಗ್ರಾಮದ ಮುರುಳಿದರಭಟ್ರವರ ತೋಟದ ಮನೆ ರಾತ್ರಿ ಮುಂಭಾಗದ ಬಾಗಿಲಿನ ಬೀಗ ಮುರಿದು ಗೋಡ್ರೇಜ್ ಬಾಗಿಲು ಮುರಿದ ಘಟನೆ ಮಂಗಳವಾರ ರಾತ್ರಿ ನಡೆದಿದೆ.
ಮಂಗಳವಾರ ರಾತ್ರಿ ಮುರುಳಿಧರ್ ಭಟ್ರವರು ಹೊಸನಗರದ ಮನೆಗೆ ರಾತ್ರಿ 7ಗಂಟೆಯ ನಂತರ ಬಂದಿದ್ದಾರೆ ಬರುವ ಸಂದರ್ಭದಲ್ಲಿ ಮನೆಯ ಮುಂಬಾಗಿನ ಬಾಗಿಲಿಗೆ ಬೀಗ ಹಾಗೂ ಗೋಡ್ರೇಜ್ ಬೀಗ ಹಾಕಿಕೊಂಡು ಬಂದಿದ್ದು ಅವರ ಕೆಲಸದವರು ಬುಧವಾರ ಬೆಳಿಗ್ಗೆ ಕೆಲಸಕ್ಕೆ ಬಂದ ಸಂದರ್ಭದಲ್ಲಿ ಬೀಗ ಮುರಿದಿರುವ ಗೊತ್ತಾಗಿದ್ದು ಮನೆಯ ಮಾಲೀಕ ಮುರುಳಿಧರ್ ಭಟ್ರವರು ಹೊಸನಗರ ಠಾಣೆಗೆ ಬೀಗ ಮುರಿದಿರುವ ಬಗ್ಗೆ ದೂರು ನೀಡಿದ್ದಾರೆ.
ಮನೆಯ ಬೀಗ ಮುರಿದಿರುವ ಬಗ್ಗೆ ದೂರು ಬರುತ್ತಿದ್ದಂತೆ ಹೊಸನಗರದ ಸರ್ಕಲ್ ಇನ್ಸ್ಪೇಕ್ಟರ್ ಗುರಣ್ಣ ಎಸ್ ಹೆಬ್ಬಾಳ್ ಹಾಗೂ ಎ.ಎಸ್.ಐ ಶಿವಪುತ್ರರವರು ಸ್ಥಳಕ್ಕೆ ಬೇಟಿ ನೀಡಿ ಪರಿಶೀಲಿಸಿದ್ದಾರೆ ತಕ್ಷಣ ಬೆರಳಚ್ಚು ತಜ್ಞರನ್ನು ಹಾಗೂ ಶ್ವಾನದಳದವರನ್ನು ಕರೆಸಲಾಗಿದ್ದು ಮುಂದಿನ ತನಿಖೆ ನಡೆಯುತ್ತಿದೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್