Breaking
12 Jan 2026, Mon

ಆಸ್ತಿ ವಿಚಾರಕ್ಕೆ ಕಲಹ – ಪೆಟ್ರೋಲ್ ಸುರಿದು,ಬೆಂಕಿ ಹಚ್ಚಿ ಚಿಕ್ಕಪ್ಪನ ಕೊಲೆಗೈದ ದುರುಳರು |Crime News

ಆಸ್ತಿ ವಿಚಾರಕ್ಕೆ ಕಲಹ – ಪೆಟ್ರೋಲ್ ಸುರಿದು,ಬೆಂಕಿ ಹಚ್ಚಿ ಚಿಕ್ಕಪ್ಪನ ಕೊಲೆಗೈದ ದುರುಳರು
ಶಿವಮೊಗ್ಗ : ಬೆಳಲಕಟ್ಟೆ ಗ್ರಾಮದಿಂದ ಮಗಳ ಮನೆಗೆ ಹೋಗುತ್ತಿದ್ದ ವ್ಯಕ್ತಿಯೊಬ್ಬರನ್ನು ಪೆಟ್ರೋಲ್ ಎರಚಿ ಜೀವಂತವಾಗಿ ಸುಟ್ಟಿರುವ ಘಟನೆ ನಡೆದಿದೆ.

ಬೆಳಲಕಟ್ಟೆ ಗ್ರಾಮದ  ಮಹೇಶಪ್ಪ (60) ಕೊಲೆಯಾದ ವ್ಯಕ್ತಿ. ಬಿಕ್ಕೋನಹಳ್ಳಿಯ ಮಗಳ ಮನೆಯಿಂದ ಬರುತ್ತಿದ್ದ ವೇಳೆ ಅಡ್ಡಗಟ್ಟಿ ಪೆಟ್ರೋಲ್ ಎರಚಿ ಕೊಲೆ ಮಾಡಲಾಗಿದೆ.

ಬೆಳಲಕಟ್ಟೆಯ ಕಾರ್ತಿಕ್ ಮತ್ತು ಕುಮಾರ್ ಎಂಬುವರಿಂದ ಈ ಕೃತ್ಯ ನೆಡೆದಿದೆ. ಮಹೇಶಪ್ಪನವರಿಗೆ ಬೆಳಲಕಟ್ಟೆಯಲ್ಲಿ ಮೂರು ಎಕರೆ ಜಮೀನು ಇದ್ದು ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿತ್ತು. ಕುಮಾರ್, ಕಾರ್ತಿಕ್  ಹಾಗೂ ಮಹೇಶಪ್ಪನವರಿಗೆ  ಜಮೀನಿನ ವಿಚಾರದಲ್ಲಿ ಮನಸ್ಥಾಪವಿತ್ತು. ಈ ಮನಸ್ಥಾಪವೇ ಮಹೇಶಪ್ಪನವರನ್ನ‌ ಜೀವಂತ ಸುಡಲು ಕಾರಣವೆಂದು ಕುಟುಂಬ ಆರೋಪಿಸಿದೆ.

ಕುಮಾರ್, ಕಾರ್ತಿಕ್ ಮತ್ತು ಇತರರ ಹೆಸರನ್ನ ಸುಟ್ಟ ಸ್ಥಿತಿಯಲ್ಲಿ ಮಹೇಶಪ್ಪ ಹೇಳಿರುವುದನ್ನ ಸ್ಥಳೀಯರು ವಿಡಿಯೋ ಮಾಡಿಕೊಂಡಿದ್ದಾರೆ. ಇದನ್ನ ಡೆತ್ ನೋಟ್ ಎಂದು ಪರಿಗಣಿಸಲಾಗುತ್ತದೆಯೇ ಎಂದು ಕಾದುನೋಡಬೇಕಿದೆ.

ತಕ್ಷಣವೇ ಮೆಗ್ಗಾನ್ ಆಸ್ಪತ್ರೆಗೆ ಮಹೇಶಪ್ಪ ಅವರನ್ನು ಸಾಗಿಸಲಾಯಿತಾದರೂ ಮೆಗ್ಗಾನ್ ನಲ್ಲಿ ಮಹೇಶಪ್ಪ ಕೊನೆ ಉಸಿರೆಳೆದಿದ್ದಾರೆ.

About The Author

By ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Leave a Reply

Your email address will not be published. Required fields are marked *

Exit mobile version