ಕನ್ನಡ ಚಲನಚಿತ್ರ ರಂಗದ ಪ್ರತಿಭಾವಂತ ನಟ ಹಾಗೂ ನಿರ್ದೇಶಕ ದಿ|| ಶಂಕರ್ ನಾಗ್ ರವರ 66 ನೇ ಹುಟ್ಟುಹಬ್ಬ ಕಾರ್ಯಕ್ರಮವನ್ನು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅರಸಾಳು ಗ್ರಾಮದ ಮಾಲ್ಗುಡಿ ಡೇಸ್ ಆವರಣದಲ್ಲಿ ಅದ್ದೂರಿಯಾಗಿ ಆಚರಿಸಲಾಯಿತು.
ಅರಸಾಳು ಮಾಲ್ಗುಡಿ ಡೇಸ್ ರೈಲ್ವೆ ನಿಲ್ದಾಣದ ಆವರಣದಲ್ಲಿ ಶಂಕರ್ ನಾಗ್ ಹುಟ್ಟು ಹಬ್ಬ ಆಚರಣೆ ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳು, ಕನ್ನಡಾಭಿಮಾನಿಗಳು ಹಾಗೂ ಶಂಕರ್ ನಾಗ್ ಅಭಿಮಾನಿಗಳು ಶಂಕರ್ ನಾಗ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ನಂತರ ಕೇಕ್ ಕತ್ತರಿಸಿ ಸಂಭ್ರಮಿಸಿದರು.
ಈ ಸಂಧರ್ಭದಲ್ಲಿ ಶಂಕರ್ ನಾಗ್ ಅಭಿಮಾನಿ ಸಂಘದ ಅಧ್ಯಕ್ಷ ಸತೀಶ್ ಹೆಗಡೆ,ಕುಮಧ್ವತಿ ಕನ್ನಡ ಸಂಘದ ಅಧ್ಯಕ್ಷ ಲೋಕೇಶ್ ಪ್ರಮುಖರಾದ ನಾಗೇಂದ್ರ , ಜಯರಾಜ್ ,ಪಿಯೂಸ್ ರೋಡ್ರಿಗಸ್ ದಿನೇಶ್ ,ಅರುಣ್ ಕುಮಾರ್ ,ಸಾಧಿಕ್ ,ಕಗ್ಗಲಿ ಲಿಂಗಪ್ಪ, ಡ್ಯಾನಿ ,ರಾಜೋಜಿರಾವ್ , ನಾಗರಾಜ್ ಟೈಲರ್ ಹಾಗೂ ಇನ್ನಿತರರಿದ್ದರು.
ಮಾಲ್ಗುಡಿ ಡೇಸ್ ಹಾಗೂ ಶಂಕರಣ್ಣ
ಸದಾ ಲವಲವಿಕೆಯ ವ್ಯಕ್ತಿಯಾಗಿದ್ದ ಶಂಕರ್ ನಾಗ್ ನಿರ್ದೇಶಿಸಿ, ನಟಿಸಿದ್ದ ಕಾದಂಬರಿಕಾರ ಆರ್ ಕೆ ನಾರಾಯಣ್ ಅವರ ಸಣ್ಣ ಕಥೆ ಮಾಲ್ಗುಡಿ ಡೇಸ್ ಟಿವಿ ಸೀರಿಯಲ್ ಮರೆಯಲು ಸಾಧ್ಯವಿದೆಯೇ? ಶಂಕರ್ ನಾಗ್ ಅವರು ದಣಿವಿಲ್ಲದೇ ದುಡಿಯುವ ವ್ಯಕ್ತಿಯಾಗಿದ್ದರು. ಯಾವುದೇ ಹಮ್ಮು ಬಿಮ್ಮುಗಳಿಲ್ಲದ ಸ್ನೇಹಜೀವಿಯಾಗಿದ್ದರು. ಜಾಗತೀಕರಣ ಕಾಲಿಟ್ಟ ವೇಳೆಯಲ್ಲಿಯೇ ಶಂಕರ್ ನಾಗ್ ರಂಗಭೂಮಿ ಮತ್ತು ಟೆಲಿವಿಷನ್ ಮಾಧ್ಯಮವನ್ನು ಸಮರ್ಪಕವಾಗಿ ಬಳಸಿಕೊಂಡಿದ್ದರು. ಅದಕ್ಕೊಂದು ಉತ್ತಮ ಉದಾಹರಣೆ ಮಾಲ್ಗುಡಿ ಡೇಸ್ ಧಾರಾವಾಹಿ!
ಅರಸಾಳಿನ ಮಾಲ್ಗುಡಿ ಡೇಸ್ ಗೂ ಶಂಕರಣ್ಣ ನಿಗೂ ಅವಿನಭಾವ ಸಂಬಂಧ , ಅಂದು ಭಾರತದಲ್ಲಿ ಇದ್ದ ಏಕೈಕ ಟೆಲಿವಿಷನ್ ದೂರದರ್ಶನ ಮಾತ್ರ. ಅಂತೂ ದೂರದರ್ಶನ ಕೊಟ್ಟ ಆಫರ್ ಅನ್ನು ಸ್ವೀಕರಿಸಿದ್ದ ಶಂಕರ್ ನಾಗ್ ಮಾಲ್ಗುಡಿ ಡೇಸ್ ಎಂಬ ಅತ್ಯದ್ಭುತ ಟಿವಿ ಧಾರಾವಾಹಿಯನ್ನು ನಿರ್ದೇಶಿಸಿದ್ದರು. ಈ ಸರಣಿಯಲ್ಲಿ ಡಾ.ವಿಷ್ಣುವರ್ಧನ್, ಅನಂತ್ ನಾಗ್ ಕೂಡಾ ನಟಿಸಿದ್ದರು. ಅಷ್ಟೇ ಅಲ್ಲ ಮಾಸ್ಟರ್ ಮಂಜುನಾಥ್ ಪಾತ್ರವಂತು ಇಂದಿಗೂ ಕಣ್ಣಿಗೆ ಕಟ್ಟುವಂತಿದೆ. ಮಾಲ್ಗುಡಿ ಡೇಸ್ ಚಿತ್ರೀಕರಣ ನಡೆದಿದ್ದು ಶಿವಮೊಗ್ಗ ಜಿಲ್ಲೆಯ ಅರಸಾಳು ,ಆಗುಂಬೆ ಹಾಗೂ ಇನ್ನಿತರರ ಪ್ರದೇಶಗಳಲ್ಲಿ. ಈ ಧಾರಾವಾಹಿ ಭಾರತೀಯ ಟೆಲಿವಿಷನ್ ನಲ್ಲಿ ಇತಿಹಾಸವನ್ನೇ ನಿರ್ಮಿಸಿದ್ದು ಶಂಕರ್ ನಾಗ್ ಅವರ ಪ್ರತಿಭೆಗೆ ಸಂದ ಗೌರವವಾಗಿದೆ.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್