January 11, 2026

Accident | ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಗದ್ದೆಗೆ ಉರುಳಿದ ಖಾಸಗಿ ಬಸ್

Accident | ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಗದ್ದೆಗೆ ಉರುಳಿದ ಖಾಸಗಿ ಬಸ್

ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ಬೂರಿನ ಸಮೀಪದ ಅರಹತೊಳಲು ಕಲ್ಲಿಹಾಳಿನ ನಡುವೆ ಖಾಸಗೀ ಬಸ್‌ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಗದ್ದೆಯಲ್ಲಿ ಉರುಳಿ ಬಿದ್ದಿರುವ ಘಟನೆ ನಡೆದಿದೆ.

ಬಸ್‌ನಲ್ಲಿ ಆರು ಜನ ಪ್ರಯಾಣಿಕರು ಇದ್ದು ಯಾರಿಗೂ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಮಾರಶೆಟ್ಟಿಹಳ್ಳಿಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.


ಬಸ್ ಚಾಲಕ ಪೋನ್‌ನಲ್ಲಿ ಮಾತನಾಡಿಕೊಂಡು ಬಸ್ ಚಲಾಯಿಸುತ್ತಿದ್ದ, ಚಾಲಕನ ಅಜಾಗರೂಕತೆಯಿಂದ ಬಸ್ ಪಲ್ಟಿಯಾಯಿತು ಎಂದು ಬಸ್‌ ನಲ್ಲಿದ್ದ ಪ್ರಯಾಣಿಕರು ತಿಳಿಸಿದ್ದಾರೆ.

 ನಂತರ ಕ್ರೇನ್ ಮೂಲಕ ಬಸ್‌ನ್ನು ಮೇಲಕ್ಕೆ ಎತ್ತಲಾಯಿತು.

ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

About The Author

Leave a Reply

Your email address will not be published. Required fields are marked *