Thirthahalli | ಗಣಿ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣ – ಅಂತ್ಯಕ್ರಿಯೆಗೂ ಮುನ್ನವೇ ಆರೋಪಿಯನ್ನು ಬಂಧಿಸಿದ ಪೊಲೀಸ್

Thirthahalli | ಗಣಿ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣ – ಅಂತ್ಯಕ್ರಿಯೆಗೂ ಮುನ್ನ ಆರೋಪಿಯನ್ನು ಬಂಧಿಸಿದ ಪೊಲೀಸ್

ತೀರ್ಥಹಳ್ಳಿ : ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿಂತೆ ಬೆಂಗಳೂರು ಪೊಲೀಸರು ಓರ್ವ ಶಂಕಿತ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ.

ಈತ ಪ್ರತಿಮಾ ಅವರ ಹಳೆ ಕಾರು ಚಾಲಕನಾಗಿದ್ದ. ಹಲವು ವರ್ಷಗಳಿಂದ ಕಾರು ಚಾಲಕನಾಗಿದ್ದ ಕಿರಣ್ ನನ್ನು ಪ್ರತಿಮಾ ಅವರು ತೆಗೆದುಹಾಕಿದ್ದರು. ಕೆಲಸದಿಂದ ತೆಗದುಹಾಕಿದ್ದಕ್ಕೆ ಕೊಲೆ ಮಾಡಿರುವುದಾಗಿ ಅನುಮಾನ ಮೂಡಿದೆ.

ಅಕ್ರಮ ಕಲ್ಲು ಗಣಿಗಾರಿಕೆ ಮೇಲೆ ರೇಡ್ ಹೋಗುವ ಮಾಹಿತಿಯನ್ನು ಕಿರಣ್ ಲೀಕ್ ಮಾಡುತ್ತಿದ್ದು ಈ ಕಾರಣಕ್ಕೆ ಪ್ರತಿಮಾ ಅವರು ಕಿರಣ್ ಗೆ ಎಚ್ಚರಿಕೆ ನೀಡಿದ್ದರು.‌ ಮಾತ್ರವಲ್ಲದೇ ಕಾರು ಅಕ್ಸಿಡೆಂಟ್ ಮಾಡಿರುವ ಬಗ್ಗೆಯೂ ಮಾಹಿತಿ ಇದ್ದು ಈ ಎಲ್ಲಾ ಕಾರಣಗಳಿಗೆ ಪ್ರತಿಮಾ ಆತನನ್ನು ಕೆಲಸದಿಂದ ತೆಗೆದುಹಾಕಿದ್ದರು ಎನ್ನಲಾಗಿದೆ.

ಇನ್ನು ಕಿರಣ್ ಎಸ್ಕೇಪ್ ಆಗಿ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದು ಅಲ್ಲದೆ ವಿಚಾರಣೆಯ ವೇಳೆ ತಪ್ಪೊಪ್ಪಿಕೊಂಡಿದ್ದಾನೆ. 4 ವರ್ಷದಿಂದ ಕಾರು ಚಾಲಕನಾಗಿದ್ದ ಕಿರಣ್, ಬೇಜವಾಬ್ದಾರಿಯಿಂದ ಕಾರು ಓಡಿಸುತ್ತಿದ್ದನು. ಗುತ್ತಿಗೆ ಆಧಾರದಲ್ಲಿ ಚಾಲಕ ವೃತ್ತಿ ಮಾಡುತ್ತಿದ್ದ ಕಿರಣ್ ಕಳೆದ ತಿಂಗಳು ಹೊಸ ಸರ್ಕಾರಿ ಕಾರನ್ನು ಅಪಘಾತ ಮಾಡಿದ್ದನು. ಅಪಘಾತದ ನಂತರ ಕಚೇರಿಯಲ್ಲೇ ಕಾರು ಬಿಟ್ಟು ತೆರಳಿದ್ದನು.

ಕಿರಣ್ ನಡವಳಿಕೆಯಿಂದ ಕೋಪಗೊಂಡಿದ್ದ ಪ್ರತಿಮಾ, 10 ದಿನಗಳ ಹಿಂದೆ ಕೆಲಸದಿಂದ ತೆಗೆದು ಹಾಕಿದ್ದರು. ಈ ವೇಳೆ ಪ್ರತಿಮಾ ಕಾಲಿಗೆ ಬಿದ್ದು ಕೆಲಸಕ್ಕೆ ಸೇರಿಸಿಕೊಳ್ಳುವಂತೆ ಬೇಡಿಕೊಂಡಿದ್ದನು. ಆದರೆ ಪ್ರತಿಮಾ ಅವರು ಕಿರಣ್‍ನನ್ನು ಮತ್ತೆ ಕೆಲಸಕ್ಕೆ ಸೇರಿಸಿಕೊಳ್ಳಲು ನಿರಾಕರಿಸಿದ್ದರು. ಇದೇ ಕಾರಣಕ್ಕೆ ಪ್ರತಿಮಾ ಮೇಲೆ ದ್ವೇಷಕಾರಿದ್ದನು.

ಕೊಲೆ ದಿನವೂ ಪ್ರತಿಮಾ ಕಾಲಿಗೆ ಬಿದ್ದು ಕೆಲಸಕ್ಕೆ ಸೇರಿಸಿಕೊಳ್ಳುವಂತೆ ದುಂಬಾಲು ಬಿದ್ದಿದ್ದನು. ಆದರೆ ಆಕೆ ಅದನ್ನು ತಿರಸ್ಕರಿಸಿದ್ದರಿಂದ ಶನಿವಾರ ಮನೆ ಬಳಿಯೇ ಕಾದು ಕುಳಿತು ಹೊಂಚು ಹಾಕಿ ಕೊಲೆ ಮಾಡಿ ಕಿರಣ್ ಎಸ್ಕೇಪ್ ಆಗಿದ್ದನು.

ಒಕ್ಕಲಿಗ ಸಂಪ್ರದಾಯದಂತೆ ನಡೆದ ಅಂತ್ಯಕ್ರಿಯೆ

ತೀರ್ಥಹಳ್ಳಿ ಪಟ್ಟಣದ ಸಮೀಪದ ತುಡುಕಿಯಲ್ಲಿ ಒಕ್ಕಲಿಗ ಸಂಪ್ರದಾಯದಂತೆ ಅಂತಿಮ ವಿಧಿ ವಿಧಾನ ನಡೆಸಿ ನಂತರ ಕುರುವಳ್ಳಿಯ ಹಿಂದೂ ರುದ್ರ ಭೂಮಿಯಲ್ಲಿ ಪ್ರತಿಮಾ ಪುತ್ರ ಪಾರ್ಥನಿಂದ ಮೃತದೇಹಕ್ಕೆ ಅಗ್ನಿ ಸ್ಪರ್ಶ ಮಾಡಿಸಲಾಯಿತು.

ಈ ವೇಳೆ ಕುಟುಂಬಸ್ಥರು ಮಾತನಾಡಿ ಪ್ರತಿಮಾ ಸಾವಿಗೆ ಕಾರಣರಾದವರಿಗೆ ಸೂಕ್ತ ಶಿಕ್ಷೆ ನೀಡಬೇಕು. ದಕ್ಷ ಅಧಿಕಾರಿ ಹಾಗೂ ಪ್ರತಿಭಾವಂತ ಹೆಣ್ಣು ಮಗುವನ್ನು ಕಳೆದುಕೊಂಡಿದ್ದೇವೆ. ಸರ್ಕಾರ ಮಹಿಳಾ ಅಧಿಕಾರಿಗಳಿಗೆ ಸೂಕ್ತ ಭದ್ರತೆ ನೀಡಬೇಕು. ಸುಳ್ಳು ಸುದ್ಧಿಗಳಿಗೆ ಜನರು ಕಿವಿಕೊಡಬೇಡಿ. ಅವರ ಕುಟುಂಬ ಅನ್ಯೋನ್ಯ ವಾಗಿತ್ತು. ದಂಪತಿಗಳು ತುಂಬಾ ಚನ್ನಾಗಿ ಇದ್ದರು. ಇಂತಹ ದಕ್ಷ ಅಧಿಕಾರಿಗಳನ್ನು ನಾವು ಕಳೆದುಕೊಂಡ ಬಡವರಾಗಿದ್ದೇವೆ. ಎಲ್ಲರೂ ಪ್ರತಿಮಾ ಮಾದರಿಯಾಗಿದ್ದರು ಎಂದರು.

ಪ್ರತಿಮಾ ಅಂತ್ಯಸಂಸ್ಕಾರದಲ್ಲಿ ಬಂಧು- ಬಳಗದವರು, ಗ್ರಾಮಸ್ಥರು ಸೇರಿ ನೂರಾರು ಜನ ಭಾಗಿಯಾಗಿದ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ

ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ A 9-foot-long python was safely rescued from behind a…

2 hours ago

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ – ಕೆರೆಗೆ ಹಾರಿ ಸಾಗರದ ಯುವತಿ

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ - ಕೆರೆಗೆ ಹಾರಿ ಸಾಗರದ ಯುವತಿ A 22-year-old woman from Sagara…

8 hours ago

ಬೆದರಿಸಿ ಹಣ, ಮೊಬೈಲ್ ದೋಚಿದ್ದ ಮೂವರು ಆರೋಪಿಗಳು ಪೊಲೀಸರ ಬಲೆಗೆ

ಬೆದರಿಸಿ ಹಣ, ಮೊಬೈಲ್ ದೋಚಿದ್ದ ಆರೋಪಿಗಳು ಪೊಲೀಸರ ಬಲೆಗೆ Shivamogga Tunganaagar police arrested three accused in a…

1 day ago

ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ

ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ Six people were arrested for…

1 day ago

ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ

ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ South Western Railway extends temporary stoppages…

1 day ago

ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ

ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ Tourist bus and fish transport goods vehicle…

1 day ago