ಶಿವಮೊಗ್ಗ : ಯುವತಿಯನ್ನ ಅಡ್ಡ ಹಾಕಿ ಹಣಕೊಡ್ತೀನಿ ಆಸೆ ಪೂರೈಸುವಂತೆ ಕರೆದು ಅಸಭ್ಯವಾಗಿ ನಡೆದುಕೊಂಡ ಯುವಕನ ವಿರುದ್ಧ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸಹೋದರನಿಗೆ ಬುದ್ದಿ ಹೇಳು ಎಂದು ಹೇಳಿದ ಗ್ರಾಮಸ್ಥರಿಗೆ ಬೈದು ಅನುಚಿತವಾಗಿ ನಡೆದುಕೊಂಡ ಅಣ್ಣನ ವಿರುದ್ಧವೂ ದೂರು ದಾಖಲಾಗಿದೆ.
ಕೂಲಿ ಕೆಲಸ ಮಾಡಿಕೊಂಡಿರುವ 19 ವರ್ಷದ ಯುವತಿಗೆ ಭದ್ರಾವತಿಯ ಚಂದನಕೆರೆಯ ಯುವಕನೊಬ್ಬ ಹೋದ ಕಡೆಯಲ್ಲೆಲ್ಲ ಬೆನ್ನುಹತ್ತಿ ಹಣ ಕೊಡುತ್ತೇನೆ ಆಸೆ ಪೂರೈಸು ಎಂದು ದುಂಬಾಲು ಬಿದ್ದಿದ್ದನು. ಈತನನ್ನ ಗಮನಿಸಿದೆ ಯುವತಿ ಕೆಲಸಕ್ಕೆ ಹೋಗುತ್ತಿದ್ದಳು.
ನ.3 ರಂದು ಊಟ ಮುಗಿಸಿಕೊಂಡು ವಾಪಾಸ್ ಕೆಲಸಕ್ಕೆ ಹೋಗುವಾಗ ಯುವಕ ರಸ್ತೆ ಅಡ್ಡಗಟ್ಟಿ 2000 ರೂ. ಕೊಡುತ್ತೇನೆ ಬಾ ಆಸೆ ಪೂರೈಸು ಎಂದು ವೇಲುನಿಂದ ಕೈಕಾಲು ಕಟ್ಟಿದ್ದಾನೆ ಹಾಗೂ ಆತನ ಬಳಿಯಿದ್ದ ಟವಲನ್ನು ಬಾಯಿಗೆ ತುರಕಿ ಆಕೆಯನ್ನ ಎತ್ತಿಕೊಂಡು ತೋಟದಲ್ಲಿ ಹೋಗಲು ಯತ್ನಿಸಿದ್ದಾನೆ.
ಆತನಿಂದ ತಪ್ಪಿಸಿಕೊಂಡ ಯುವತಿ ಪಾರಾಗಿದ್ದಾಳೆ. ಇವತ್ತು ಬಜಾವ್ ಆಗಿದ್ದೀಯ ಇನ್ನೊಮ್ಮೆ ಸಿಕ್ಕರೆ ಬಲತ್ಕರಿಸುವೆ. ಈ ವಿಷಯವನ್ನ ಬೇರೆಯವರಿಗೆ ಹೇಳಿದರೆ ನಿನ್ನ ಜೀವ ಸಹಿತ ಬಿಡೊಲ್ಲ ಎಂದು ಬೆದರಿಕೆಹಾಕಿದ್ದಾನೆ.
ಇದರಿಂದ ಭಯವಾಗಿ ಈ ವಿಷಯವನ್ನು ಯಾರಿಗೂ ಹೇಳದ ಯುವತಿ. ನ.05 ರಂದು ಲ ರಾತ್ರಿ ವಿಷಯವನ್ನು ಮನೆಯವರಿಗೆ ತಿಳಿಸಿದ್ದಾಳೆ. ಯುವತಿಯ ಕೇರಿಯವರಿಗೆಲ್ಲಾ ವಿಷಯ ತಿಳಿದು ರಾತ್ರಿ ಸುಮಾರು 07-30 ರ ಸಮಯದಲ್ಲಿ ಎರಿಯಾದ ನಿವಾಸಿಗಳ ಜೊತೆ ಯುವಕನ ಮನೆಗೆ ತೆರಳಿ ಅಣ್ಣನಿಗೆ ವಿಷಯ ತಿಳಿಸಿ ಬುದ್ದಿ ಹೇಳಲು ಸೂಚಿಸಿದ್ದಾರೆ.
ನಿವಾಸಿಗಳ ಮಾತನ್ನ ನಿರ್ಲಕ್ಷಿಸಿದ ಯುವಕನ ಅಣ್ಣ ನನ್ನ ತಮ್ಮ ಯಾಕೆ ಹಾಗೆ ಮಾಡುತ್ತಾನೆ. ನೀವೇ ಸರಿಯಿಲ್ಲ ಹಾಗಾಗಿ ಅದೇನು ಮಾಡಿಕೊಳ್ತೀರೋ ಮಾಡಿಕೊಳ್ಳಿ ಎಂದು ಆರೋಪಿಸಿದ್ದಾನೆ. ಈ ವಿರುದ್ಧ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ರಿಪ್ಪನ್ಪೇಟೆ ಪಟ್ಟಣದ ನಾಲ್ಕು ರಸ್ತೆಗಳಿಗೆ ಬೆಳಕಿನ ಭಾಗ್ಯ: ಬೇಳೂರು ಗೋಪಾಲಕೃಷ್ಣರಿಂದ ಚಾಲನೆ “ಕೊಟ್ಟ ಮಾತಿನಂತೆ ವಿದ್ಯುತ್ ದೀಪ ಅಳವಡಿಸಿದ್ದೇನೆ” —…
ರಿಪ್ಪನ್ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ Ripponpete celebrates the 59th annual Ganapati festival with…
ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…
ರಿಪ್ಪನ್ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…
ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…