ರಿಪ್ಪನ್ ಪೇಟೆ ಶ್ರೀ ನಂದಿ ಹಾಸ್ಪಿಟಲ್ ನಲ್ಲಿ ಉಚಿತ ವೈದ್ಯರ ಸೇವಾ ತಪಾಸಣೆಗೆ ಚಾಲನೆ.
ಪ್ರತಿಯೊಬ್ಬರೂ ಉತ್ತಮ ಆರೋಗ್ಯವನ್ನು ಹೊಂದಿರಬೇಕು : ಅಭಿನವ ಚನ್ನಬಸವ ಸ್ವಾಮೀಜಿ
ರಿಪ್ಪನ್ ಪೇಟೆ : ಆಧುನಿಕ ತಂತ್ರಜ್ಞಾನದ ಅಡಿಯಲ್ಲಿ ಒತ್ತಡದ ಜೀವನವನ್ನು ನಡೆಸುತ್ತಿರುವ ಪ್ರತಿಯೊಬ್ಬರು. ತಮ್ಮ ಆರೋಗ್ಯದ ಬಗ್ಗೆ ಗಮನಹರಿಸಿ ಉತ್ತಮ ಆರೋಗ್ಯವನ್ನು ಹೊಂದಿರಬೇಕು ಎಂದು ಶ್ರೀ ಸದಾನಂದ ಶಿವಯೋಗಾಶ್ರಮ ಮೂಲೆ ಗೆದ್ದೆ ಮಠದ ಶ್ರೀ ಅಭಿನವ ಚೆನ್ನಬಸವ ಸ್ವಾಮೀಜಿ ಹೇಳಿದರು.
ಪಟ್ಟಣದ ಶ್ರೀ ನಂದಿ ಹಾಸ್ಪಿಟಲ್ ನಲ್ಲಿ ಉಚಿತ ವೈದ್ಯರ ಸೇವಾ ತಪಾಸಣೆ ಗೆ ಚಾಲನೆ ನೀಡಿ ಆ ಶ್ರೀ ವಚನ ನೀಡಿದ ಅವರು ಮಾನವ ಜೀವಿತದಲ್ಲಿ ಸಮಾಜ ಸೇವೆಯು ನೆಮ್ಮದಿಯ ಬದುಕಿಗೆ ಮತ್ತು ಸದೃಢ ಸಮಾಜ ನಿರ್ಮಾಣಕ್ಕೆ ಸಹಕಾರಿಯಾಗಲಿದೆ. ಜಗತ್ತಿನಲ್ಲಿ ಅತ್ಯುತ್ತಮ ಸೇವೆಗಳಲ್ಲಿ ಒಂದಾದ ಆರೋಗ್ಯ ಸೇವೆಯನ್ನು ಮಾಡುವುದರ ಮೂಲಕ ಮಲೆನಾಡಿನಲ್ಲಿ ಅದರಲ್ಲೂ ಹೊಸನಗರ ತಾಲೂಕಿನ ಗ್ರಾಮೀಣ ಪ್ರದೇಶದಲ್ಲಿನ ಜನತೆಗೆ ಸದುಪಯೋಗವಾಗಲೆಂದು ಸದುದ್ದೇಶದಿಂದ ದಿನದ 24 ಗಂಟೆ ಉಚಿತ ವೈದ್ಯರ ಸೇವಾ ತಪಾಸಣೆ ಯನ್ನು ಶ್ರೀ ನಂದಿ ಹಾಸ್ಪಿಟಲ್ ನಲ್ಲಿ ಅನುಷ್ಠಾನಗೊಳಿಸಲಾಗಿದೆ ಇದರ ಸದುಪಯೋಗವನ್ನು ಪ್ರತಿಯೊಬ್ಬರು ಪಡೆದುಕೊಳ್ಳುವುದರ ಮೂಲಕ ಉತ್ತಮ ಆರೋಗ್ಯವನ್ನು ಹೊಂದಬೇಕು ಎಂದು ಹೇಳಿದರು.
ಶ್ರೀ ನಂದಿ ಹಾಸ್ಪಿಟಲ್ ಮಾಲೀಕರಾದ ಎಸ್. ವಚನ ಮಾತನಾಡಿ ಪ್ರತಿಯೊಬ್ಬ ನಾಗರಿಕರು ಆರೋಗ್ಯದ ಬಗ್ಗೆ ಗಮನಹರಿಸುವುದರ ಮೂಲಕ ಒಳ್ಳೆಯ ಆರೋಗ್ಯವನ್ನು ಪಡೆದುಕೊಳ್ಳಬೇಕು ಎಂಬ ಕಾರಣದಿಂದ ದಿನದ 24 ಗಂಟೆ ನಮ್ಮ ಹಾಸ್ಪಿಟಲ್ ನಲ್ಲಿ ಉಚಿತ ವೈದ್ಯರ ಸೇವಾ ತಪಾಸಣೆಯನ್ನು ಏರ್ಪಡಿಸಲಾಗಿದೆ, ಈ ತಪಾಸಣಾ ಶಿಬಿರವು ನಿರಂತರವಾಗಿರುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಡಾ. ಅಮಿತ್, ಆಸ್ಪತ್ರೆಯ ಸಿಬ್ಬಂದಿಗಳಾದ ಅರುಣ್ ಕುಮಾರ್, ಶ್ವೇತಾ,ಕವನ, ಪ್ರಫುಲ್, ರಮ್ಯಾ,ಇನ್ನಿತರರಿದ್ದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್