“ಶ್ರದ್ದಾಭಕ್ತಿಯಿಂದ ಅಭ್ಯಂಗ ಸ್ನಾನದೊಂದಿಗೆ ನರಕ ಚತುರ್ದಶಿ ಸಂಭ್ರಮಾಚರಣೆ’’
ರಿಪ್ಪನ್ಪೇಟೆ;- ನರಕ ಚತುರ್ದಶಿಯ ಅಂಗವಾಗಿ ಹೊಸನಗರ ತಾಲೂಕಿನ ವಿವಿಧಡೆ ಯಲ್ಲಿ ನಾಗರಿಕರು ಭಾನುವಾರ ಶ್ರದ್ಧಾಭಕ್ತಿಯಿಂದ ಅಭ್ಯಂಗ ಸ್ನಾನದೊಂದಿಗೆ ನರಕ ಚತುರ್ದಶಿಯನ್ನು ಸಂಭ್ರಮದಿಂದ ಆಚರಿಸಿದರು.
ಮಹಿಳೆಯರು ಮನೆಯ ಬಳಿಯಲ್ಲಿ ತೆರೆದ ಬಾವಿಯ ಸುತ್ತ ಸಗಣಿ ನೀರಿನಿಂದ ಶುದ್ದಿಕರಿಸಿ ಮಾವಿನ ತೋರಣ ಮತ್ತು ಜೇಡಿ ಕೆಮ್ಮಣ್ಣು ರಂಗೋಲಿಗಳಿಂದ ಶೃಂಗರಿಸಿ ಮುಂಜಾನೆ ಪೂಜೆಗೆ ಅಣಿಗೊಳಿಸಿಕೊಂಡು ಮುಂಜಾವಿನಲ್ಲಿ ಮುತ್ತೈದೆಯರು ಮಣ್ಣಿನ ಕುಂಭದೊಂದಿಗೆ ಪೂಜಾ ಸಾಮಗ್ರಿಯನ್ನು ಹಿಡಿದುಕೊಂಡು ಬಂದು ಗಂಗಾಮಾತೆಯನ್ನು ಪೂಜಿಸಿ ನೈವೇದ್ಯ ಮಾಡಿ ನೀರು ತುಂಬಿಕೊಂಡು ಮನೆಯಲ್ಲಿನ ದೇವರ ಗುಡಿಯಲ್ಲಿಟ್ಟು ಪೂಜಿಸಿ ಶ್ರದ್ದಾಭಕ್ತಿಯಿಂದ ಅ ಭ್ಯಂಗ ಸ್ನಾನಮಾಡುವುದರೊಂದಿಗೆ ನರಕಚತುರ್ದಶಿ ಹಬ್ಬವನ್ನು ಸಂಭ್ರಮಿಸಿದರು.
ಮಣ್ಣಿನ ಕುಂಭವನ್ನು ಮಾವಿನ ತೋರಣ ಹೂವಿನ ಅಲಂಕಾರದೊಂದಿಗೆ ಶೃಂಗರಿಸಿ ಬಂಗಾರದ ಆಭರಣವನ್ನು ಇಟ್ಟು ನರಕ ಚತುರ್ದಶಿಯ ದಿನ ಸುಮಂಗಳೆಯರು ಬಾವಿಯ ಬಳಿ ಪೂಜೆ ಸಲ್ಲಿಸಿ ಮುತ್ತೈದೆಯರಿಗೆ ಅರಿಶಿಣ ಕುಂಕುಮದೊಂದಿಗೆ ಬಾಗಿನ ನೀಡಿ ಹಿರಿಯರಿಂದ ಆಶೀರ್ವಾದ ಪಡೆಯುತ್ತಾರೆ.
ನಂತರ ತಮ್ಮ ಸ್ನಾನದ ಮನೆಯಲ್ಲಿನ ನೀರಿನ ಹಂಡೆಗೆ ಹಿಡ್ಲಚ್ಚಿ ಬಳ್ಳಿ ಮತ್ತು ಮಹಾಲಿಂಗನ ಬಳ್ಳಿಯಿಂದ ಆಲಂಕರಿಸಿ ಅದರಲ್ಲಿ ಮುಂಜಾನೆ ಬಾವಿಯಿಂದ ತಂದ ನೀರನ್ನು ಹಾಕಿ ಆಭ್ಯಂಗನ ಸ್ನಾನ ಮಾಡುವುದು ಪರಂಪಾರಿಕವಾಗಿ ಬೆಳೆದು ಬಂದ ಪದ್ದತಿಯಾಗಿದ್ದು ಮಕ್ಕಳು ದೊಡ್ಡವರು ಮೈಗೆಲ್ಲಾ ಎಣ್ಣೆ ಹಚ್ಚಿಕೊಂಡು ಬಿಸಿಬಿಸಿ ನೀರಿನ ಸ್ನಾನ ಮಾಡಿ ನಂತರ ಕೊಟ್ಟೆಕಡಬು ಮತ್ತು ಚಿನ್ನಿಕಾಯಿನ ಕಡಬು ತಿಂದು ಸಂಭ್ರಮಿಸುವುದು ಈ ಹಬ್ಬದ ವಿಶೇಷವಾಗಿದೆ.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್