06 ವರ್ಷ ಪ್ರೀತಿಸಿ ಕೈಕೊಟ್ಟ ಯುವಕ – ಮನನೊಂದ ಯುವತಿ ಆತ್ಮಹತ್ಯೆಗೆ ಯತ್ನ
ಪ್ರೀತಿಸಿದ್ದ ಯುವಕ ನಂಬಿಸಿ ಕೈಬಿಟ್ಟ ಕಾರಣ ಯುವತಿಯೊಬ್ಬಳು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರದಲ್ಲಿ ನಡೆದಿದೆ.
ಮೇಲ್ನೋಟಕ್ಕೆ ಇದೊಂದು ಲವ್-ಸೆಕ್ಸ್-ದೋಖಾ ಪ್ರಕರಣದಂತೆ ಕಂಡುಬಂದಿದ್ದು ಯುವತಿ ತನಗೆ ವಂಚಿಸಿದ ಯುವಕನಿಗೆ ಹಾಗೂ ಆತನ ಭಾವನಿಗೆ ಶಿಕ್ಷೆ ವಿಧಿಸಬೇಕು ಎಂದು ವೀಡಿಯೋ ಮೂಲಕ ಹೇಳಿ ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ.
ಹೊಸನಗರ ಮೂಲದ ಸುಧಾ (27) ಹಾಗೂ ಶ್ರೀಕಾಂತ್ (30) ಇಬ್ಬರು ಪರಸ್ಪರ 06 ವರ್ಷಗಳಿಂದ ಪ್ರೇಮಪಾಶದಲ್ಲಿ ಸಿಕ್ಕಿದ್ದರು.ತಾನು ಸುಧಾ ಳನ್ನು ವಿವಾಹವಾಗುವುದಾಗಿ ನಂಬಿಸಿದ್ದ ಶ್ರೀಕಾಂತ್ ಆಕೆಯೊಡನೆ ದೈಹಿಕ ಸಂಪರ್ಕ ಸಹ ಮಾಡಿದ್ದ. ಯುವತಿ ಸುಧಾ ಸಹ ತನ್ನ ಪ್ರೇಮಿಯನ್ನು ಬಹಳವೇ ನಂಬಿದ್ದು ಅದಕ್ಕೆ ಒಪ್ಪಿಗೆ ಸೂಚಿಸಿದ್ದಳು. ಆದರೆ ಈಗ ನೀನು ಕೆಳ ಜಾತಿಯವಳೆಂದು ಎಂದು ಹೇಳಿ ಸುಧಾಳನ್ನು ಮದುವೆಯಾಗಲು ಯುವಕ ನಿರಾಕರಿಸಿದ್ದಾನೆ.ಹಾಗಾಗಿ ಯುವತಿ
ಯುವತಿಯ ದೂರಿನಲ್ಲೇನಿದೆ..??
ಹೊಸನಗರದಲ್ಲಿರುವ ಯುವತಿಯ ಮನೆಗೆ ಶ್ರೀಕಾಂತ ನಿರಂತರವಾಗಿ ಬಂದು ಹೋಗುತ್ತಿದ್ದು ಶ್ರೀಕಾಂತನು ತನ್ನ ತಂಗಿಯ ಮದುವೆಯಾದ ನಂತರ ನಿನ್ನನ್ನು ಮಧುವೆಯಾಗುತ್ತೇನೆ ಎಂದು ಭರವಸೆ ಕೊಟ್ಟಿದ್ದರಿಂದ ಅವನು ಬಂದಾಗ ದೈಹಿಕ ಸಂಪರ್ಕ ಹೊಂದಲು ಸಹಕರಿಸಿರುತ್ತಾರೆ, ನಂತರ ಮೇ 31 ರಂದು ಶ್ರೀಕಾಂತನು ಯುವತಿಯ ಮನೆಗೆ ಬಂದು ನೀನು ಕೀಳು ಜಾತಿಯವಳು ನಮ್ಮ ಮನೆಯ ದೇವರಿಗೆ ಆಗುವುದಿಲ್ಲ ಎಂದು ದೈಹಿಕವಾಗಿ ಹಲ್ಲೆ ಮಾಡಿ ಹೋಗಿರುತ್ತಾನೆ.ಅಂದಿನಿಂದ ಶ್ರೀಕಾಂತ್ ಪೋನ್ ಕರೆಯನ್ನು ಸ್ವೀಕರಿಸುತ್ತಿರಲಿಲ್ಲ.
ಈ ವಿಚಾರವಾಗಿ ಮಹಿಳಾ ಸಾಂತ್ವಾನ ಕೇಂದ್ರ ಮತ್ತು ಹೊಸನಗರ ಪೊಲೀಸ್ ಠಾಣೆಯಲ್ಲಿ ದಿನಾಂಕ 06/11/2023 ರಂದು ದೂರು ದಾಖಲಾಗಿದ್ದು ಆ ದಿನ ಯುವತಿ ಮತ್ತು ಶ್ರೀಕಾಂತನ ಕುಟುಂಬದವರೊಂದಿಗೆ ಚರ್ಚಿಸುವುದಾಗಿ ತೀರ್ಮಾನಿಸಿಕೊಂಡಿರುತ್ತಾರೆ ಅದರಂತೆ ಭಾನುವಾರ ಮಧ್ಯಾಹ್ನ 03-45 ಗಂಟೆಗೆ ಹೊಸನಗರದ ರಾಘವೇಂದ್ರ ಸ್ವಾಮಿ ಮಠದಲ್ಲಿ ಮಾತುಕತೆ ನಡೆದಾಗ ಶ್ರೀಕಾಂತ್ ಹಾಗೂ ಆತನ ಭಾವ ಹಾಗೂ ಸಂಬಂಧಿಕರು ಯುವತಿಗೆ ಮನಸ್ಸೋ ಇಚ್ಚೆ ನಿಂದಿಸಿ ಹೋಗಿರುತ್ತಾರೆ.
ಈ ಘಟನೆಯಿಂದ ಮನನೊಂದ ಯುವತಿ ಸಂಜೆ ಮನೆಗೆ ಹೋಗಿ ಮನೆಯಲಿದ್ದ ಹಳೆಯ ಮಾತ್ರೆಗಳನ್ನು ತಿಂದು ವೀಡಿಯೋ ಮೂಲಕ ಪರಿಚಯಸ್ಥರಿಗೆ ತಿಳಿಸಿದ್ದಾಳೆ ಕೂಡಲೇ 112 ಗೆ ಕರೆ ಮಾಡಲಾಗಿ ಯುವತಿಯನ್ನು ಹೊಸನಗರ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಈ ಪ್ರಕರಣದಲ್ಲಿ ಹೊಸನಗರ ಪೊಲೀಸ್ ಠಾಣೆಯಲ್ಲಿ ಶ್ರೀಕಾಂತ್ ,ನಾಗರಾಜ್ , ಪ್ರದೀಪ್ , ಸವೀತಾ ಎಂಬುವವರ ವಿರುದ್ದ ಪ್ರಕರಣ ದಾಖಲಾಗಿದೆ
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್