ಸಾವಿರ ಭಾರಿ ಸೋಲುಂಡರು ಚಿಂತಿಸದೇ ಛಲಬಿಡದೆ ಹೋರಾಟದಿಂದ ಯಶಸ್ಸು ಸಾಧ್ಯ – ನಿರ್ಭಯಾನಂದ ಸರಸ್ವತಿ ಸ್ವಾಮೀಜಿ
ರಿಪ್ಪನ್ಪೇಟೆ : ಭಾರತದಲ್ಲಿ ಪ್ರತಿಭಾನ್ವಿತ ಸಾಧಕರಿದ್ದಾರೆ. ಆದರೆ ಅವರಿಗೆ ಪ್ರೋತ್ಸಾಹ-ಅವಕಾಶಗಳಿಲ್ಲ,ನಮ್ಮಲ್ಲಿ ಎಷ್ಟೇ ಸಂಶೋಧನೆಗಳಾದರೂ ಅವು ಸದ್ಬಳಕೆಯಾಗಿದ್ದು ವಿದೇಶಗಳಲ್ಲಿ ಹೀಗಾಗಿ ಆ ದೇಶಗಳು ಮುಂದುವರಿದಿವೆ ಎಂದು ರಾಮಕೃಷ್ಣ ವಿವೇಕಾನಂದ ಆಶ್ರಮದ ನಿರ್ಭಯಾನಂದ ಸರಸ್ವತಿ ಸ್ವಾಮೀಜಿ ಹೇಳಿದರು
ಪಟ್ಟಣದ ಶ್ರೀ ರಾಮಕೃಷ್ಣ ಶಿಕ್ಷಣ ಸಂಸ್ಥೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ವಿಜ್ಞಾನ ಮತ್ತು ತಾಂತ್ರಿಕತೆ ಇಂದು ಬಹಳಷ್ಟು ವಿಸ್ತಾರಗೊಂಡಿದೆ. ಅದ್ಭುತ ಸಾಧನೆಗಳಾಗಿವೆ. ವಿಜ್ಞಾನವನ್ನು ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸವನ್ನು ಶ್ರದ್ಧೆ ಮತ್ತು ನಿಷ್ಠೆಯಿಂದ ಏಕಾಗ್ರತೆಯಿಂದ ಅಧ್ಯಯನ ಮಾಡುವ ಮೂಲಕ ಮುಂದೊಂದು ದಿನ ದೊಡ್ಡ ವಿಜ್ಞಾನಿಯಾಗಿ ಹೊರಹೊಮ್ಮಬೇಕು ಎಂದರು.
ಯಾವುದೇ ಒಳ್ಳೆಯ ಕಾರ್ಯ ಮಾಡುವಾಗ ಸಾಕಷ್ಟು ಸಂಕಷ್ಟಗಳು ಎದುರಾಗಿ ಸೋಲುವಂತಾಗಿದೆ ಅದರೆ ನಾವು ಅದನ್ನು ಒಂದಲ್ಲಾ ಒಂದು ಭಾರಿ ನಮಗೆ ಜಯ ದೊರುಕುವುದರಲ್ಲಿ ಯಾವುದೇ ಸಂದೇಹವಿಲ್ಲ,ಏಕಾಗ್ರತೆಯಿಂದ ಇದ್ದರೆ ಏನು ಬೇಕಾದರು ಸಾಧನೆ ಮಾಡಬಹುದು ಎಂಬುದನ್ನು ಸ್ವಾಮಿ ವಿವೇಕಾನಂದರು ತಿಳಿಸಿಕೊಟ್ಟಿದ್ದಾರೆ.ಅವರ ತತ್ವಾಧರ್ಶಗಳನ್ನು ನಮ್ಮ ವಿದ್ಯಾರ್ಥಿಗಳು ತಮ್ಮ ಬದುಕಿನಲ್ಲಿ ಆಳವಡಿಸಿಕೊಂಡಾಗ ಸೋಲು ಎಂಬುದು ಬರುವುದಿಲ್ಲ ಎಂದರು.
ಬೆಂಗಳೂರು ಯಲಹಂಕ ರಾಮಕೃಷ್ಣ ವೇದಾಂತ ಆಶ್ರಮದ ಆಭಯಾನಂದಜಿ ಮಹಾರಾಜ್,ಹೊಸನಗರ ತಾಲ್ಲೂಕಿನ ಸುಳಗೋಡು ಶ್ರೀರಾಮಕೃಷ್ಣ ಯೋಗಪೀಠದ ಶ್ರೀಸ್ವಾಮಿ ಪ್ರಕಾಶನಂದಜೀ ಮಹಾರಾಜ್ ನೇತೃತ್ವ ವಹಿಸಿದ್ದರು.
ಶ್ರೀಶಾರದ ರಾಮಕೃಷ್ಣ ವಿದ್ಯಾಲಯದ ಸಂಸ್ಥಾಪಕ ಅಧ್ಯಕ್ಷ ದೇವರಾಜ್ ಅಧ್ಯಕ್ಷತೆ ವಹಿಸಿದ್ದರು.
ಕುಮಾರಿ ನವ್ಯ ಪ್ರಾರ್ಥಿಸಿದರು, ಶಾರದ ರಾಮಕೃಷ್ಣ ವಿದ್ಯಾಲಯದ ಸಂಸ್ಥಾಪಕ ಆಧ್ಯಕ್ಷ ಡಿ.ಎಂ.ದೇವರಾಜ್ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.ಗುರುರಾಜ ವಂದಿಸಿದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್