ಚಿಕ್ಕಜೇನಿ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಯ ಅಪೂರ್ವ ಸಾಧನೆ -ಪರಿಸರ ಸ್ನೇಹಿ ಸೋಲಾರ್ ಹುಲ್ಲು ಕಟಾವ್ ಯಂತ್ರ ರಾಜ್ಯಮಟ್ಟಕ್ಕೆ ಆಯ್ಕೆ |Ripponpet

ಚಿಕ್ಕಜೇನಿ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಯ ಅಪೂರ್ವ ಸಾಧನೆ -ಪರಿಸರ ಸ್ನೇಹಿ ಸೋಲಾರ್ ಹುಲ್ಲು ಕಟಾವ್ ಯಂತ್ರ ರಾಜ್ಯಮಟ್ಟಕ್ಕೆ ಆಯ್ಕೆ
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಚಿಕ್ಕಜೇನಿ ಸರಕಾರಿ ಪ್ರೌಡಶಾಲೆಯ 9ನೇ ತರಗತಿಯ ವಿದ್ಯಾರ್ಥಿ ಅಭಿಷೇಕ್ ಸಿದ್ಧಪಡಿಸಿರುವ ಪರಿಸರ ಸ್ನೇಹಿ ಸೌರ ಆಧಾರಿತ ಹುಲ್ಲು ಕಟಾವ್ ಯಂತ್ರ ರಾಜ್ಯಮಟ್ಟದ ವಿಜ್ಞಾನ ವಸ್ತು ಪ್ರದರ್ಶನಕ್ಕೆ ಆಯ್ಕೆಯಾಗಿದೆ.
ಮಂಗಳವಾರ ಶಿವಮೊಗ್ಗದಲ್ಲಿ ನಡೆದ ಜಿಲ್ಲಾ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಅಭಿಷೇಕ್ ಸಿದ್ದಪಡಿಸಿರುವ ಸೋಲಾರ್ ಹುಲ್ಲು ಕಟಾವ್ ಯಂತ್ರ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ

ಮನೆಯಲ್ಲಿಯೇ ಲಭ್ಯವಿದ್ದ ಸೋಲಾರ್ ಪ್ಲೇಟ್,ಕಟ್ ಪೀಸ್ ಕಬ್ಬಿಣದ   ಸಹಾಯದಿಂದ ಒಂದು ಸಾವಿರ ರೂ. ಖರ್ಚಿನಲ್ಲಿ ಈ ಯಂತ್ರವನ್ನು ಸಿದ್ಧಪಡಿಸಲಾಗಿದ್ದು,ವಿಜ್ಞಾನದ ಶಿಕ್ಷಕ ಮಹೇಶ್ ವಿದ್ಯಾರ್ಥಿ ಅಭಿಷೇಕ್ ಗೆ ಮಾರ್ಗದರ್ಶನ ನೀಡಿದ್ದಾರೆ.ಮನೆಯ ಸುತ್ತಮುತ್ತ ಬೆಳೆದಂತಹ ಹುಲ್ಲುಗಳನ್ನು ಕಡಿಮೆ ವೆಚ್ಚದ ಈ ಪರಿಸರ ಸ್ನೇಹಿ ಸೋಲಾರ್ ಯಂತ್ರದ ಮೂಲಕ ಕಟಾವ್ ಕಾರ್ಯಕ್ಕೆ ಬಳಸಬಹುದಾಗಿದೆ.

ಕಾರಕ್ಕಿ ನಿವಾಸಿಗಳಾದ ಸತೀಶ್ ಹಾಗೂ ಆಶಾ ದಂಪತಿಗಳ ಪುತ್ರನಾದ ಅಭಿಷೇಕ್ 9ನೇ ತರಗತಿಯಲ್ಲಿ ವ್ಯಾಸಾಂಗ ಮಾಡುತಿದ್ದಾನೆ.

ಈ ಬಗ್ಗೆ ಮಾತನಾಡಿದ ವಿದ್ಯಾರ್ಥಿ ಅಭಿಷೇಕ್ ಇಂದಿನ ಪೀಳಿಗೆಯಲ್ಲಿ ಪ್ರಮುಖ ಸಮಸ್ಯೆಗಳೆಂದರೆ ಮಾಲಿನ್ಯ, ವಿದ್ಯುತ್ ಕಡಿತ,ದುಬಾರಿ ತೈಲ ಬೆಲೆ ಹೀಗಾಗಿ ಈ ಸಮಸ್ಯೆಗಳಿಂದ ಹೊರಬರಲು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವ ಸಾಧನದ ಬಗ್ಗೆ ಯೋಚಿಸಿದ್ದೇನೆ. ಆದ್ದರಿಂದ ನಾನು ಸೌರಚಾಲಿತ ಹುಲ್ಲು ಕಟ್ಟರ್ ಯಂತ್ರ ಅಭಿವೃದ್ಧಿ ಪಡಿಸುವ ಇಂಗಿತ ವ್ಯಕ್ತಪಡಿಸಿದಾಗ ಶಾಲೆಯ ಮುಖ್ಯೋಪಾಧ್ಯಾಯರಾದ ಶಿವಾಜಿ ಹಾಗೂ ವಿಜ್ಞಾನ ಶಿಕ್ಷಕರಾದ ಮಹೇಶ್ ಉತ್ತಮ ರೀತಿಯಲ್ಲಿ ಸ್ಪಂದಿಸಿ ,ಅಗತ್ಯ ಮಾರ್ಗದರ್ಶಗಳನ್ನು ನೀಡಿದ್ದರಿಂದ ಸೌರಶಕ್ತಿಯಿಂದ ಸಂಪೂರ್ಣ ಸ್ವಯಂಚಾಲಿತವಾಗಿ ಕಾರ್ಯನಿರ್ವಹಿಸುವ ಯಂತ್ರವನ್ನು ಅಭಿವೃದ್ಧಿ ಪಡೆಸಿದ್ದೇನೆ ಎಂದರು.

ಈ ಯಂತ್ರಕ್ಕೆ DC ಮೋಟಾರ್ ಮಾತ್ರ ನಾನು ಖರೀದಿ ಮಾಡಿದ್ದೇನೆ ಉಳಿದಂತೆ ಸೋಲಾರ್ ಪ್ಲೇಟ್ , ಕಬ್ಬಿಣ ,ಬ್ಯಾಟರಿ ಎಲ್ಲವೂ ಮನೆಯಲ್ಲಿ ಇರುವುದನ್ನೇ ಬಳಸಿದ್ದೇನೆ ಹೀಗಾಗಿ ಪ್ರತಿಯೊಬ್ಬರು ಇದನ್ನು ಮನೆಯಲ್ಲಿಯೇ ಅಭಿವೃದ್ಧಿ ಪಡಿಸಿಕೊಂಡು ತಮ್ಮ ಮನೆಯ ಸುತ್ತಮುತ್ತ ಪ್ರದೇಶಗಳನ್ನು ಸ್ವಚ್ಚವಾಗಿಟ್ಟುಕೊಳ್ಳಬಹುದು, ರಾಜ್ಯ ಮಟ್ಟದ ಸ್ಪರ್ಧೆಗೆ ಇದನ್ನು ಇನ್ನೂ ಹೆಚ್ಚಿನ ರೀತಿಯಲ್ಲಿ ಅಭಿವೃದ್ಧಿ ಪಡಿಸುತ್ತೇನೆ ಎಂದರು.

ಶಾಲೆಯ ವಿಜ್ಞಾನ ವಿಭಾಗದ ಶಿಕ್ಷಕ ಮಹೇಶ್ ಮಾತನಾಡಿ ವಿದ್ಯಾರ್ಥಿಗಳಲ್ಲಿ ಕಲಿಕೆಯ ಬಗ್ಗೆ ಆಸಕ್ತಿ ಇದ್ದರೆ ಎಂತಹದನ್ನು ಸಾಧಿಸಿ ತೋರಿಸಬಹುದು ಎನ್ನುವುದಕ್ಕೆ ನನ್ನ ವಿದ್ಯಾರ್ಥಿ ಅಭಿಷೇಕ್ ಸಾಕ್ಶಿಯಾಗಿದ್ದಾನೆ,ಜಿಲ್ಲಾ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಸೋಲಾರ್ ಹುಲ್ಲು ಕಟಾವ್ ಯಂತ್ರ ಎಲ್ಲಾ ತೀರ್ಪುಗಾರರ,ವೀಕ್ಷಕರ ಗಮನ ಸೆಳೆದು ಪ್ರಥಮ ಸ್ಥಾನ ಗಳಿಸಿದೆ. ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಈ ಯಂತ್ರವನ್ನು ಇನ್ನಷ್ಟೂ ಅಭಿವೃದ್ಧಿ ಪಡಿಸಲು ವಿದ್ಯಾರ್ಥಿ ಅಭಿಷೇಕ್ ಇಂಗಿತ ವ್ಯಕ್ತಪಡಿಸಿದ್ದು ಅಗತ್ಯ ಸಲಹೆ ನೀಡುತ್ತೇನೆ ಎಂದರು.

ಹಳ್ಳಿಗಾಡಿನ ಗ್ರಾಮೀಣ ಪ್ರತಿಭೆ ಅಭಿಷೇಕ್ ರವರಿಗೆ ಪೋಸ್ಟ್ ಮ್ಯಾನ್ ಸುದ್ದಿ ವಾಹಿನಿಯ ಪರವಾಗಿ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂಧರ್ಭದಲ್ಲಿ ಚಿಕ್ಕಜೇನಿ ಸರ್ಕರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಶಿವಾಜಿ ,ಕನ್ನಡ ಶಿಕ್ಷಕರಾದ ಎನ್ ಡಿ ಹೆಗಡೆ ,ಪೋಸ್ಟ್ ಮ್ಯಾನ್ ಸುದ್ದಿವಾಹಿನಿಯ ರಫ಼ಿ ರಿಪ್ಪನ್‌ಪೇಟೆ ,ಉಮೇಶ್ ಜಾಗದ್ದೆ , ಕೆ ಲೈವ್ ನ್ಯೂಸ್ ವರದಿಗಾರ ಆನಂದ್ ಮೆಣಸೆ , ವಿಜ್ಞಾನ ಶಿಕ್ಷಕ ಮಹೇಶ್ , ಎಸ್ ಡಿಎಂಸಿ ಅಧ್ಯಕ್ಷರಾದ ಉಮೇಶ್ ,ಆಶಾ ಹಾಗೂ ಇನ್ನಿತರರಿದ್ದರು.


ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in…

3 hours ago

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…

5 hours ago

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…

17 hours ago

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ – ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ - ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು…

17 hours ago

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ Former Education Minister Kimmane Ratnakar…

19 hours ago

ಪಟಗುಪ್ಪ ಸೇತುವೆ ಬಳಿಯ ಹಿನ್ನೀರಿನಲ್ಲಿ ಅನಾಮಧೇಯ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ

ಪಟಗುಪ್ಪ ಸೇತುವೆ ಬಳಿಯ ಹಿನ್ನೀರಿನಲ್ಲಿ ಅನಾಮಧೇಯ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ An unidentified man’s partially decomposed…

19 hours ago