ಕ್ರೂರಿ ವಿಧಿಯಾಟಕ್ಕೆ ಬಲಿಯಾದ “ನವೀನ್” ಈತನ ಕಥೆ ಕೇಳಿದ್ರೆ ಕಣ್ಣೀರು “ಗ್ಯಾರಂಟಿ”..!| Postman Exclusive

ಕ್ರೂರಿ ವಿಧಿಯಾಟಕ್ಕೆ ಬಲಿಯಾದ “ನವೀನ್” ಈತನ ಕಥೆ ಕೇಳಿದ್ರೆ ಕಣ್ಣೀರು “ಗ್ಯಾರಂಟಿ”..!

ನಗುತೈತೆ ದೈವ ಅಲ್ಲಿ – ಅಳುತೈತೆ ಹಿರಿಯ ಜೀವ ಇಲ್ಲಿ….!!!ವಿಧಿಯಾಟ ಬಲ್ಲವರು ಯಾರು..???


ರಿಪ್ಪನ್‌ಪೇಟೆ : ಪ್ರತಿಯೊಬ್ಬರ ಬಾಳಲ್ಲಿ ವಿಧಿ ಎಂಬ ಕ್ರೂರಿ ಹೇಗೆಲ್ಲ ಆಟವಾಡುತ್ತದೆ ಎಂಬುವುದಕ್ಕೆ ಪಟ್ಟಣದ ಸಮೀಪದ ವಡಗೆರೆ ಶಾಲೆಯ ಮುಂಭಾಗ ಗುರುವಾರ ಸಂಜೆ ಬೈಕ್ ಅಪಘಾತದಲ್ಲಿ ಮೃತಪಟ್ಟ ಯುವಕನ ಕಥೆಯೇ ಸ್ಪಷ್ಟ ಉದಾಹರಣೆ, ಯುವಕನ ಕುಟುಂಬದ ಕಥೆಯನ್ನು ನೀವೊಮ್ಮೆ ಕೇಳಿದ್ರೆ ನಿಮ್ಮ ಕಣ್ಣಂಚಲ್ಲಿ ಕಣ್ಣೀರು ಬರದೇ ಇರದು.

ಬೈಕ್ ಅಪಘಾತದಲ್ಲಿ ಸ್ಥಳದಲ್ಲಿಯೇ ಮೃತಪಟ್ಟ ಯುವಕ ನವೀನ್ ಕುಮಾರ್ ಕುಟುಂಬಕ್ಕೆ 2023ನೇ ಇಸವಿ ಕರಾಳ ವರ್ಷವಾಗಿದೆ.ನವೀನ್ ಕುಮಾರ್ ರವರ ತುಂಬು ಕುಟುಂಬದಲ್ಲಿ ಅಜ್ಜ ಉಡುಪ ,ಅಜ್ಜಿ ಚಂದ್ರಮ್ಮ ತಂದೆ ಗಣಪತಿ ,ತಾಯಿ ಲಲಿತಮ್ಮ ಹಾಗೂ ತಂಗಿ ಉಷಾ ಸಂತೋಷ ಹಾಗೂ ಸಂಭ್ರಮದಿಂದ 2023 ನೇ ವರ್ಷವನ್ನು ಸ್ವಾಗತಿಸಿದ್ದರು.

ಆದರೆ ವಿಧಿಯ ಆಟವೇ ಬೇರೆಯಾಗಿತ್ತು ಕಳೆದ ಹತ್ತು ತಿಂಗಳ ಹಿಂದೆ ಫೆಬ್ರವರಿಯಲ್ಲಿ ನವೀನ್ ತಂದೆ ಗಣಪತಿ ರವರು ಮಗಳ ಮದುವೆಗೆ ಜವುಳಿ ತರಲು ಸಾಗರಕ್ಕೆ ತೆರಳಿದ್ದಾಗ ಬೈಕ್ ಅಪಘಾತದಲ್ಲಿ ಮೃತಪಟ್ಟಿದ್ದರು.

ತಂದೆ ಸಾವನ್ನಪ್ಪಿ ಕೇವಲ ಒಂದೂವರೆ ತಿಂಗಳಿನಲ್ಲಿ ಅಜ್ಜ ಉಡುಪ ರವರು ಉಸಿರಾಟದ ತೊಂದರೆಯಿಂದ(ದಮ್ಮು) ಮೃತಪಟ್ಟು ಕುಟುಂಬಕ್ಕೆ ಇನ್ನಷ್ಟು ಅಘಾತವಾಗಿತ್ತು. ಆ ನೋವಿನಲ್ಲಿ ಇರುವಾಗಲೇ ಮತ್ತೆ ಒಂದು ತಿಂಗಳ ಅಂತರದಲ್ಲಿ ಅಜ್ಜಿ ಚಂದ್ರಮ್ಮ ರವರು ಸಹ ಪಾರ್ಶವಾಯುವಿನಿಂದ ಮೃತಪಟ್ಟಿದ್ದರು.

ಮನೆಯಲ್ಲಿಯೇ ಕೃಷಿ ಕೆಲಸ ಮಾಡಿಕೊಂಡಿದ್ದ ನವೀನ್ ಸ್ಣೇಹಿತನ ಬಳಿ ಬೈಕ್ ಪಡೆದುಕೊಂಡು ರಿಪ್ಪನ್‌ಪೇಟೆಗೆ ಬಂದು ಹಿಂದಿರುಗುತಿದ್ದಾಗ ವಡಗೆರೆ ಶಾಲೆ ಮುಂಭಾಗದಲ್ಲಿ ಎದುರಿನಿಂದ ಬಂದ ಕಾರಿನ ಸೈಡ್ ಮಿರರ್ ತಾಗಿ ಒಮ್ಮೆಲೆ ತಿರುಗಿಬಿದ್ದ ಹಿನ್ನಲೆಯಲ್ಲಿ ರಸ್ತೆ ಮುಖ ಅಪ್ಪಳಿಸಿ ಸ್ಥಳದಲ್ಲೇ ಸಾವನ್ನಪ್ಪಿದ್ದನು.


ಕುಟುಂಬದ ಹಿರಿಯರ ಅಗಲಿಕೆಯಿಂದ ಈಗಷ್ಟೇ ಚೇತರಿಸಿಕೊಳ್ಳುತಿದ್ದ ಕುಟುಂಬಕ್ಕೆ ನವೀನ್ ಕುಮಾರ್ ಸಾವು ಸಿಡಿಲೆರಗಿದಂತಾಗಿದೆ. ಜೀವನ ರೂಪಿಸಿಕೊಂಡು ಬದುಕಿ ಬಾಳಬೇಕಿದ್ದ ಪುತ್ರನ ಅಗಲಿಕೆ ತಾಯಿ ಲಲಿತಮ್ಮ ರವರನ್ನು ಎಷ್ಟು ಕಂಗೆಡಿಸಿರಬೇಡ……

ಒಂದೇ ವರ್ಷದಲ್ಲಿ ಕುಟುಂಬದ ಮೂವರನ್ನು ಮಣ್ಣಿನ ವಶ ಮಾಡಿ ಸಂಕಷ್ಟದಲ್ಲಿದ್ದ ಕುಟುಂಬದಲ್ಲಿ ಮತ್ತೊಂದು ಅಘಾತ ಕ್ರೂರಿ ವಿಧಿಯಾಟಕ್ಕೆ ಸಾಕ್ಷಿಯಾಗಿದೆ.

ಕೆಲವೇ ದಿನಗಳ ಅಂತರದಲ್ಲಿ ಕುಟುಂಬದ ನಾಲ್ವರನ್ನು ಕಳೆದುಕೊಂಡು ಒಬ್ಬಂಟಿಯಾದ ತಾಯಿ ಲಲಿತಮ್ಮಳ ಕಣ್ಣೀರ ಕೋಡಿಯನ್ನು ಕಂಡು ಕ್ರೂರ ವಿಧಿಯ ಕಣ್ಣಂಚಿನಲ್ಲಿ ನೀರು ಜಿನುಗಿರಬಹುದೇ……

ನೊಂದ ಹಿರಿಯ ಜೀವಕ್ಕೆ ಹೆತ್ತು ಹೊತ್ತು ಬೆಳೆಸಿದ ಪುತ್ರನ ಅಕಾಲಿಕ ಸಾವಿನ ನೋವನ್ನು ಭರಿಸುವ ಶಕ್ತಿ ಆ ಭಗವಂತ ನೀಡುವಂತಾಗಲಿ……


ಬೇಸರದಿಂದ….

🔵ರಫ಼ಿ ರಿಪ್ಪನ್‌ಪೇಟೆ

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆಯಲ್ಲಿ ಮೋದಿ ಜನ್ಮದಿನಾಚರಣೆ : ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ

ರಿಪ್ಪನ್‌ಪೇಟೆಯಲ್ಲಿ ಮೋದಿ ಜನ್ಮದಿನಾಚರಣೆ : ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ Special pooja was offered at Varasiddhi…

19 hours ago

ಪ್ರಧಾನಿ ಮೋದಿ ಜನ್ಮದಿನ: ಶಿವಮೊಗ್ಗದಲ್ಲಿ ‘ಸೇವಾ ಸಂಕಲ್ಪ ಅಭಿಯಾನ’ಕ್ಕೆ ಚಾಲನೆ

ಪ್ರಧಾನಿ ಮೋದಿ ಜನ್ಮದಿನ: ಶಿವಮೊಗ್ಗದಲ್ಲಿ ‘ಸೇವಾ ಸಂಕಲ್ಪ ಅಭಿಯಾನ’ಕ್ಕೆ ಚಾಲನೆ BJP launches a month-long Seva Sankalpa Abhiyan…

19 hours ago

ಮೋದಿ ಹುಟ್ಟುಹಬ್ಬ ‘ನಿರುದ್ಯೋಗಿಗಳ ದಿನ’ವಾಗಿ ಆಚರಣೆ; ಯುವ ಕಾಂಗ್ರೆಸ್ ಪ್ರತಿಭಟನೆ

ಮೋದಿ ಹುಟ್ಟುಹಬ್ಬ ‘ನಿರುದ್ಯೋಗಿಗಳ ದಿನ’ವಾಗಿ ಆಚರಣೆ; ಯುವ ಕಾಂಗ್ರೆಸ್ ಪ್ರತಿಭಟನೆ Youth Congress and NSUI workers in Shivamogga…

19 hours ago

ಶಿವಮೊಗ್ಗ ಲೋಕಾಯುಕ್ತ ಎಸ್‌ಪಿಯಾಗಿ ಆಂಟನಿ ಜಾನ್ ನೇಮಕ

ಶಿವಮೊಗ್ಗ ಲೋಕಾಯುಕ್ತ ಎಸ್‌ಪಿಯಾಗಿ ಆಂಟನಿ ಜಾನ್ ನೇಮಕ Anthony John has been appointed as the new Lokayukta…

19 hours ago

ಕಡವೆ ಬೇಟೆ ಮಾಡಿ ಮಾಂಸ ಕತ್ತರಿಸುತ್ತಿದ್ದಾಗಲೇ ದಾಳಿ! ಮೂವರ ಬಂಧನ | 70 ಕೆ.ಜಿ. ಮಾಂಸ , ಬಂದೂಕು ಜಪ್ತಿ

ಕಡವೆ ಬೇಟೆ ಮಾಡಿ ಮಾಂಸ ಕತ್ತರಿಸುತ್ತಿದ್ದಾಗಲೇ ದಾಳಿ! ಮೂವರ ಬಂಧನ | 70 ಕೆ.ಜಿ. ಮಾಂಸ , ಬಂದೂಕು ಜಪ್ತಿ…

1 day ago

ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ

ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ One-month skill development training on bakery product preparation…

2 days ago