Headlines

ಹೆದ್ದಾರಿಯಲ್ಲಿ ಮೂರು ಬೈಕ್ ಗಳ ನಡುವೆ ಡಿಕ್ಕಿ – ಮೂವರಿಗೆ ಗಂಭೀರ ಗಾಯ|accident

ಶಿವಮೊಗ್ಗದ ಆಯನೂರು ಸಮೀಪ ಮೂರು ಬೈಕ್​ಗಳ ನಡುವೆ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಓರ್ವ ಮಹಿಳೆ ಸೇರಿದಂತೆ ಮೂವರಿಗೆ ಗಾಯಗಳಾಗಿವೆ.  ಇವತ್ತು ಬೆಳಗ್ಗೆ ವೀರಣ್ಣನ ಬೆನವಳ್ಳಿ ಸಮೀಪ ಈ ಘಟನೆ ಸಂಭವಿಸಿದೆ. ಆಯನೂರು ಕಡೆಯಿಂದ ಶಿವಮೊಗ್ಗ ಕಡೆ ಬೈಕ್​ವೊಂದು ಬರುತ್ತಿತ್ತು. ಅದೇ ಸಂದರ್ಭದಲ್ಲಿ ಶಿವಮೊಗ್ಗದ ಕಡೆಯಿಂದ ಎರಡು ಬೈಕ್​ಗಳು ಆಯನೂರು ಕಡೆಗೆ ಹೋಗುತ್ತಿತ್ತು. ಈ ಮಧ್ಯೆ ಒಂದು ಬೈಕ್​ ಸವಾರ ಟರ್ನ್​ ತೆಗೆದುಕೊಂಡಿದ್ದಾನೆ ಎನ್ನಲಾಗಿದ್ದು, ಹಿಂದಿನಿಂದ ಬರುತ್ತಿದ್ದ ಬೈಕ್​ ಮುಂದಿನ ಬೈಕ್​ಗೆ ಡಿಕ್ಕಿ ಹೊಡೆದಿದೆ.  ಇದೇ ವೇಳೆ ಆಯನೂರು…

Read More

ರಿಪ್ಪನ್‌ಪೇಟೆ – ಡೆಂಗ್ಯೂ ಜ್ವರಕ್ಕೆ ನವವಿವಾಹಿತೆ ಬಲಿ|dengue

ರಿಪ್ಪನ್‌ಪೇಟೆ : ಡೆಂಗ್ಯೂ ಜ್ವರದಿಂದ ನವ ವಿವಾಹಿತೆಯೊಬ್ಬರು ಮೃತಪಟ್ಟಿರುವ ಘಟನೆ ಶಬರೀಶನಗರದಲ್ಲಿ ನಡೆದಿದೆ. ಮಧುರ (31) ಮೃತಪಟ್ಟ ಮಹಿಳೆ,ಕಳೆದ ಆರು ತಿಂಗಳ ಹಿಂದೆ ಶಬರೀಶನಗರದ ಮಂಜುನಾಥ್ ಎಂಬುವವರೊಂದಿಗೆ ವಿವಾಹವಾಗಿತ್ತು. ಕಳೆದೊಂದು ವಾರದಿಂದ ಡೆಂಗ್ಯೂ ಜ್ವರದ ಹಿನ್ನಲೆಯಲ್ಲಿ ಸಾಗರದ ಉಪವಿಭಾಗೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದ ಇವರು ನಿನ್ನೆ ಬೆಳಿಗ್ಗೆ ಡಿಸ್ಚಾರ್ಜ್ ಆಗಿ ತಾಯಿ ಮನೆಯಾದ ತಾಳಗುಪ್ಪಕ್ಕೆ ತೆರಳಿದ್ದಾರೆ ರಾತ್ರಿ ಸಮಯದಲ್ಲಿ ಮತ್ತೆ ಜ್ವರ ಕಾಣಿಸಿಕೊಂಡ ಹಿನ್ನಲೆಯಲ್ಲಿ ಸಾಗರ ಆಸ್ಪತ್ರೆಗೆ ಕರೆತರಲಾಗಿತ್ತು ಆದರೆ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಆಸ್ಪತ್ರೆಗೆ ಕರೆದೊಯ್ಯುವಂತೆ…

Read More

ತೀರ್ಥಹಳ್ಳಿ ತಾಲ್ಲೂಕಿನ ಅರಳಸುರಳಿಯಲ್ಲಿ ಬೆಂಕಿ ಅವಘಡ – ಮೂವರ ಸಜೀವ ದಹನ,ಓರ್ವ ಗಂಭೀರ|fire accident

ತೀರ್ಥಹಳ್ಳಿ ತಾಲ್ಲೂಕಿನ ಅರಳಸುರಳಿಯಲ್ಲಿ ಬೆಂಕಿ ಅವಘಡ – ಮೂವರ ಸಜೀವ ದಹನ,ಓರ್ವ ಗಂಭೀರ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಅರಳಸುರಳಿ ಸಮೀಪದ ಕೆಕೋಡ್ ಎಂಬಲ್ಲಿ ಒಂದೇ ಕುಟುಂಬದ ಮೂವರು ಸಜೀವ ದಹನವಾದ ಮನಕಲಕುವ ಘಟನೆಯೊಂದು ಇಂದು ಬೆಳ್ಳಂಬೆಳಿಗ್ಗೆ ನಡೆದಿದೆ.ಘಟನೆಯಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಮನೆಯ ಒಳಗಿನ ಕೋಣೆಯೊಳಗೆ ಕಟ್ಟಿಗೆಗಳನ್ನು ಹಾಕಿಕೊಂಡು ಬೆಂಕಿ ಹಚ್ಚಿಕೊಂಡಿರುವ ಶಂಕೆ ವ್ಯಕ್ತವಾಗಿದೆ.  ಈ ಬೆಂಕಿ ದುರಂತದಲ್ಲಿ ಕುಟುಂಬದ ಹಿರಿಯರಾದ ಅರ್ಚಕ ವೃತ್ತಿಯಲ್ಲಿದ್ದ ರಾಘವೇಂದ್ರ ಕೆಕೋಡ್ (65), ಪತ್ನಿ ನಾಗರತ್ನಾ (55),…

Read More

ಗಾಂಜಾ ಮಾರಾಟ: ಇಬ್ಬರಿಗೆ ಎರಡು ವರ್ಷ ಕಾರಾಗೃಹ ಶಿಕ್ಷೆ|court news

ಗಾಂಜಾ ಮಾರಾಟ: ಇಬ್ಬರಿಗೆ ಎರಡು ವರ್ಷ ಕಾರಾಗೃಹ ಶಿಕ್ಷೆ ಶಿವಮೊಗ್ಗ : ಗಾಂಜಾ ಮಾರಾಟದಲ್ಲಿ ತೊಡಗಿದ್ದ ಇಬ್ಬರಿಗೆ ಇಲ್ಲಿನ  ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಎರಡು ವರ್ಷ ಕಠಿಣ ಶಿಕ್ಷೆ, ₹10 ಸಾವಿರ ದಂಡ ವಿಧಿಸಿದೆ. ಶಿವಮೊಗ್ಗದ ಬಾಪೂಜಿ ನಗರದ ನಿವಾಸಿ ರಾಹಿಲ್ ಖಾನ್ (22) ಹಾಗೂ ವಿನೋಬ ನಗರದ ನಿವಾಸಿ ರೋಹನ್ (19) ಶಿಕ್ಷೆಗೊಳಗಾದವರು. ಇಬ್ಬರೂ 2020ರ ಸೆಪ್ಟೆಂಬರ್ 5ರಂದು ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಗುರುಪುರ ಗ್ರಾಮದಲ್ಲಿ ಮಾದಕ ವಸ್ತು ಗಾಂಜಾ…

Read More

ಜಿಲ್ಲಾ ಪತ್ರಕರ್ತರ ಸಂಘದ ಪ್ರಶಸ್ತಿಗೆ ಪ್ರಜಾವಾಣಿ ವರದಿಗಾರ ರವಿ ನಾಗರಕೊಡಿಗೆ ಆಯ್ಕೆ|hosanagara

ಜಿಲ್ಲಾ ಪತ್ರಕರ್ತರ ಸಂಘದ ಪ್ರಶಸ್ತಿಗೆ ಪ್ರಜಾವಾಣಿ ವರದಿಗಾರ ರವಿ ನಾಗರಕೊಡಿಗೆ ಆಯ್ಕೆ ಹೊಸನಗರ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಶಿವಮೊಗ್ಗ ಜಿಲ್ಲಾ ಘಟಕ ಕೊಡಮಾಡುವ ವಿಶೇಷ ಪ್ರಶಸ್ತಿಗೆ ಹೊಸನಗರ ತಾಲೂಕಿನ ಪ್ರಜಾವಾಣಿ ವರದಿಗಾರ ರವಿ ನಾಗರಕೊಡಿಗೆ ಭಾಜನರಾಗಿದ್ದಾರೆ. ಚುಟುಕು, ಹನಿಗವನ ರಚನೆ ಮೂಲಕ ವಿದ್ಯಾರ್ಥಿ ದಿಸೆಯಲ್ಲೇ ಸಾಹಿತ್ಯ ಆಸಕ್ತಿ ಹೊಂದಿದ್ದ ನಾರವಿ ಕನ್ನಡ ಜನಾಂತರಂಗದ ಮೂಲಕ ಪತ್ರಿಕಾ ವರದಿಗಾರರಾಗಿ ಕೆಲಸ ಆರಂಭಿಸಿದರು. ಬಳಿಕ ವಿಜಯಕರ್ನಾಟಕ, ವಿಜಯವಾಣಿಯ ಬಳಿಕ ಪ್ರಸ್ತುತ ಪ್ರಜಾವಾಣಿಯ ಹೊಸನಗರ ತಾಲೂಕು ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಹೊಸನಗರ…

Read More

ಶಾಸಕ ಬೇಳೂರು ಬಹಿರಂಗ ಕ್ಷಮೆಯಾಚನೆಗೆ ತಾಲೂಕ್ ವೀರಶೈವ ಲಿಂಗಾಯಿತ ಮಹಾಸಭಾ ಆಗ್ರಹ|rpet

ರಿಪ್ಪನ್‌ಪೇಟೆ : ಸಾಗರ ಕ್ಷೇತ್ರದ ಶಾಸಕರಾದ ಗೋಪಾಲಕೃಷ್ಣ ಬೇಳೂರು ರವರು ನಮ್ಮ ಸಮಾಜದ ಹಿರಿಯರಾದ ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಮತ್ತು ಅಖಿಲ ಭಾರತ ರಾಷ್ಟ್ರೀಯ ವೀರಶೈವ ಲಿಂಗಾಯಿತ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ ರವರ ಬಗ್ಗೆ ಹಗುರವಾಗಿ ಮಾತಾನಾಡಿರುವುದನ್ನ ಹೊಸನಗರ ತಾಲ್ಲೂಕು ಅಖಿಲಭಾರತ ವೀರಶೈವ ಮಹಾಸಭಾ ಘಟಕ ಖಂಡಿಸುತ್ತದೆ ಎಂದು ತಾಲ್ಲೂಕು ಘಟಕದ ಅಧ್ಯಕ್ಷರಾದ ಮಲ್ಲಿಕಾರ್ಜುನ್ ತಿಳಿಸಿದ್ದಾರೆ.  ಪಟ್ಟಣದ ಕುವೆಂಪು ಸಭಾಂಗಣದಲ್ಲಿ ಪತ್ರೀಕಾಗೋಷ್ಟಿಯಲ್ಲಿ ಮಾತನಾಡಿದ ಅವರು ಹೇಳಿಕೆಯಲ್ಲಿ ತಿಳಿಸಿದ ಬಿ.ಎಸ್.ಯಡಿಯೂರಪ್ಪನವರು ನಾಲ್ಕು ಬಾರಿ ಈ ರಾಜ್ಯದ…

Read More

ಉದ್ಯಮಶೀಲತೆಯಿಂದ ಮಹಿಳೆಯರು ಸಾವಲಂಬನೆಯ ಬದುಕನ್ನು ಕಂಡುಕೊಳ್ಳಬಹುದು :ಸಿ.ಎಲ್.ರಮೇಶ್|rpet

ಉದ್ಯಮಶೀಲತೆಯಿಂದ ಮಹಿಳೆಯರು ಸಾವಲಂಬನೆಯ ಬದುಕನ್ನು ಕಂಡುಕೊಳ್ಳಬಹುದು :ಸಿ.ಎಲ್.ರಮೇಶ್ ರಿಪ್ಪನ್ ಪೇಟೆ : ಮಹಿಳೆಯರ ಸ್ವಾವಲಂಬನೆಯ ಬದುಕಿಗೆ ಉದ್ಯಮಶೀಲತೆ ಅವಶ್ಯಕ, ಉದ್ಯಮ ಶೀಲತೆಯಿಂದ ಮಹಿಳೆಯರು ಸಾವಲಂಬನೆಯ  ಬದುಕನ್ನು ಕಂಡುಕೊಳ್ಳಬಹುದು.ಕೌಶಲ್ಯ ಅಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯದ ಬಗ್ಗೆ ಪ್ರತಿಯೊಬ್ಬ ಮಹಿಳೆ ಅರಿವನ್ನು ಹೊಂದಿರಬೇಕು ಎಂದು ಸಂಪನ್ಮೂಲ ವ್ಯಕ್ತಿ ರಮೇಶ್ ಸಿ.ಎಲ್. ಹೇಳಿದರು.  ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿನ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದ್ದ ಕೌಶಲ್ಯ ಅಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಹಾಗೂ ಮಲೆನಾಡು ಗ್ರಾಮೀಣ  ಅಭಿವೃದ್ಧಿ ಪ್ರತಿಷ್ಠಾನ ಬೆಳಂದೂರು ಇವರ ಸಂಯುಕ್ತ…

Read More

ಕೆಂಚನಾಲ : ಮಾರುತಿ ಓಮಿನಿ ಕಾರಿನಲ್ಲಿ ಅಕ್ರಮ ಜಾನುವಾರು ಸಾಗಣಿಕೆಗೆ ಯತ್ನ – ಎರಡು ಪ್ರತ್ಯೇಕ ಪ್ರಕರಣ ದಾಖಲು|rpet

ಮಾರುತಿ ಓಮಿನಿ ಕಾರಿನಲ್ಲಿ ಅಕ್ರಮ ಜಾನುವಾರು ಸಾಗಣಿಕೆಗೆ ಯತ್ನ ರಿಪ್ಪನ್‌ಪೇಟೆ: ಇಲ್ಲಿನ ಸಮೀಪದ ಕೆಂಚನಾಲ ಗ್ರಾಮದಲ್ಲಿ ಜಾನುವಾರುಗಳನ್ನು ಓಮಿನಿ ಕಾರಿನಲ್ಲಿ ಅಕ್ರಮ ಜಾನುವಾರು ಸಾಗಾಣಿಕೆ ಮಾಡುತ್ತಿದ್ದ ಪ್ರಕರಣದಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಾದ ಘಟನೆ ನಡೆದಿದೆ. ನಡೆದಿದ್ದೇನು..?? ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿರುವ ಅನುಮಾನದಿಂದ ಗ್ರಾಮಸ್ಥರು ವಾಹನವನ್ನು ತಡೆದು ತಪಾಸಣೆಗೆ ಮುಂದಾಗುತ್ತಿದ್ದಂತೆ ಕಾರಿನ ಚಾಲಕ ಮಹಮ್ಮದ್ ತಪ್ಪಿಸಿಕೊಂಡು ಪರಾರಿಯಾಗಿದ್ದು ಇನ್ನೋರ್ವ ಆರೋಪಿ ಅಸ್ಲಾಂ ಬೇಗ್ ಸಿಕ್ಕಿಬಿದ್ದಿದ್ದಾನೆ ಈ ಸಂಧರ್ಭದಲ್ಲಿ ಓಮಿನಿ ಕಾರಿನಲ್ಲಿ ಕೈಕಾಲು ಕಟ್ಟಿ ಎರಡು ಜಾನುವಾರುಗಳನ್ನು…

Read More

ರಿಪ್ಪನ್‌ಪೇಟೆ : ಚರ್ಚ್ ಬಳಿಯ ತಿರುವಿನಲ್ಲಿ ಟಿಂಬರ್ ಲಾರಿ ಪಲ್ಟಿ – ತಪ್ಪಿದ ಭಾರಿ ಅನಾಹುತ|accident

ರಿಪ್ಪನ್‌ಪೇಟೆ : ಚರ್ಚ್ ಬಳಿಯ ತಿರುವಿನಲ್ಲಿ ಟಿಂಬರ್ ಲಾರಿ ಪಲ್ಟಿ – ತಪ್ಪಿದ ಭಾರಿ ಅನಾಹುತ ರಿಪ್ಪನ್‌ಪೇಟೆ : ಇಲ್ಲಿನ ತೀರ್ಥಹಳ್ಳಿ ರಸ್ತೆಯ ಜ್ಯೋತಿ‌ ಮಾಂಗಲ್ಯ ಮಂದಿರದ ಬಳಿಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟಿಂಬರ್ ಲಾರಿಯೊಂದು ಪಲ್ಟಿಯಾದ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ತೀರ್ಥಹಳ್ಳಿ ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ಟಿಂಬರ್ ಹೊತ್ತು ಸಾಗುತ್ತಿದ್ದ ಲಾರಿ ಚಾಲಕನ ಅತೀ ವೇಗ ಹಾಗೂ ಅಜಾಗರೂಕತೆಯಿಂದ ತಿರುವಿನಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು ಲಾರಿಯಲ್ಲಿದ್ದ ಮರದ ತುಂಡುಗಳೆಲ್ಲ ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದೆ….

Read More

ಪರವಾನಗಿ ಇಲ್ಲದೆ ಹಸುಗಳ ರವಾನೆ. ದೂರು ದಾಖಲು|Sagara news

ಪರವಾನಗಿ ಇಲ್ಲದೆ ಹಸುಗಳ ರವಾನೆ. ದೂರು ದಾಖಲು ಸಾಗರ : ತಾಲೂಕಿನ ಹೆಗ್ಗೋಡು ಗ್ರಾಮದ ವಿಠ್ಠಲ್ ಪೈ ಅವರಿಗೆ ಸೇರಿದ ನಾಲ್ಕು ಹಸುಗಳನ್ನು ಮೂರಳ್ಳಿಯ ಶಿವರಾಜ್ ಮತ್ತು ನಾಗರಾಜ್ ಎಂಬುವವರು ಲಗೇಜ್ ಆಟೋದಲ್ಲಿ ಯಾವುದೇ ಪರವಾನಿಗೆ ಇಲ್ಲದೆ ತೆಗೆದುಕೊಂಡು ಬರುತ್ತಿದ್ದಾಗ ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು ಮುಂಡಿಗೇಸರ ವೃತ್ತದಲ್ಲಿ ತಡೆದು ನಿಲ್ಲಿಸಿದ ಘಟನೆ ಗುರುವಾರ ನಡೆದಿದೆ. ಶಿವರಾಜ್ ಮತ್ತು ನಾಗರಾಜ್ ಹಸುಗಳನ್ನು ಖರೀದಿಸಿ ಲಗೇಜ್ ಆಟೋದಲ್ಲಿ ಒಯ್ಯುತ್ತಿದ್ದರು. ಆದರೆ ಯಾವುದೇ ಪರವಾನಿಗೆ ಪಡೆದಿರಲಿಲ್ಲ. ಹಿಂದೂ ಜಾಗರಣಾ ವೇದಿಕೆ…

Read More