ರಿಪ್ಪನ್ಪೇಟೆ:-ಭೂಮಿಯು ಸ್ವರ್ಗ ಸಮಾನವಾಗಿದ್ದು ವ್ಯವಸಾಯದ ಮೂಲಕ ಬೆಳೆಯುವಆಹಾರಧಾನ್ಯ, ತರಕಾರಿ, ಹಣ್ಣು ಹಂಪಲು, ಹೂವು, ‘ದಿವ್ಯ ಪ್ರಸಾದ’ ಎಂಬ ಭಾವನೆ ಮೂಡಬೇಕು. ಎಂದು ಹೊಂಬುಜ ಜೈನಮಠದ ಜಗದ್ಗುರು ಡಾ.ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರು ಹೇಳಿದರು.
ರಿಪ್ಪನ್ಪೇಟೆ ಸಮೀಪದ ಹೊಂಬುಜ ಜೈನಮಠದಲ್ಲಿ “ದೀಪಾವಳಿಯ ಹಬ್ಬದಲ್ಲಿ ಹೊಸತು ಬೆಳಸಿಕೊಂಡು ಬರುವ ಹಬ್ಬವೇ “ವರ್ಷದಡಕು’’ಯನ್ನು ಇಂದು ಜೀವನಾವಶ್ಯಕ ಆರೋಗ್ಯ ಸಂರಕ್ಷಣೆ-ಪೋಷಣೆಗಾಗಿ ಬೇಸಾಯ ವೃತ್ತಿಯಾದರೂ ಕೃಷಿ ಮೂಲವೇ ಆರ್ಥಿಕ, ಆರೋಗ್ಯ, ಅಕ್ಷರ, ಆಶ್ರಯ ಪಾಲನೆಯ ಕೇಂದ್ರವಾಗಿದೆ ಶ್ರೀಕ್ಷೇತ್ರದ ಭತ್ತದ ಕೊಯ್ಲು ಆರಂಭದ ಮುಹೂರ್ತ ಸಂದರ್ಭದಲ್ಲಿ ಹೇಳಿದರು. ಭತ್ತ ಬೇಸಾಯವು ಅಂತರ್ಜಲ ಮಟ್ಟ ಸುಧಾರಣೆ ಮಾಡುತ್ತಲೇ ಮಾನವ ಸಮಾಜಕ್ಕೆ ಅನ್ನ ನೀಡುವ ಭೂಮಿಯನ್ನು ‘ಚಿನ್ನ ಬಟ್ಟಲು’ ಎಂಬಂತೆ ಕಾಪಾಡೋಣ ಎಂದು ಶುಭಾಶೀರ್ವಾದ ನೀಡಿದರು.
ಶ್ರೀಕ್ಷೇತ್ರದ ಪುರೋಹಿತ ಪದ್ಮರಾಜ ಇಂದ್ರರವರು ಸಾಂಪ್ರದಾಯಿಕ ಪೂಜೆ ನೆರವೇರಿಸಿ, ಭತ್ತದ ತೆನೆಯನ್ನು ಪಲ್ಲಕ್ಕಿಯಲ್ಲಿ ಶ್ರೀ ಪಾರ್ಶ್ವನಾಥ ಸ್ವಾಮಿ, ಜಗನ್ಮಾತೆ ಶ್ರೀ ಪದ್ಮಾವತಿ ದೇವಿ ಸನ್ನಿಧಿಗೆ ತರಲಾಯಿತು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್