ರಿಪ್ಪನ್ಪೇಟೆ: ಪಟ್ಟಣದ ಕಸ್ತೂರಿ ಕನ್ನಡ ಸಂಘ ಹಾಗೂ ಡಾ.ಪುನಿತ್ ರಾಜ್ಕುಮಾರ್ ಅಭಿಮಾನಿ ಬಳಗ ಮಂಗಳವಾರ ಆಯೋಜಿಸಿದ್ದ 68ನೇ ಕರ್ನಾಟಕ ರಾಜ್ಯೋತ್ಸವದ ಅದ್ಧೂರಿ ಕನ್ನಡ ನುಡಿ ಸಂಭ್ರಮಕ್ಕೆ ಆಕರ್ಷಕ ಜಾನಪದ ಕಲಾ ಪ್ರಕಾರ ಗಳು ಭವ್ಯ ಮೆರವಣಿಗೆಗೆ ಮೆರಗು ನೀಡಿತ್ತು .
ಪಟ್ಟಣದ ಪಿಎಸ್ಐ ಪ್ರವೀಣ್ ಎಸ್ ಪಿ ತಾಯಿ ಭುವನೇಶ್ವರಿ ದೇವಿಯ ಭವ್ಯ ಶೋಭಾ ಯಾತ್ರಾ ಮೆರವಣಿಗೆಗೆ ಚಾಲನೆ ನೀಡಿದರು.
ಈ ಮೆರವಣಿಗೆಯಲ್ಲಿ ಬ್ರಹ್ಮಾವರದ ಅಂಕದಮನೆ ಜಾನಪದ ಕಲಾ ತಂಡದ ಕಂಗಿಲು ನೃತ್ಯ,ಉಡುಪಿಯ ಮಹಾಗಣಪತಿ ಚಂಡೆ ಬಳಗ,ಮಂಗಳೂರಿನ ಶಬರಿ ಚಂಡೆ ಬಳಗದವರ ಚಂಡೆ ನೃತ್ಯದೊಂದಿಗೆ ವಿವಿಧ ಶಾಲಾ ಕಾಲೇಜುಗಳ ವಾದ್ಯ ಘೋಷ್ ಮೆರವಣಿಗೆಗೆ ಸಾಥ್ ನೀಡಿದವು .
ತೆರೆದ ವಾಹನದಲ್ಲಿ ಅನಾವರಣಗೊಂಡ ಭಾರೀ ಗಾತ್ರದ ತಾಯಿ ಭುವನೇಶ್ವರಿ ಹಾಗೂ ಪುನೀತ್ ರಾಜ್ ಕುಮಾರ್ ಅವರ ಭಾವ ಚಿತ್ರ ಹಾಗೂ ರಾಷ್ಟ್ರ ಶಕ, ಪುರುಷರ ವಿವಿಧ ವೇಷ ಭೂಷಣಗಳ ಧಿರಿಸು ತೊಟ್ಟು ಸಂಭ್ರಮಿಸಿದ ಪುಟಾಣಿಗಳ ಸಾಲು , ಸಹಸ್ರಾರು ಸಂಖ್ಯೆಯ ಶಾಲಾ, ಕಾಲೇಜು ವಿದ್ಯಾರ್ಥಿಗಳ ಪಥಸಂಚಲನದ ಅಕರ್ಷಣೆಯ ಮೆರವಣಿಗೆ ದಾರಿಹೋಕರನ್ನು ತನ್ನತ್ತ ಸೆಳೆಯುವಂತೆ ಮಾಡಿತ್ತು.
ಕಸ್ತೂರಿ ಕನ್ನಡ ಸಂಘದ ಉಲ್ಲಾಸ್ ತೆಂಕೋಲ್,ಪ್ರಧಾನ ಕಾರ್ಯದರ್ಶಿ ಶ್ರೀಧರ್ , ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಧನಲಕ್ಷ್ಮಿ ಗಂಗಾಧರ್, ಮಾಜಿ ಅಧ್ಯಕ್ಷರಾದ ಅರ್ ಎ ಚಾಬುಸಾಬ್ , ಆನಂದ್ ಮೆಣಸೆ ,ಮುಖಂಡರಾದ ಆರ್ ಎನ್ ಮಂಜುನಾಥ್, ಆರ್ ರಾಘವೇಂದ್ರ, ಗ್ರಾಮ ಪಂಚಾಯ್ತಿ ಆಡಳಿತ ವರ್ಗ ಹಾಗೂ ಸದಸ್ಯರು , ನಾಡ ಕಚೇರಿ ಉಪ ತಹಸಿಲ್ದಾರ್ ಹುಚ್ಚರಾಯಪ್ಪ , ಪಿಎಸ್ ಐ ಮತ್ತು ಸಿಬ್ಬಂದಿ ವರ್ಗ ಸೇರಿದಂತೆ ಆಟೊ ಚಾಲಕರ ಮತ್ತು ಮಾಲಕರ ಸಂಘದ ಸದಸ್ಯರು , ವಿವಿಧ ಸಂಘ ಸಂಸ್ಥೆಗಳ ಮತ್ತು ಸರ್ಕಾರಿ ಹಾಗೂ ಖಾಸಗಿ ಶಾಲಾ ಕಾಲೇಜ್ ಶಿಕ್ಷಣ ಸಂಸ್ಥೆಯ ಪ್ರಮುಖರು ಕರ್ನಾಟಕ ರಾಜ್ಯೋತ್ಸವದ ಮೆರವಣಿಗೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್