Headlines

ಚಲಿಸುತಿದ್ದ ಬೈಕ್‌ ಮೇಲೆ ಮರ ಬಿದ್ದು ಓರ್ವ ಸಾವು ಇನ್ನಿಬ್ಬರು ಗಂಭೀರ|crime news

ಚಲಿಸುತಿದ್ದ ಬೈಕ್‌ ಮೇಲೆ ಮರ ಬಿದ್ದು ಓರ್ವ ಸಾವು ಇನ್ನಿಬ್ಬರು ಗಂಭೀರ ಶಿವಮೊಗ್ಗ : ಯಲವಟ್ಟಿ ಗ್ರಾಮದಲ್ಲಿ ಮರವೊಂದನ್ನು ಕಟಾವು ಮಾಡುವ ವೇಳೆ ಚಲಿಸುತಿದ್ದ ಬೈಕ್ ಮೇಲೆ ಮರ ಬಿದ್ದ ಕಾರಣ ಬೈಕ್ ನಲ್ಲಿದ್ದ ಇಬ್ಬರಿಗೆ ಗಾಯಗಳಾಗಿದ್ದು ಓರ್ವ ಸಾವು ಕಂಡಿದ್ದಾರೆ. ಯಲವಟ್ಟಿಯ ಖಾಸಗಿ ತೋಟದಲ್ಲಿದ್ದ ಮರ ಕಡಿಯುವ ವೇಳೆ ಮುಂಜಾಗೃತ ಕ್ರಮ ಕೈಗೊಳ್ಳದ ಪರಿಣಾಮ ಚಲಿಸುತಿದ್ದ ಬೈಕ್ ಮೇಲೆ ಮರ ಬಿದ್ದಿದೆ. ಬೈಕ್ ನಲ್ಲಿದ್ದ ಓರ್ವ ಮೃತಪಟ್ಟು ಇನ್ನಿಬ್ಬರಿಗೆ ಗಂಭೀರ ಗಾಯಗಳಾಗಿವೆ. ತಕ್ಷಣ ಮೂವರು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಮೂವರಲ್ಲಿ…

Read More

ಮನೆ ಮುಂದೆ ಆಟವಾಡುತಿದ್ದ ಬಾಲಕನ ಮೇಲೆ ಎರಗಿದ ಬೀದಿನಾಯಿಗಳು – KSRTC ಬಸ್ ನಲ್ಲಿ ಯುವಕನ ಪುಂಡಾಟಿಕೆ

ಮನೆ ಮುಂದೆ ಆಟವಾಡುತಿದ್ದ ಬಾಲಕನ ಮೇಲೆ ಎರಗಿದ ಬೀದಿನಾಯಿಗಳು ಸಾಗರ : ಇಲ್ಲಿನ ನಗರ ಸಭಾ ವ್ಯಾಪ್ತಿಯಲ್ಲಿ ಬೀದಿನಾಯಿಗಳ ಹಾವಳಿ ವಿಪರೀತವಾಗಿದೆ. ಆದರೆ ಅದರ ಬಗ್ಗೆ ತಲೆಕೆಡಿಸಿಕೊಳ್ಳುವವರು ಇಲ್ಲದಂತಾಗಿದೆ ಎಂದು ಜನರು ದೂರುತ್ತಿದ್ದಾರೆ. ಈ ನಡುವೆ ಬೀದಿನಾಯಿಗಳು ದಾಳಿ ನಡೆಸಿ ಬಾಲಕನೊಬ್ಬನ ಮುಖಕ್ಕೆ ಗಂಭೀರ ಗಾಯವಾಗಿರುವ ಘಟನೆ ನಡೆದಿದೆ. ಬಾಲಕನೊಬ್ಬ ಮನೆಯ ಮುಂದೆ ಆಟವಾಡುತ್ತಿದ್ದ ವೇಳೆಯಲ್ಲಿ ಬೀದಿ ನಾಯಿಗಳು ದಾಳಿ ಮಾಡಿದ್ದು, ಆತನನ್ನ ಅಟ್ಟಾಡಿಸಿ ಆತನ ಮುಖಕ್ಕೆ ಕಚ್ಚಿ ಗಂಭೀರ ಗಾಯಗೊಳಿಸಿದೆ.  ಗಾಯಗೊಂಡಿದ್ದ ಬಾಲಕ ಚಿಕಿತ್ಸೆ ಪಡೆದುಕೊಂಡು ಭಯಬೀತನಾಗಿ …

Read More

ಶಿವಮೊಗ್ಗದಲ್ಲಿ ಯಾವುದೇ ಎನ್‌ಕೌಂಟರ್‌ ನಡೆದಿಲ್ಲ,ಅದೆಲ್ಲಾ ಸುಳ್ಳು ಸುದ್ದಿ: ಎಸ್ಪಿ ಸ್ಪಷ್ಟನೆ|smg riots

ಶಿವಮೊಗ್ಗದಲ್ಲಿ ಯಾವುದೇ ಎನ್‌ಕೌಂಟರ್‌ ನಡೆದಿಲ್ಲ,ಅದೆಲ್ಲಾ ಸುಳ್ಳು ಸುದ್ದಿ: ಎಸ್ಪಿ ಸ್ಪಷ್ಟನೆ ಶಿವಮೊಗ್ಗ: ರಾಗಿಗುಡ್ಡದಲ್ಲಿ ಮಿಲಾದುನ್ನಬಿ ಮೆರವಣಿಗೆ ವೇಳೆ ಪೊಲೀಸ್ ಎನ್‌ಕೌಂಟರ್‌ನಲ್ಲಿ ಮುಸ್ಲಿಮ್ ಯುವಕ ಸಾವಿಗೀಡಾಗಿದ್ದಾನೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಅದು ಸುಳ್ಳು‘ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಮಂಗಳವಾರ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಅವರು, ‘ರಾಗಿಗುಡ್ಡದಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಯಾವುದೇ ರೀತಿಯ ಅಪಪ್ರಚಾರಕ್ಕೆ ಕಿವಿಗೊಡಬೇಡಿ. ಪೊಲೀಸರಿಂದ ಎನ್‌ಕೌಂಟರ್‌ ಎಂದು ಸುಳ್ಳು ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿದವರ…

Read More

ರಿಪ್ಪನ್‌ಪೇಟೆ : ಉತ್ತಮ ಶಿಕ್ಷಕಿಯರಿಗೆ ಗ್ರಾಪಂ ವತಿಯಿಂದ ಸನ್ಮಾನ|honour

ರಿಪ್ಪನ್‌ಪೇಟೆ : ಇಲ್ಲಿನ ಕೆಂಚನಾಲ ಗ್ರಾಪಂ ಸಭಾಂಗಣದಲ್ಲಿ ತಾಲೂಕ್ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದ ಇಬ್ಬರು ಶಿಕ್ಷಕಿಯರನ್ನು ಸನ್ಮಾನಿಸಿ ಗೌರವಿಸಲಾಯಿತು. ಕೆಂಚನಾಲ ಗ್ರಾಮ ಪಂಚಾಯತ್ ನಲ್ಲಿ ಸೋಮವಾರ ನಡೆದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ತಾಲೂಕ್ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಗ್ರಾಪಂ ವ್ಯಾಪ್ತಿಯ ಚಂದಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ತಾಜುನ್ ಬಿ ಹಾಗೂ ಕೆಂಚನಾಲ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಭಾಗ್ಯಲಕ್ಷ್ಮಿಯವರನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ಸಂಧರ್ಭದಲ್ಲಿ ಕೆಂಚನಾಲ ಗ್ರಾಪಂ ಅಧ್ಯಕ್ಷರಾದ ಉಬೇದುಲ್ಲಾ ಷರೀಫ್…

Read More

ಸಾಗರದಲ್ಲಿ ಈದ್ ಮೆರವಣಿಗೆ ವೇಳೆ ಆಕ್ಷೇಪಾರ್ಹ ಘೋಷಣೆ ಕೂಗಿದವರ ವಿರುದ್ಧ ಸೂಕ್ತ ಕ್ರಮಕ್ಕೆ ಹಿಂಜಾವೇ ಆಗ್ರಹ|sagara

ಈದ್ ಮೆರವಣಿಗೆ ವೇಳೆ ಘೋಷಣೆ ಕೂಗಿದವರ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹ ಸಾಗರ ಪಟ್ಟಣದಲ್ಲಿ ಸೋಮವಾರ ನಡೆದ ಈದ್ ಮಿಲಾದ್ ಮೆರವಣಿಗೆಯಲ್ಲಿ ಪ್ರಚೋದನಾಕಾರಿ ಘೋಷಣೆ ಕೂಗಿದವರ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ಒತ್ತಾಯಿಸಿ ಮಂಗಳವಾರ ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರ ಡಿವೈಎಸ್‌ಪಿ ಕಚೇರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ವೇದಿಕೆ ಅಧ್ಯಕ್ಷ ಕೆ.ಎಚ್.ಸುಧೀಂದ್ರ, ಪವಿತ್ರವಾದ ಈದ್ ಮಿಲಾದ್ ಹಬ್ಬದ ಅಂಗವಾಗಿ ಮುಸ್ಲೀಂ ಸಮುದಾಯ ಸೋಮವಾರ ಬೃಹತ್ ಮೆರವಣಿಗೆ ಹಮ್ಮಿಕೊಂಡಿತ್ತು. ಮೆರವಣಿಗೆಯಲ್ಲಿ ಹಿಂದೂ ಸಮುದಾಯದ ತೇಜೋವಧೆ ಮಾಡುವ…

Read More

ತೀರ್ಥಹಳ್ಳಿಯ ಛತ್ರಕೇರಿ ಗಣಪತಿ ವಿಸರ್ಜನೆಯಲ್ಲಿ ಹಿಂದೂ ಮುಸ್ಲಿಂ ಸೌಹಾರ್ದತೆ|tth

ತೀರ್ಥಹಳ್ಳಿಯಲ್ಲಿ ಹಿಂದೂ ಮುಸ್ಲಿಂ ಸೌಹಾರ್ದತೆ  ತೀರ್ಥಹಳ್ಳಿ : ಶಾಂತಿ,ಸೌಹಾರ್ಧತೆಗೆ ಹೆಸರಾದ ಊರು ಎಂದರೆ ತೀರ್ಥಹಳ್ಳಿ ಈ ಹೆಸರೇ ಎಲ್ಲರಿಗೂ ಅಚ್ಚು ಮೆಚ್ಚು. ಈ ನಡುವೆ – ತೀರ್ಥಹಳ್ಳಿಯಲ್ಲಿ ಹಿಂದೂ, ಮುಸ್ಲಿಂ ಬಾಂಧವರು ಸೌಹಾರ್ದತೆ ಮೆರೆದಿದ್ದಾರೆ. ಹೌದು.ಸೋಮವಾರ ಛತ್ರಕೆರಿ ಗಣಪತಿ ವಿಸರ್ಜನೆ ವೇಳೆ ವಿಸರ್ಜನಾ ಮೆರವಣಿಗೆಯಲ್ಲಿ ಪಾಲ್ಗೊಂಡ ಎಲ್ಲರಿಗೂ ಸೀಬಿನಕೆರೆ ಸರ್ಕಲ್ ನಲ್ಲಿ ಮುಸ್ಲಿಂ ಬಾಂಧವರು ಈದ್ ಮಿಲಾದ್ ಹಬ್ಬದ ಅಂಗವಾಗಿ ತಿಂಡಿ ಉಪಹಾರದ ವ್ಯವಸ್ಥೆ – ಮಾಡಿದ್ದು, ಎಲ್ಲರೂ ಸೌಹಾರ್ದಯುತವಾಗಿ ಹಬ್ಬದಲ್ಲಿ ಪಾಲ್ಗೊಂಡರು. ಗಣೇಶ ಹಬ್ಬ ಹಾಗೂ…

Read More

ಕಾಡುಕೋಣ ಭೇಟೆ – ಮಾಂಸ ತೆಗೆದು ಕಳೇಬರ ರಸ್ತೆಗೆ ಎಸೆದು ಹೋದ ಖದೀಮರು|wild

ಕಾಡುಕೋಣ ಭೇಟೆ – ಮಾಂಸ ತೆಗೆದು ಕಳೇಬರ ರಸ್ತೆಗೆ ಎಸೆದು ಹೋದ ಖದೀಮರು ಹೊಸನಗರ ತಾಲ್ಲೂಕಿನ ಸಂಪೆಕಟ್ಟೆ- ಅಡಗೋಡಿ ಹತ್ತಿರದ ಬಂಡಿಗೆ ಎಂಬಲ್ಲಿ ಕಾಡುಕೋಣವೊಂದನ್ನು ಬೇಟೆಯಾಡಿರುವ ಬಗ್ಗೆ ವರದಿಯಾಗಿದೆ. ಎಲ್ಲಿಯೋ ಕಾಡುಕೋಣವನ್ನು ಶಿಕಾರಿ ಮಾಡಿ, ಅದರ ಮಾಂಸ ತೆಗೆದುಕೊಂಡುಹೋಗಿ ಕಳೆಬರವನ್ನು ಸಂಪೆಕಟ್ಟೆಯ ಸಮೀಪದ ಬಿಸಾಡಿ ಹೋಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಕಾಡುಕೋಣದ ಎದೆ ಭಾಗ ಮತ್ತು ಮೂಳೆಯನ್ನ ರಸ್ತೆಯ ಪಕ್ಕ ಎಸೆದು ಹೋಗಲಾಗಿದ್ದು, ಸ್ಥಳಿಯರು ಇದನ್ನ ಗಮನಿಸಿ ಅರಣ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.  ಇನ್ನೂ ಸ್ಥಳೀಯರ…

Read More

ನಿಮ್ಮ ಕನಸಿನ ಮನೆಯನ್ನು ಬಹುಮಾನವಾಗಿ ಗೆಲ್ಲಬೇಕೆ!? ಹಾಗಿದ್ದರೆ ಇಲ್ಲಿದೆ ಸುವರ್ಣಾವಕಾಶ|bright bharath

🔴🔴ಜಾಹಿರಾತು🔴🔴 ಶಿವಮೊಗ್ಗ, ಚಿಕ್ಕಮಗಳೂರು, ಮಂಗಳೂರು ಪುತ್ತೂರು ಸುಳ್ಯ ಮಡಿಕೇರಿ ಭಾಗದಲ್ಲಿ ಪ್ರಪ್ರಥಮ ಬಾರಿಗೆ, ನಾಲ್ಕು ಮನೆಯ ವಿಶಿಷ್ಟ ಸ್ಕೀಮ್ ಯೋಜನೆಯೊಂದನ್ನು ಬ್ರೈಟ್ ಭಾರತ್ ಸಂಸ್ಥೆ ಆರಂಭಿಸಿದೆ. ಸೇರಿದ ಯಾವ ಗ್ರಾಹಕರಿಗೂ ನಷ್ಟವಿಲ್ಲದ ರೀತಿಯಲ್ಲಿ, ಪ್ರತೀ ತಿಂಗಳು ಕೂಡ ಲಕ್ಷಾಂತರ ಮೌಲ್ಯದ ಬಂಪರ್ ಬಹುಮಾನಗಳಿರುವ ವಿಭಿನ್ನ ಯೋಜನೆ ಇದಾಗಿದ್ದು. ಬಡವರ ಸ್ವಂತ ಮನೆಯ ಕನಸನ್ನು ಬ್ರೈಟ್ ಭಾರತ್‌ನ ಈ ಯೋಜನೆ ನನಸು ಮಾಡಲಿದೆ. ಬ್ರೈಟ್ ಭಾರತ್ ಸದಸ್ಯರಾಗುವುದು ಹೇಗೆ!? ಬ್ರೈಟ್ ಭಾರತ್ ಸದಸ್ಯರಾಗಲು ನಿಮ್ಮ ಹೆಸರು, ಸ್ಥಳ, ಮೊಬೈಲ್…

Read More

ಸಮವಸ್ತ್ರದಲ್ಲೇ ಟ್ರಾಫಿಕ್ ಪೊಲೀಸ್ ಆತ್ಮಹತ್ಯೆ – ಪತ್ನಿ ಅಗಲಿದ ಮೂರೇ ದಿನಕ್ಕೆ ಪತಿ ಸಾವು|smg

ಸಮವಸ್ತ್ರದಲ್ಲೇ ಟ್ರಾಫಿಕ್ ಪೊಲೀಸ್ ಆತ್ಮಹತ್ಯೆ – ಪತ್ನಿ ಅಗಲಿದ ಮೂರೇ ದಿನಕ್ಕೆ ಪತಿ ಸಾವು ಶಿವಮೊಗ್ಗ : ಭಾನುವಾರ ಕರ್ತವ್ಯ ಮುಗಿಸಿಕೊಂಡು ಮನೆಗೆ ಹಿಂದಿರುಗಿದ್ದ ಸಂಚಾರಿ ಪಶ್ಚಿಮ ಪೊಲೀಸ್  ಠಾಣೆಯ ಹೆಡೆ ಕಾನ್ಸ್ಟೇಬಲ್ ಜಯಪ್ಪ ಉಪ್ಪಾರ್ (43) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ವಿನೋಬ ನಗರದ ಮನೆಯಲ್ಲಿ ಜಯಪ್ಪನವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಾಣಾಗಿದ್ದಾರೆ. ಮೂರು ದಿನಗಳ ಹಿಂದೆ ಜಯಪ್ಪ ಅವರ ಪತ್ನಿ ಮೆದುಳು ಜ್ವರದಿಂದ ಸಾವನ್ನಪ್ಪಿದ್ದರು.ಪತ್ನಿಯ ಅಗಲಿಕೆಯಿಂದ ಜಯಪ್ಪ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಅಂದಾಜಿಸಲಾಗಿದೆ. ಜಯಪ್ಪನವರಿಗೆ…

Read More

ಶಿವಮೊಗ್ಗ ಕಲ್ಲು ತೂರಾಟ ಪ್ರಕರಣ – ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಮತ್ತು ಸಂಸದ ಬಿವೈಆರ್ ಹೇಳಿದ್ದೇನು..!!??|SMG

ಶಿವಮೊಗ್ಗ ಕಲ್ಲು ತೂರಾಟ ಪ್ರಕರಣ – ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಮತ್ತು ಸಂಸದ ಬಿವೈಆರ್ ಹೇಳಿದ್ದೇನು..!!?? ಸಮಾಜದಲ್ಲಿ ಶಾಂತಿಯನ್ನು ಕದಡುವವರು ಮತ್ತು ಪ್ರಚೋದನಕಾರಿ ಹೇಳಿಕೆ ನೀಡುವವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರು ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಮಧು ಬಂಗಾರಪ್ಪ ಹೇಳಿದರು. ಇಂದು ಬೆಂಗಳೂರಿನ ತಮ್ಮ ನಿವಾಸದಲ್ಲಿ ಶಿವಮೊಗ್ಗ ನಗರದಲ್ಲಿ ನಡೆದ ಗಲಭೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವರು ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು,…

Read More