Shivamogga | ದರೋಡೆಗೆ ಹೊಂಚು ಹಾಕಿದ್ದ ನಾಲ್ವರು ಯುವಕರ ಬಂಧನ
ಶಿವಮೊಗ್ಗ : ದರೋಡೆಗೆ ಹೊಂಚು ಹಾಕಿ ನಿಂತಿದ್ದ ಯುವಕರನ್ನ ದೊಡ್ಡಪೇಟೆ ಪೊಲೀಸರು ಬಂಧಿಸಿ, 2 ಸ್ಟೀಲ್ ಡ್ರಾಗನ್, ಕಬ್ಬಿಣದ ರಾಡು ಹಾಗೂ ಲಾಂಗ್ ವಶಪಡಿಸಿಕೊಂಡಿದ್ದಾರೆ.
ಹೋಟೆಲ್ ಕಾರ್ಮಿಕ, ಭದ್ರಾವತಿ ತಾಲೂಕಿನ ಬಾಬಳ್ಳಿ ಗ್ರಾಮದ ದೇವರಾಜ್ (31), ಕೋಟೆಗಂಗೂರಿನ ಸಾಗರ್ ಯಾನೆ ಶಬರೀಶ್ (22), ಭದ್ರಾವತಿ ಎಪಿಎಂಸಿ ಅಡಕೆ ಮಂಡಿಯಲ್ಲಿ ಕೆಲಸ ಮಾಡಿಕೊಂಡಿದ್ದ ನಾಗರಾಜ್ ಯಾನೆ ಕುಮಾರ (38), ರಾಗಿಗುಡ್ಡದ ಶೇಯಸ್ (22) ಬಂಧಿತ ಆರೋಪಿಗಳಾಗಿದ್ದು ಕೋಟೆಗಂಗೂರಿನ ಸಂತೋಷ್ ಎಂಬಾಂತ ತಲೆಮರೆಸಿಕೊಂಡಿದ್ದಾನೆ.
ನಗರದ ಎನ್.ಟಿ. ರಸ್ತೆಯ ಫಲಕ್ ಶಾದಿ ಮಹಲ್ ಪಕ್ಕದಲ್ಲಿ ನಾಲ್ಕೈದು ಜನ ಯುವಕರ ಗುಂಪೊಂದು ಭಾರಿ ಅನಾಹುತ ಸೃಷ್ಠಿಸಲು ಮುಂದಾಗಿತ್ತು. ಎನ್.ಟಿ. ರಸ್ತೆಯ ಫಲಕ್ ಶಾದಿ ಮಹಲ್ನ ಪಕ್ಕದ ಖಾಲಿ ಜಾಗದಲ್ಲಿ, ಹೊಂದಿಕೊಂಡಿರುವ ರಸ್ತೆಯಲ್ಲಿ ಓಡಾಡುವ ಜನರು ಮತ್ತು ವಾಹನಗಳನ್ನು ತಡೆದು ದರೋಡೆಗೆ ಹೊಂಚು ಹಾಕುತ್ತಿದ್ದರು.
ಈ ಬಗ್ಗೆ ಮಾಹಿತಿ ಹಿನ್ನಲೆ ಪಿಎಸ್ಐ ವಸಂತ್ ಸ್ಥಳಕ್ಕೆ ತೆರಳಿ ಪರಿಶೀಲಿಸಿದರು. ಆಗ ನಾಲೈದು ಜನರು ಅಪಾಯಕರವಾದ ಆಯುಧಗಳನ್ನು ಹಿಡಿದು, ಸುಲಿಗೆ ಉದ್ದೇಶದಿಂದ ಹೊಂಚು ಹಾಕುತ್ತಿರುವುದು ತಿಳಿದುಬಂದಿದೆ. ಈ ಸಂದರ್ಭ ಆಯುಧಗಳ ಸಮೇತ 4 ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇವರಲ್ಲಿ ಓರ್ವ ತಪ್ಪಿಸಿಕೊಂಡಿದ್ದಾನೆ.
ಹಣದ ಆಸೆಗೆ ಈ ರೀತಿ ಕೃತ್ಯ ಮಾಡಿದ್ಯಾಗಿ ವಿಚಾರದಲ್ಲಿ ಆರೋಪಿಗಳು ಬಾಯಿ ಬಿಟ್ಟಿದ್ದಾರೆ. ಬಂಧಿತರಿಂದ ಕಬ್ಬಿಣದ ರಾಡು, ಮರದ ಹಿಡಿ ಇರುವ ಮಚ್ಚು, 50 ಗ್ರಾಂ ತೂಕದ ಖಾರದ ಪುಡಿ ಇರುವ ಕವರ್, 2 ಸ್ಟೀಲ್ ಡ್ರಾಗನ್ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ A man identified…
ಚಾನೆಲ್ನಲ್ಲಿ ಈಜಲು ತೆರಳಿದ್ದ ಎಸ್ಎಸ್ಎಲ್ಸಿ ವಿದ್ಯಾರ್ಥಿ ನೀರುಪಾಲು SSLC student Krishna drowned while swimming in Tunga Channel…
ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ Shivamogga witnessed a grand and peaceful Eid Milad procession…
ಹುಂಚ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ Postman News report brings action on…
ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ Two accused persons were…
ಬೀದಿ ನಾಯಿಗಳ ದಾಳಿ: ಆರು ಕುರಿಗಳು ಸಾವು Six sheep belonging to a resident of Sagar were…