Crime News | ಕೆಲಸದಿಂದ ಹಿಂದಿರುಗುತಿದ್ದ ಯುವತಿಯ ಬಲತ್ಕಾರಕ್ಕೆ ಯತ್ನ – ಪ್ರಕರಣ ದಾಖಲು

ಶಿವಮೊಗ್ಗ : ಯುವತಿಯನ್ನ ಅಡ್ಡ ಹಾಕಿ ಹಣಕೊಡ್ತೀನಿ ಆಸೆ ಪೂರೈಸುವಂತೆ ಕರೆದು ಅಸಭ್ಯವಾಗಿ ನಡೆದುಕೊಂಡ ಯುವಕನ ವಿರುದ್ಧ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸಹೋದರನಿಗೆ ಬುದ್ದಿ ಹೇಳು ಎಂದು ಹೇಳಿದ ಗ್ರಾಮಸ್ಥರಿಗೆ ಬೈದು ಅನುಚಿತವಾಗಿ ನಡೆದುಕೊಂಡ ಅಣ್ಣನ ವಿರುದ್ಧವೂ ದೂರು ದಾಖಲಾಗಿದೆ.

ಕೂಲಿ ಕೆಲಸ ಮಾಡಿಕೊಂಡಿರುವ 19 ವರ್ಷದ ಯುವತಿಗೆ ಭದ್ರಾವತಿಯ  ಚಂದನಕೆರೆಯ ಯುವಕನೊಬ್ಬ ಹೋದ ಕಡೆಯಲ್ಲೆಲ್ಲ ಬೆನ್ನುಹತ್ತಿ ಹಣ ಕೊಡುತ್ತೇನೆ ಆಸೆ ಪೂರೈಸು ಎಂದು ದುಂಬಾಲು ಬಿದ್ದಿದ್ದನು. ಈತನನ್ನ ಗಮನಿಸಿದೆ ಯುವತಿ ಕೆಲಸಕ್ಕೆ ಹೋಗುತ್ತಿದ್ದಳು.

ನ.3 ರಂದು ಊಟ ಮುಗಿಸಿಕೊಂಡು ವಾಪಾಸ್ ಕೆಲಸಕ್ಕೆ ಹೋಗುವಾಗ ಯುವಕ ರಸ್ತೆ ಅಡ್ಡಗಟ್ಟಿ 2000 ರೂ. ಕೊಡುತ್ತೇನೆ ಬಾ ಆಸೆ ಪೂರೈಸು ಎಂದು ವೇಲುನಿಂದ ಕೈಕಾಲು ಕಟ್ಟಿದ್ದಾನೆ ಹಾಗೂ ಆತನ ಬಳಿಯಿದ್ದ ಟವಲನ್ನು ಬಾಯಿಗೆ ತುರಕಿ ಆಕೆಯನ್ನ ಎತ್ತಿಕೊಂಡು ತೋಟದಲ್ಲಿ ಹೋಗಲು ಯತ್ನಿಸಿದ್ದಾನೆ.

ಆತನಿಂದ ತಪ್ಪಿಸಿಕೊಂಡ ಯುವತಿ ಪಾರಾಗಿದ್ದಾಳೆ. ಇವತ್ತು ಬಜಾವ್ ಆಗಿದ್ದೀಯ ಇನ್ನೊಮ್ಮೆ ಸಿಕ್ಕರೆ ಬಲತ್ಕರಿಸುವೆ. ಈ ವಿಷಯವನ್ನ ಬೇರೆಯವರಿಗೆ ಹೇಳಿದರೆ ನಿನ್ನ ಜೀವ ಸಹಿತ ಬಿಡೊಲ್ಲ ಎಂದು ಬೆದರಿಕೆಹಾಕಿದ್ದಾನೆ.

ಇದರಿಂದ ಭಯವಾಗಿ  ಈ ವಿಷಯವನ್ನು ಯಾರಿಗೂ ಹೇಳದ ಯುವತಿ. ನ.05 ರಂದು  ಲ ರಾತ್ರಿ ವಿಷಯವನ್ನು ಮನೆಯವರಿಗೆ ತಿಳಿಸಿದ್ದಾಳೆ. ಯುವತಿಯ ಕೇರಿಯವರಿಗೆಲ್ಲಾ ವಿಷಯ ತಿಳಿದು ರಾತ್ರಿ ಸುಮಾರು 07-30 ರ ಸಮಯದಲ್ಲಿ ಎರಿಯಾದ ನಿವಾಸಿಗಳ ಜೊತೆ ಯುವಕನ ಮನೆಗೆ ತೆರಳಿ ಅಣ್ಣನಿಗೆ ವಿಷಯ ತಿಳಿಸಿ ಬುದ್ದಿ ಹೇಳಲು ಸೂಚಿಸಿದ್ದಾರೆ.‌

ನಿವಾಸಿಗಳ ಮಾತನ್ನ ನಿರ್ಲಕ್ಷಿಸಿದ ಯುವಕನ‌ ಅಣ್ಣ ನನ್ನ‌ ತಮ್ಮ ಯಾಕೆ ಹಾಗೆ ಮಾಡುತ್ತಾನೆ. ನೀವೇ ಸರಿಯಿಲ್ಲ ಹಾಗಾಗಿ ಅದೇನು ಮಾಡಿಕೊಳ್ತೀರೋ ಮಾಡಿಕೊಳ್ಳಿ ಎಂದು ಆರೋಪಿಸಿದ್ದಾನೆ. ಈ ವಿರುದ್ಧ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ರಿಪ್ಪನ್‌ಪೇಟೆ ಪೊಲೀಸ್ ಜೀಪ್‌ಗೆ ಅಪರಿಚಿತ ವಾಹನ ಡಿಕ್ಕಿ: ಮರಕ್ಕೆ ಅಪ್ಪಳಿಸಿದ ಜೀಪ್, ತಪ್ಪಿದ ಭಾರಿ ಅನಾಹುತ

ರಿಪ್ಪನ್‌ಪೇಟೆ ಪೊಲೀಸ್ ಜೀಪ್‌ಗೆ ಅಪರಿಚಿತ ವಾಹನ ಡಿಕ್ಕಿ: ಮರಕ್ಕೆ ಅಪ್ಪಳಿಸಿದ ಜೀಪ್, ತಪ್ಪಿದ ಭಾರಿ ಅನಾಹುತ A major disaster…

4 hours ago

ತುಂಗಾ ನದಿಗೆ ಮೂವರು ಮಕ್ಕಳೊಂದಿಗೆ ಹಾರಿದ ತಾಯಿ : ಇಬ್ಬರು ಹೆಣ್ಣು ಮಕ್ಕಳಿಗಾಗಿ ಶೋಧ ಮುಂದುವರಿಕೆ

ತುಂಗಾ ನದಿಗೆ ಮೂವರು ಮಕ್ಕಳೊಂದಿಗೆ ಹಾರಿದ ತಾಯಿ : ಇಬ್ಬರು ಹೆಣ್ಣು ಮಕ್ಕಳಿಗಾಗಿ ಶೋಧ ಮುಂದುವರಿಕೆ Mother and three…

5 hours ago

ಹಿಟ್ ಅಂಡ್ ರನ್; ಬೈಕ್‌ಗೆ ಟಿಪ್ಪರ್ ಡಿಕ್ಕಿ – ಯುವತಿ ಸ್ಥಳದಲ್ಲಿಯೇ ಸಾವು

ಹಿಟ್ ಅಂಡ್ ರನ್; ಬೈಕ್‌ಗೆ ಟಿಪ್ಪರ್ ಡಿಕ್ಕಿ – ಯುವತಿ ಸ್ಥಳದಲ್ಲಿಯೇ ಸಾವು Young woman Archana Jain dies…

5 hours ago

ಕಾರ್ಮಿಕರ ಸಂಘಟನೆ ವಿರುದ್ಧದ ಆರೋಪಗಳು ನಿರಾಧಾರ: ಸುಂದರ್ ಬಾಬು

ಕಾರ್ಮಿಕರ ಸಂಘಟನೆ ವಿರುದ್ಧದ ಆರೋಪಗಳು ನಿರಾಧಾರ: ಸುಂದರ್ ಬಾಬು Ripponpete: Akhila Karnataka Building Workers Organization district president…

22 hours ago

ಅಂತರರಾಷ್ಟ್ರೀಯ ಕರಾಟೆ ಪಂದ್ಯಾವಳಿಯಲ್ಲಿ ರಿಪ್ಪನ್‌ಪೇಟೆಯ ಅಪೇಕ್ಷಾಗೆ ರನ್ನರ್‌ಅಪ್ ಸಾಧನೆ

ಅಂತರರಾಷ್ಟ್ರೀಯ ಕರಾಟೆ ಪಂದ್ಯಾವಳಿಯಲ್ಲಿ ರಿಪ್ಪನ್‌ಪೇಟೆಯ ಅಪೇಕ್ಷಾಗೆ ರನ್ನರ್‌ಅಪ್ ಸಾಧನೆ Ripponpete's Apeksha K. secured second place and runner-up…

1 day ago

ಆಗುಂಬೆಯಲ್ಲಿ ಮಕ್ಕಳೊಂದಿಗೆ ಗದ್ದೆಗಿಳಿದ ಪೊಲೀಸ್‌ ಅಧಿಕಾರಿ; ಹೂಟಿ–ನಾಟಿ ಕಲಿಸಿದ PSI ಶಿವನಗೌಡ ಪಾಟೀಲ್

ಆಗುಂಬೆಯಲ್ಲಿ ಮಕ್ಕಳೊಂದಿಗೆ ಗದ್ದೆಗಿಳಿದ ಪೊಲೀಸ್‌ ಅಧಿಕಾರಿ; ಹೂಟಿ–ನಾಟಿ ಕಲಿಸಿದ PSI ಶಿವನಗೌಡ ಪಾಟೀಲ್ Agumbe PSI Shivanagowda Patil joined…

1 day ago