Ripponpete | ಸರ್ಕಾರಕ್ಕೆ ಸಲ್ಲಿಸಿರುವ ಬರಪೀಡಿತದ ವರದಿ ಅವೈಜ್ಞಾನಿಕ ; ತುರ್ತು ಸಮಗ್ರ ವರದಿಗೆ ಜೆಡಿಎಸ್ ಆಗ್ರಹ

ಸರ್ಕಾರಕ್ಕೆ ನೀಡಿದ ಬರಪೀಡಿತದ ವರದಿ ಅವೈಜ್ಞಾನಿಕ ; ತುರ್ತು ಸಮಗ್ರ ವರದಿಗೆ ಜೆಡಿಎಸ್ ಆಗ್ರಹ
ರಿಪ್ಪನ್‌ಪೇಟೆ – ಶಿವಮೊಗ್ಗ ಜಿಲ್ಲೆಯಲ್ಲಿ ಬರಪೀಡಿತ ಪ್ರದೇಶವೆಂದು ಸರ್ಕಾರ ಘೋಷಣೆ ಮಾಡಿದ್ದು, ಬರಪೀಡಿತ ವರದಿ ಮಾತ್ರ ಅವೈಜ್ಞಾನಿಕವಾಗಿರುತ್ತದೆ. ಮಲೆನಾಡಿನ ಜಿಲ್ಲೆಯಲ್ಲಿ ಸಕಾಲದಲ್ಲಿ ಮಳೆ ಬರದಿದ್ದು, ಇದರಿಂದ ರೈತರು ತಮ್ಮ ಸಂಪೂರ್ಣ ಬೆಳೆಯನ್ನು ಕಳೆದುಕೊಂಡಿದ್ದು ಸರ್ಕಾರ ನೆಪಕ್ಕೆ ಮಾತ್ರ ಅಧಿಕಾರಿಗಳಿಂದ ವರದಿ ತರಿಸಿ ಶಿವಮೊಗ್ಗ ಜಿಲ್ಲೆಗೆ ಅನ್ಯಾಯ ಮಾಡಿದ್ದಾರೆಂದು ರಾಜ್ಯ ಜೆಡಿಎಸ್ ಪ್ರಧಾನಕಾರ್ಯದರ್ಶಿ ಆರ್.ಎ.ಚಾಬುಸಾಬ್ ಆರೋಪಿಸಿದರು.


ರಿಪ್ಪನ್‌ಪೇಟೆಯಲ್ಲಿ ಇಂದು ನಾಡಕಛೇರಿಯ ಮುಂಭಾಗ ರಾಜ್ಯ ಜೆಡಿಎಸ್ ಪಕ್ಷದಿಂದ ಪ್ರತಿಭಟನೆ ನಡೆಸಿ ರಾಜ್ಯಪಾಲರಿಗೆ ನಾಡಕಛೇರಿಯ ಉಪತಹಶೀಲ್ದಾರ್ ಮೂಲಕ ಮನವಿ ಪತ್ರವನ್ನು ಸಲ್ಲಿಸಿ ಮಾತನಾಡಿ, ವಿಶೇಷವಾಗಿ ಹೊಸನಗರ ತಾಲ್ಲೂಕಿನಲ್ಲೂ ಸುಮಾರು 15 ಸಾವಿರ ಹೆಕ್ಟೇರ್ ಭತ್ತದ ಬೆಳೆ 800 ಹೆಕ್ಟೇರ್ ಜೋಳದ ಬೆಳೆ ನಾಶವಾಗಿದ್ದು ಅಧಿಕಾರಿಗಳು ನೀಡಿರುವ ವರದಿ ಕೇವಲ ಅರ್ಧದಷ್ಟಿರುತ್ತದೆ. ಹೀಗೆಯೇ ತೀರ್ಥಹಳ್ಳಿ ಮತ್ತು ಸಾಗರದಲ್ಲಿ ಸಹ ಭತ್ತದ ಬೆಳೆ ಜೋಳದ ಬೆಳೆ ಸರ್ವನಾಶವಾಗಿದೆ. ಈ ಕೂಡಲೇ ರಾಜ್ಯಪಾಲರು ಮಧ್ಯ ಪ್ರವೇಶ ಮಾಡಿ ಸರ್ಕಾರ ತರಿಸಿಕೊಂಡಿರುವ ವರದಿಯನ್ನು ತಿರಸ್ಕರಿಸಿ, ಸಮಗ್ರ ವರದಿಯನ್ನು ತರಿಸಿಕೊಂಡು ರೈತರಿಗೆ ಪರಿಹಾರ ನೀಡುವಲ್ಲಿ ಮಧ್ಯ ಪ್ರವೇಶ ಮಾಡಲು ಈ ಮೂಲಕ ಆಗ್ರಹಿಸುತ್ತದೆ.


ಜಿಲ್ಲೆಯಾದ್ಯಂತ ರೈತರು ಭಿತ್ತಿದ ಭತ್ತದ ಬೀಜ, ಜೋಳ, ಸಕಾಲಕ್ಕೆ ಮಳೆ ಬಾರದಿದ್ದರಿಂದ ನೆಲಕಚ್ಚಿ ಹೋಗಿರುತ್ತದೆ. ಜಾನುವಾರುಗಳಿಗೆ ಮೇವಿನ ಕೊರತೆ ಸಹ ಇದೆ. ಕುಡಿಯುವ ನೀರಿನ ಬವಣೆ ಜಾಸ್ತಿ ಆಗಿದೆ. ಈಗಾಗಲೇ ಹೊಸನಗರ ತಾಲ್ಲೂಕಿನಲ್ಲಿ ಅಧಿಕಾರಿಗಳು ನೀಡಿರುವ ವರದಿಯಲ್ಲಿ ಹೊಸನಗರ 5343 ಹೆಕ್ಟೇರ್ ಭತ್ತ, 265 ಹೆಕ್ಟೇರ್ ಜೋಳ, ತೀರ್ಥಹಳ್ಳಿಯಲ್ಲಿ 7156 ಹೆಕ್ಟೇರ್ ಭತ್ತ, ಸಾಗರ 8913 ಹೆಕ್ಟೇರ್ ಮಳೆಯಾಧಾರಿತ ಜಮೀನು, 1598 ಹೆಕ್ಟೇರ್ ನೀರಾವರಿ ಬೆಳೆ, 1723 ಹೆಕ್ಟೇರ್ ಜೋಳದ ಬೆಳೆ ಹಾಗೂ ಜಿಲ್ಲಾದ್ಯಂತ ಶೇ 33% ಕ್ಕಿಂತ ಅತಿಹೆಚ್ಚು ಬರಗಾಲವಿದ್ದು, ಬೆಳೆಗಳು ಶೇಕಡವಾರು ನಾಶವಾಗಿದೆ ಎಂದು ತಿಳಿಸಿರುತ್ತಾರೆ. ಆದರೆ ನಮ್ಮ ಪ್ರಶ್ನೆ ಸಮರ್ಪಕವಾಗಿ ಆಯಾ ಗ್ರಾಮಗಳ ಖುದ್ದು ಭೇಟಿ ನೀಡಿ ವರದಿ ತಯಾರು ಮಾಡುವ ಪ್ರಕ್ರಿಯೆ ನಡೆದಿಲ್ಲ. ಇದೊಂದು ಕಣ್ಣೊರೆಸುವ ತಂತ್ರವಾಗಿದೆ. ಜಿಲ್ಲೆಯಾದ್ಯಂತ ಅಡಿಕೆ ಮತ್ತು ಇತರ ಸಾಂಬಾರು ಬೆಳೆಗಳು ನೀರಿಲ್ಲದೆ ಬೆಳೆ ಶೇ. 40 ಕ್ಕೆ ಇಳಿಕೆಯಾಗಿದೆ. ಅದರ ಪೂರ್ಣ ವರದಿ ನೀಡಿಲ್ಲ ಹಾಗೂ ರೈತರು ಬೆಳೆದಿರುವ ಸಾಂಬಾರು ಬೆಳೆ, ಇತರೆ ಬೆಳೆಗಳು ಬರದಲ್ಲಿ ನಾಶ ಹೊಂದಿರುತ್ತದೆ.

ರಾಜ್ಯ ಸರ್ಕಾರ ಕಣ್ಮುಚ್ಚಿ ಕುಳಿತಿದ್ದು, ಈ ರಾಜ್ಯದ ಮುಖ್ಯಮಂತ್ರಿಗಳು ಬರಗಾಲ ಇದ್ದರೂ ನೃತ್ಯ ಮಾಡುವಲ್ಲಿ ಕಾಲಕಳೆಯುತ್ತಿದ್ದಾರೆ.ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ರಾಜ್ಯಪಾಲರು ಮಧ್ಯಪ್ರವೇಶ ಮಾಡಿ ಮಲೆನಾಡಿನ ಮುಖ್ಯ ಭಾಗವಾದ ಶಿವಮೊಗ್ಗ ಜಿಲ್ಲೆಯ ಸಮಗ್ರ ವರದಿಯನ್ನು ತರಿಸಲು ಜಂಟಿ ನೇತೃತ್ವದಲ್ಲಿ ಕೃಷಿ ಇಲಾಖೆ ಮತ್ತು ಕಂದಾಯ ಇಲಾಖೆ ಮತ್ತು ಪಶುಪಾಲನಾ ಇಲಾಖೆಯ ಅಧಿಕಾರಿಗಳಿಂದ ಸಮಗ್ರ ವರದಿ ತರಿಸಿಕೊಂಡು ಜಿಲ್ಲೆಯ ರೈತರಿಗೆ ಸೂಕ್ತ ಪರಿಹಾರ ನೀಡುವಂತೆ ಸೂಕ್ತ ಆದೇಶ ನೀಡಲು ಒತ್ತಾಯಿಸುತ್ತೇವೆ.

ಪ್ರತಿಭಟನೆಯಲ್ಲಿ ತಾಲ್ಲೂಕ್ ಜೆಡಿಎಸ್ ಅಧ್ಯಕ್ಷ ಎನ್.ವರ್ತೇಶ್,ಜಿಲ್ಲಾ ಜೆಡಿಎಸ್ ಮುಖಂಡ ಆರ್.ಎನ್.ಮಂಜುನಾಥ, ದೂನ ರಾಜು (ಸೋಮಶೇಖರ), ಮಲ್ಲೇಶ್ ಆಲವಳ್ಳಿ, ಹೊಳೆಯಪ್ಪಗೌಡ, ಕುಕ್ಕಳಲೇ ಯೋಗೇಂದ್ರ, ಅಣ್ಣಪ್ಪ, ನಾಗರಾಜ, ಮಸರೂರು ಈಶ್ವರಪ್ಪ, ಗಣೇಶ ಹೊಸಮನೆ, ಮೇಲೋಜಿರಾವ್, ರೇಣುಕಪ್ಪ ನೆವಟೂರು ಇನ್ನಿತರರು ಪಾಲ್ಗೊಂಡಿದ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಮಾಜಿ ಸಿಎಂಗಳ ಪುತ್ರರಿಗೆ ಮಣೆ, ಮಹಿಳೆಯರು, ವಿಪ್ರರು ಹಾಗೂ ಪ್ರಾಮಾಣಿಕರಿಗೆ ಅನ್ಯಾಯ : ಮಾಜಿ ಶಾಸಕ ಬಿ. ಸ್ವಾಮಿರಾವ್ ವಾಗ್ದಾಳಿ

ಮಾಜಿ ಸಿಎಂಗಳ ಪುತ್ರರಿಗೆ ಮಣೆ, ಮಹಿಳೆಯರು, ವಿಪ್ರರು ಹಾಗೂ ಪ್ರಾಮಾಣಿಕರಿಗೆ ಅನ್ಯಾಯ : ಮಾಜಿ ಶಾಸಕ ಬಿ. ಸ್ವಾಮಿರಾವ್ ವಾಗ್ದಾಳಿ…

2 hours ago

ಮರಕ್ಕೆ ರಭಸವಾಗಿ ಡಿಕ್ಕಿ ಹೊಡೆದು ಮೂರು ತುಂಡಾದ ಕಾರು: 22 ವರ್ಷದ ಯುವಕ ಸ್ಥಳದಲ್ಲೇ ದುರ್ಮರಣ

ಮರಕ್ಕೆ ರಭಸವಾಗಿ ಡಿಕ್ಕಿ ಹೊಡೆದು ಮೂರು ತುಂಡಾದ ಕಾರು: 22 ವರ್ಷದ ಯುವಕ ಸ್ಥಳದಲ್ಲೇ ದುರ್ಮರಣ A 22-year-old youth…

2 hours ago

ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ರಿಪ್ಪನ್‌ಪೇಟೆ ಘಟಕದ ನೂತನ ಸಾರಥಿಯಾಗಿ ಪಿಯುಸ್ ರೋಡ್ರಿಗಸ್ ಪದಗ್ರಹಣ

ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ರಿಪ್ಪನ್‌ಪೇಟೆ ಘಟಕ: ನೂತನ ಸಾರಥಿಯಾಗಿ ಪಿಯುಸ್ ರೋಡ್ರಿಗಸ್ ಪದಗ್ರಹಣ Pius Rodrigues was sworn in…

2 hours ago

ಸಿಎಂ ಡಿಕೆಶಿ ಮನವೊಲಿಕೆ : ರಾಜೀನಾಮೆ ನಿರ್ಧಾರ ಕೈಬಿಟ್ಟ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ

ಸಿಎಂ ಡಿಕೆಶಿ ಸಲಹೆಗೆ ಮನ್ನಣೆ : ರಾಜೀನಾಮೆ ನಿರ್ಧಾರ ಕೈಬಿಟ್ಟ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ Sagar MLA Beluru…

9 hours ago

ಮದ್ಯದ ಅಮಲಿನಲ್ಲಿ ತಂದೆ-ಮಗನ ನಡುವೆ ಗಲಾಟೆ: ಕತ್ತು ಹಿಸುಕಿ ತಂದೆಯನ್ನೇ ಕೊಂದ ಪುತ್ರ!

ಮದ್ಯದ ಅಮಲಿನಲ್ಲಿ ತಂದೆ-ಮಗನ ನಡುವೆ ಗಲಾಟೆ: ಕತ್ತು ಹಿಸುಕಿ ತಂದೆಯನ್ನೇ ಕೊಂದ ಪುತ್ರ! A 55-year-old man was allegedly…

13 hours ago

ಬೇಳೂರುಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಆಕ್ರೋಶ: ಹೆದ್ದಾರಿಯಲ್ಲಿ ಟೈರ್ ಗೆ ಬೆಂಕಿ , ಕಾಂಗ್ರೆಸ್‌ನಲ್ಲಿ ರಾಜೀನಾಮೆ ಪರ್ವ

ಬೇಳೂರುಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಆಕ್ರೋಶ: ಹೆದ್ದಾರಿಯಲ್ಲಿ ಟೈರ್ ಗೆ ಬೆಂಕಿ , ಕಾಂಗ್ರೆಸ್‌ನಲ್ಲಿ ರಾಜೀನಾಮೆ ಪರ್ವ Supporters of…

14 hours ago