Shivamogga | ದರೋಡೆಗೆ ಹೊಂಚು ಹಾಕಿದ್ದ ನಾಲ್ವರು ಯುವಕರ ಬಂಧನ
ಶಿವಮೊಗ್ಗ : ದರೋಡೆಗೆ ಹೊಂಚು ಹಾಕಿ ನಿಂತಿದ್ದ ಯುವಕರನ್ನ ದೊಡ್ಡಪೇಟೆ ಪೊಲೀಸರು ಬಂಧಿಸಿ, 2 ಸ್ಟೀಲ್ ಡ್ರಾಗನ್, ಕಬ್ಬಿಣದ ರಾಡು ಹಾಗೂ ಲಾಂಗ್ ವಶಪಡಿಸಿಕೊಂಡಿದ್ದಾರೆ.
ಹೋಟೆಲ್ ಕಾರ್ಮಿಕ, ಭದ್ರಾವತಿ ತಾಲೂಕಿನ ಬಾಬಳ್ಳಿ ಗ್ರಾಮದ ದೇವರಾಜ್ (31), ಕೋಟೆಗಂಗೂರಿನ ಸಾಗರ್ ಯಾನೆ ಶಬರೀಶ್ (22), ಭದ್ರಾವತಿ ಎಪಿಎಂಸಿ ಅಡಕೆ ಮಂಡಿಯಲ್ಲಿ ಕೆಲಸ ಮಾಡಿಕೊಂಡಿದ್ದ ನಾಗರಾಜ್ ಯಾನೆ ಕುಮಾರ (38), ರಾಗಿಗುಡ್ಡದ ಶೇಯಸ್ (22) ಬಂಧಿತ ಆರೋಪಿಗಳಾಗಿದ್ದು ಕೋಟೆಗಂಗೂರಿನ ಸಂತೋಷ್ ಎಂಬಾಂತ ತಲೆಮರೆಸಿಕೊಂಡಿದ್ದಾನೆ.
ನಗರದ ಎನ್.ಟಿ. ರಸ್ತೆಯ ಫಲಕ್ ಶಾದಿ ಮಹಲ್ ಪಕ್ಕದಲ್ಲಿ ನಾಲ್ಕೈದು ಜನ ಯುವಕರ ಗುಂಪೊಂದು ಭಾರಿ ಅನಾಹುತ ಸೃಷ್ಠಿಸಲು ಮುಂದಾಗಿತ್ತು. ಎನ್.ಟಿ. ರಸ್ತೆಯ ಫಲಕ್ ಶಾದಿ ಮಹಲ್ನ ಪಕ್ಕದ ಖಾಲಿ ಜಾಗದಲ್ಲಿ, ಹೊಂದಿಕೊಂಡಿರುವ ರಸ್ತೆಯಲ್ಲಿ ಓಡಾಡುವ ಜನರು ಮತ್ತು ವಾಹನಗಳನ್ನು ತಡೆದು ದರೋಡೆಗೆ ಹೊಂಚು ಹಾಕುತ್ತಿದ್ದರು.
ಈ ಬಗ್ಗೆ ಮಾಹಿತಿ ಹಿನ್ನಲೆ ಪಿಎಸ್ಐ ವಸಂತ್ ಸ್ಥಳಕ್ಕೆ ತೆರಳಿ ಪರಿಶೀಲಿಸಿದರು. ಆಗ ನಾಲೈದು ಜನರು ಅಪಾಯಕರವಾದ ಆಯುಧಗಳನ್ನು ಹಿಡಿದು, ಸುಲಿಗೆ ಉದ್ದೇಶದಿಂದ ಹೊಂಚು ಹಾಕುತ್ತಿರುವುದು ತಿಳಿದುಬಂದಿದೆ. ಈ ಸಂದರ್ಭ ಆಯುಧಗಳ ಸಮೇತ 4 ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇವರಲ್ಲಿ ಓರ್ವ ತಪ್ಪಿಸಿಕೊಂಡಿದ್ದಾನೆ.
ಹಣದ ಆಸೆಗೆ ಈ ರೀತಿ ಕೃತ್ಯ ಮಾಡಿದ್ಯಾಗಿ ವಿಚಾರದಲ್ಲಿ ಆರೋಪಿಗಳು ಬಾಯಿ ಬಿಟ್ಟಿದ್ದಾರೆ. ಬಂಧಿತರಿಂದ ಕಬ್ಬಿಣದ ರಾಡು, ಮರದ ಹಿಡಿ ಇರುವ ಮಚ್ಚು, 50 ಗ್ರಾಂ ತೂಕದ ಖಾರದ ಪುಡಿ ಇರುವ ಕವರ್, 2 ಸ್ಟೀಲ್ ಡ್ರಾಗನ್ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಮಾಜಿ ಸಿಎಂಗಳ ಪುತ್ರರಿಗೆ ಮಣೆ, ಮಹಿಳೆಯರು, ವಿಪ್ರರು ಹಾಗೂ ಪ್ರಾಮಾಣಿಕರಿಗೆ ಅನ್ಯಾಯ : ಮಾಜಿ ಶಾಸಕ ಬಿ. ಸ್ವಾಮಿರಾವ್ ವಾಗ್ದಾಳಿ…
ಮರಕ್ಕೆ ರಭಸವಾಗಿ ಡಿಕ್ಕಿ ಹೊಡೆದು ಮೂರು ತುಂಡಾದ ಕಾರು: 22 ವರ್ಷದ ಯುವಕ ಸ್ಥಳದಲ್ಲೇ ದುರ್ಮರಣ A 22-year-old youth…
ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ರಿಪ್ಪನ್ಪೇಟೆ ಘಟಕ: ನೂತನ ಸಾರಥಿಯಾಗಿ ಪಿಯುಸ್ ರೋಡ್ರಿಗಸ್ ಪದಗ್ರಹಣ Pius Rodrigues was sworn in…
ಸಿಎಂ ಡಿಕೆಶಿ ಸಲಹೆಗೆ ಮನ್ನಣೆ : ರಾಜೀನಾಮೆ ನಿರ್ಧಾರ ಕೈಬಿಟ್ಟ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ Sagar MLA Beluru…
ಮದ್ಯದ ಅಮಲಿನಲ್ಲಿ ತಂದೆ-ಮಗನ ನಡುವೆ ಗಲಾಟೆ: ಕತ್ತು ಹಿಸುಕಿ ತಂದೆಯನ್ನೇ ಕೊಂದ ಪುತ್ರ! A 55-year-old man was allegedly…
ಬೇಳೂರುಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಆಕ್ರೋಶ: ಹೆದ್ದಾರಿಯಲ್ಲಿ ಟೈರ್ ಗೆ ಬೆಂಕಿ , ಕಾಂಗ್ರೆಸ್ನಲ್ಲಿ ರಾಜೀನಾಮೆ ಪರ್ವ Supporters of…