ವಿಸಿ ನಾಲೆಗೆ ಉರುಳಿದ ಕಾರು – ಐವರು ಜಲಸಮಾಧಿ|accident

ವಿಸಿ ನಾಲೆಗೆ ಉರುಳಿದ ಕಾರು – ಐವರು ಜಲಸಮಾಧಿ

ಮಂಡ್ಯ ತಾಲ್ಲೂಕಿನ ಪಾಂಡವಪುರದಲ್ಲಿರುವ ವಿಸಿ ನಾಲೆಗೆ ಬಿದ್ದ ಕಾರೊಂದರಲ್ಲಿ ಶಿವಮೊಗ್ಗದ ಐವರು ಸಾವನ್ನಪ್ಪಿದ್ದಾರೆ.

ದುರಂತದಲ್ಲಿ ಮೃತಪಟ್ಟವರನ್ನು ಭದ್ರಾವತಿ ಮೂಲದ ಚಂದ್ರಪ್ಪ(61), ಕೃಷ್ಣಪ್ಪ (60), ಧನಂಜಯ್ಯ (55), ಬಾಬು ಮತ್ತು ಜಯಣ್ಣ ಎಂದು ಗುರುತಿಸಲಾಗಿದೆ. ಮೈಸೂರಿನಿಂದ ಭದ್ರಾವತಿಗೆ ವಾಪಸ್ ಹೋಗುವಾಗ ಘಟನೆ ನಡೆದಿದೆ‌. ಮೃತರು ಗುಂಗರಹಳ್ಳಿ, ನೊಣವಿನಕೆರೆ, ತಿಪಟೂರು ಮೂಲದರಾಗಿದ್ದು, ಭದ್ರಾವತಿಯಲ್ಲಿ ವಾಸವಾಗಿದ್ದರು ಎಂದು ತಿಳಿದುಬಂದಿದೆ.

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಚಂದ್ರಪ್ಪಗೆ ಸೇರಿದ (ಕೆಎ -14, ಎ 2457) ಬಿಳಿ ಬಣ್ಣದ ಕಾರು ವೇಗವಾಗಿ ಚಲಿಸುತ್ತಿದ್ದ ವೇಳೆ ತಿರುವಿನಲ್ಲಿ ತಡೆಗೋಡೆಗೆ ಡಿಕ್ಕಿ ಹೊಡೆದು ನಾಲೆಗೆ ಬಿದ್ದಿದೆ. ನಾಲೆಯಲ್ಲಿ ನೀರು ಹೆಚ್ಚಿನ ಪ್ರಮಾಣದಲ್ಲಿದ್ದರಿಂದ ಕಾರಿನಲ್ಲಿದ್ದವರು ಪ್ರಾಣಪಾಯದಿಂದ ಪಾರಾಗಲು ಸಾಧ್ಯವಾಗಿಲ್ಲ. ಕೆ ಆರ್ ಎಸ್ ಜಲಾಶಯದಿಂದ ನಾಲೆಗಳಿಗೆ ನಿನ್ನೆಯಿಂದ ನೀರು ಬಿಡುಗಡೆ ಮಾಡಿದ್ದರಿಂದ ನಾಲೆಯಲ್ಲಿ ಹೆಚ್ಚಿನ ಪ್ರಮಾಣದ ನೀರು ಹರಿಯುತ್ತಿತ್ತು.

ಘಟನೆ ವಿವರ:

ಐದು ಮಂದಿ ಪುರುಷರು ಪ್ರಯಾಣಿಸುತ್ತಿದ್ದ ಕಾರು ಸಾಯಂಕಾಲ 4.45ರ ಸುಮಾರಿಗೆ ತಡೆಗೋಡೆಗೆ ಡಿಕ್ಕಿ ಹೊಡೆದು ವಿಶ್ವೇಶ್ವರಯ್ಯ ನಾಲೆಯ ನೀರಿನೊಳಗೆ ಬಿದ್ದಿದೆ. ನಾಲೆಯಲ್ಲಿ ಕಾರು ಮುಳುಗುತ್ತಿದ್ದ ದೃಶ್ಯವನ್ನು ಸ್ಥಳೀಯರು ವೀಕ್ಷಿಸಿ ಜೋರಾಗಿ ಕಿರುಚಿ, ರಕ್ಷಿಸಲು ಬರುವಷ್ಟರಲ್ಲಿ ಕಾರು ನೀರಿನಲ್ಲಿ ಮುಳುಗಿದೆ. ವಿಷಯ ತಿಳಿದ ತಕ್ಷಣ ಪೊಲೀಸರು ಸ್ಥಳಕ್ಕೆ ಭೇಟಿ ಅಗ್ನಿಶಾಮಕ ದಳ ಹಾಗೂ ನುರಿತ ಈಜುಗಾರರ ಸಹಾಯದಿಂದ ನಾಲೆ ನೀರಿನೊಳಗೆ ಮುಳುಗಿದ್ದವರನ್ನು ಮತ್ತು ಕಾರು ಮೇಲೆತ್ತಲು ಕಾರ್ಯಾಚರಣೆ ನಡೆಸಿದರು. ಕ್ರೇನ್ ಮೂಲಕ 8.15ರ ಸುಮಾರಿಗೆ ಕಾರನ್ನು ಮೇಲಕ್ಕೆ ಎತ್ತಲಾಯಿತು. ಆಗ ಐವರ ಶವಗಳು ಕಾರಿನಲ್ಲಿರುವುದು ಕಂಡುಬಂದಿದೆ.


ನಾಲೆಯ ತಿರುವಿನಲ್ಲಿ ಎದುರುಗಡೆಯಿಂದ ಬಂದ ಬೈಕ್​ಗೆ ಡಿಕ್ಕಿ ಹೊಡೆಯಲು ತಪ್ಪಿಸುವ ಪ್ರಯತ್ನ ಮಾಡಿದ್ದರಿಂದ ಕಾರು ನಾಲೆಯೊಳಗೆ ಉರುಳಿ ಬಿದ್ದಿದೆ ಎಂದು ಹೇಳಲಾಗಿದೆ. ಜಿಲ್ಲಾಧಿಕಾರಿ ಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ಯತೀಶ್, ಉಪವಿಭಾಗಾಧಿಕಾರಿ ನಂದೀಶ್, ತಹಶೀಲ್ದಾರ್ ಸಂತೋಷ್ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದರು.
ವಿಶ್ವೇಶ್ವರಯ್ಯ ನಾಲೆ ಬನಘಟ್ಟ ಸೇತುವೆ ತುಂಬಾ ಹಳೇಯದಾಗಿದ್ದು, ತಕ್ಷಣ ತಿರುವು ಇರುವುದರಿಂದ ಅನೇಕ ಬಾರಿ ಅಪಘಾತ ಸಂಭವಿಸಿದೆ. ಕಳೆದ ಎರಡು ದಿನದ ಹಿಂದೆ ಲಾರಿ ಉರುಳಿ ಬಿದ್ದಿತ್ತು. ನಂತರ ಕಾರು ಉರುಳಿ ಬಿದ್ದಿದೆ. ಈ ಸೇತುವೆ ಬಳಿ ನಾಮಫಲಕ ಹಾಕಿಲ್ಲ, ತಕ್ಷಣವೇ ಸಂಬಂಧಪಟ್ಟವರು ಇತ್ತ ಗಮನಹರಿಸಬೇಕು ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ರಿಪ್ಪನ್‌ಪೇಟೆ ಪೊಲೀಸ್ ಜೀಪ್‌ಗೆ ಅಪರಿಚಿತ ವಾಹನ ಡಿಕ್ಕಿ: ಮರಕ್ಕೆ ಅಪ್ಪಳಿಸಿದ ಜೀಪ್, ತಪ್ಪಿದ ಭಾರಿ ಅನಾಹುತ

ರಿಪ್ಪನ್‌ಪೇಟೆ ಪೊಲೀಸ್ ಜೀಪ್‌ಗೆ ಅಪರಿಚಿತ ವಾಹನ ಡಿಕ್ಕಿ: ಮರಕ್ಕೆ ಅಪ್ಪಳಿಸಿದ ಜೀಪ್, ತಪ್ಪಿದ ಭಾರಿ ಅನಾಹುತ A major disaster…

3 hours ago

ತುಂಗಾ ನದಿಗೆ ಮೂವರು ಮಕ್ಕಳೊಂದಿಗೆ ಹಾರಿದ ತಾಯಿ : ಇಬ್ಬರು ಹೆಣ್ಣು ಮಕ್ಕಳಿಗಾಗಿ ಶೋಧ ಮುಂದುವರಿಕೆ

ತುಂಗಾ ನದಿಗೆ ಮೂವರು ಮಕ್ಕಳೊಂದಿಗೆ ಹಾರಿದ ತಾಯಿ : ಇಬ್ಬರು ಹೆಣ್ಣು ಮಕ್ಕಳಿಗಾಗಿ ಶೋಧ ಮುಂದುವರಿಕೆ Mother and three…

4 hours ago

ಹಿಟ್ ಅಂಡ್ ರನ್; ಬೈಕ್‌ಗೆ ಟಿಪ್ಪರ್ ಡಿಕ್ಕಿ – ಯುವತಿ ಸ್ಥಳದಲ್ಲಿಯೇ ಸಾವು

ಹಿಟ್ ಅಂಡ್ ರನ್; ಬೈಕ್‌ಗೆ ಟಿಪ್ಪರ್ ಡಿಕ್ಕಿ – ಯುವತಿ ಸ್ಥಳದಲ್ಲಿಯೇ ಸಾವು Young woman Archana Jain dies…

5 hours ago

ಕಾರ್ಮಿಕರ ಸಂಘಟನೆ ವಿರುದ್ಧದ ಆರೋಪಗಳು ನಿರಾಧಾರ: ಸುಂದರ್ ಬಾಬು

ಕಾರ್ಮಿಕರ ಸಂಘಟನೆ ವಿರುದ್ಧದ ಆರೋಪಗಳು ನಿರಾಧಾರ: ಸುಂದರ್ ಬಾಬು Ripponpete: Akhila Karnataka Building Workers Organization district president…

21 hours ago

ಅಂತರರಾಷ್ಟ್ರೀಯ ಕರಾಟೆ ಪಂದ್ಯಾವಳಿಯಲ್ಲಿ ರಿಪ್ಪನ್‌ಪೇಟೆಯ ಅಪೇಕ್ಷಾಗೆ ರನ್ನರ್‌ಅಪ್ ಸಾಧನೆ

ಅಂತರರಾಷ್ಟ್ರೀಯ ಕರಾಟೆ ಪಂದ್ಯಾವಳಿಯಲ್ಲಿ ರಿಪ್ಪನ್‌ಪೇಟೆಯ ಅಪೇಕ್ಷಾಗೆ ರನ್ನರ್‌ಅಪ್ ಸಾಧನೆ Ripponpete's Apeksha K. secured second place and runner-up…

1 day ago

ಆಗುಂಬೆಯಲ್ಲಿ ಮಕ್ಕಳೊಂದಿಗೆ ಗದ್ದೆಗಿಳಿದ ಪೊಲೀಸ್‌ ಅಧಿಕಾರಿ; ಹೂಟಿ–ನಾಟಿ ಕಲಿಸಿದ PSI ಶಿವನಗೌಡ ಪಾಟೀಲ್

ಆಗುಂಬೆಯಲ್ಲಿ ಮಕ್ಕಳೊಂದಿಗೆ ಗದ್ದೆಗಿಳಿದ ಪೊಲೀಸ್‌ ಅಧಿಕಾರಿ; ಹೂಟಿ–ನಾಟಿ ಕಲಿಸಿದ PSI ಶಿವನಗೌಡ ಪಾಟೀಲ್ Agumbe PSI Shivanagowda Patil joined…

1 day ago