ಸಾಗರ ತಾಲೂಕಿನ ತ್ಯಾಗರ್ತಿ ಸಮೀಪದ ಕೊರ್ಲಿಕೊಪ್ಪ ಮೂಲದ ಬಾಳೆಕಾಯಿ ಲೋಡ್ ಮಾಡುವ ವ್ಯಕ್ತಿಯೊಬ್ಬನ ಮೇಲೆ ಟಿಪ್ಪರ್ ಹರಿದು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಹೆಬ್ರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮೃತ ಶಿವರಾಜ್(38) ಸಾಗರ ತಾಲೂಕಿನ ಕೊರ್ಲಿ ಕೊಪ್ಪದ ನಿವಾಸಿಯಾಗಿದ್ದು. ಶಿವರಾಜ್ ಹಾಗೂ ಮಹೇಂದ್ರ ಎಂಬವರು ಪೆಟ್ರೋಲ್ ಪಂಪ್ ಹತ್ತಿರ ತಮ್ಮ ವಾಹನ ಇಟ್ಟು ಮಲಗಿದ್ದರು. ಈ ಸಂದರ್ಭದಲ್ಲಿಯೇ ಟಿಪ್ಪರ್ ಹರಿದಿದೆ. ಇದರಿಂದ ಶಿವರಾಜ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅದೃಷ್ಟವಶಾತ್ ಮಹೇಂದ್ರ ಅವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸಿಸಿಟಿವಿ ವೀಡಿಯೋ ಇಲ್ಲಿ ವೀಕ್ಷಿಸಿ👇
ಹೆಬ್ರಿ ಸಮೀಪದ ಸೋಮೇಶ್ವರದಲ್ಲಿರುವ ಪೆಟ್ರೋಲ್ ಬಂಕ್ ಬಳಿ ಈ ಘಟನೆ ಸಂಭವಿಸಿದೆ. ಮತ್ತು ಘಟನೆಯ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಸಾಗರದಿಂದ ಕೇರಳಕ್ಕೆ ಬಾಳೆಕಾಯಿ ಲೋಡ್ ಮಾಡಿಕೊಂಡು ಹೋಗುತಿದ್ದಾಗ ನಿದ್ದೆ ಮಂಪರು ಆವರಿಸಿದ್ದರಿಂದ ಸೋಮೇಶ್ವರ ಪೆಟ್ರೋಲ್ ಬಂಕ್ ಬಳಿ ಟಾಟಾ ಏಸ್ ವಾಹನವನ್ನು ನಿಲ್ಲಿಸಿ ಅಲ್ಲೇ ಮಲಗಿದ್ದಾರೆ ಈ ಸಂಧರ್ಭದಲ್ಲಿ ಪೆಟ್ರೋಲ್ ಬಂಕ್ ಗೆ ಇನ್ನೊಂದು ಟಿಪ್ಪರ್ ಇಂಧನ ತುಂಬಿಸಿಕೊಳ್ಳಲು ಬಂದಿದ್ದು ನಂತರ ವಾಪಸ್ ಹೋಗುವಾಗ ಟಿಪ್ಪರ್ ಚಾಲಕನಿಗೆ ಅಲ್ಲಿ ಮಲಗಿದ್ದ ಕಾರ್ಮಿಕನ ಇರುವಿಕೆ ಕಾಣಲಿಲ್ಲ. ಹೀಗಾಗಿ ಏಕಾಯೇಕಿ ಟಿಪ್ಪರ್ ತಿರುಗಿಸಿಕೊಂಡು ಆತ ಮುಂದಕ್ಕೆ ಹೋಗಿದ್ದಾನೆ.
ಪರಿಣಾಮ ಟಿಪ್ಪರ್ ಚಕ್ರಕ್ಕೆ ಸಿಲುಕಿ ಕಾರ್ಮಿಕ ಶಿವರಾಜ್ ಸ್ಥಳದಲ್ಲಿಯೇ ಪ್ರಾಣ ಬಿಟ್ಟಿದ್ದಾನೆ. ಬೆಳಗಿನ ಜಾವ ಈ ಘಟನೆ ನಡೆದಿದ್ದು, ಘಟನೆ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಇನ್ನೂ ಮೃತ ಕಾರ್ಮಿಕನನ್ನು ಸಾಗರ ತಾಲ್ಲೂಕಿನ ಕೊರ್ಲಿ ಕೊಪ್ಪ ನಿವಾಸಿ ಎಂದು ಗುರುತಿಸಲಾಗಿದೆ.
ಹೆಬ್ರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್