ಹೊಸನಗರದ ನೂತನ ತಹಶೀಲ್ದಾರ್ ಆಗಿ ರಶ್ಮಿ ಹೆಚ್ ಜಿ ಅಧಿಕಾರ ಸ್ವೀಕಾರ|Hosanagara
ಹೊಸನಗರ : ಸುಮಾರು 4 ತಿಂಗಳುಗಳ ಕಾಲ ಹೊಸನಗರ ತಾಲ್ಲೂಕು ಕಛೇರಿಯ ತಹಶೀಲ್ದಾರ್ ಹುದ್ದೆ ಖಾಲಿಯಿದ್ದು ತಾಲ್ಲೂಕು ಕಛೇರಿಯ ಗ್ರೇಡ್2 ತಹಶೀಲ್ದಾರ್ ರಾಕೇಶ್ ಫ್ರಾನ್ಸಿಸ್ ಬ್ರಿಟ್ಟೋರವರು ಪ್ರಭಾರ ತಹಶೀಲ್ದಾರ್ ಆಗಿ ಕಾರ್ಯರ್ವಹಿಸುತ್ತಿದ್ದರು.
ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲ್ಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ ರಶ್ಮಿ ಹೆಚ್.ಜೆಯವರು ಅಲ್ಲಿಂದ ವರ್ಗಾವಣೆಗೊಂಡು ಹೊಸನಗರ ತಹಶೀಲ್ದಾರ್ರಾಗಿ ಇಂದು ಅಧಿಕಾರ ಸ್ವೀಕರಿಸಿದ್ದಾರೆ.
ಅಧಿಕಾರ ಸ್ವೀಕರಿಸಿ ತಹಶೀಲ್ದಾರ್ ರಶ್ಮಿ ಪತ್ರಕರ್ತರೊಂದಿಗೆ ಮಾತನಾಡಿ, ಹೊಸನಗರ ತಾಲ್ಲೂಕಿನಲ್ಲಿರುವ ಯಾವುದೇ ಸಮಸ್ಯೆಗಳಿದ್ದರೂ ಖುದ್ದು ಭೇಟಿ ಮಾಡಲು ಅವಕಾಶವಿದೆ. ನಿಮಗೆ ತಾಲ್ಲೂಕು ಕಛೇರಿಯಿಂದ ಆಗುತ್ತಿರುವ ಯಾವುದಾದರೂ ಸಮಸ್ಯೆಗಳಿದ್ದರೆ ಅಥವಾ ಸರ್ಕಾರದ ಸೌಲಭ್ಯದಿಂದ ವಂಚಿತರಾಗಿದ್ದರೆ ನಮ್ಮನ್ನೂ ಭೇಟಿ ಮಾಡಿ ನಿಮ್ಮ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಪಡೆಯಬಹುದೆಂದು ತಿಳಿಸಿದರು.
ನೂತನವಾಗಿ ಅಧಿಕಾರ ಸ್ವೀಕರಿಸಿದ ರಶ್ಮಿಯವರನ್ನು ಕಂದಾಯ ಇಲಾಖೆಯ ಸಿಬ್ಬಂದಿಗಳಾದ ಗ್ರೇಡ್ 2ತಹಶೀಲ್ದಾರ್ ರಾಕೇಶ್, ಶಿರಾಸ್ಥೆದಾರ್ ಮಂಜುನಾಥ ಕಟ್ಟೆ, ಚುನಾವಣೆ ಶಿರಾಸ್ಥೆದಾರ್ ಸುಧೀಂದ್ರಕುಮಾರ್, ಪ್ರಥಮ ದರ್ಜೆ ಗುಮಾಸ್ಥರಾದ ಚಿರಾಗ್, ರಾಘವೇಂದ್ರ, ಗಣೇಶ್, ಶಿವಪ್ಪ ಇನ್ನೂ ಮುಂತಾದ ನೌಕರ ವರ್ಗ ಪುಸ್ತಕ ನೀಡುವುದರ ಮೂಲಕ ಬರಮಾಡಿಕೊಂಡರು.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್