ಬ್ಯಾಂಕ್ ಲೋನ್ ನೀಡುವವರು ಎಂದು ಮನೆಗೆ ನುಗ್ಗಿ ದರೋಡೆ – ಇಬ್ಬರ ಬಂಧನ | Robbery
ಹೊಳೆಹೊನ್ನೂರು ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ಇತ್ತೀಚೆಗೆ ಮನೆಯೊಂದಕ್ಕೆ ನುಗ್ಗಿ ವ್ಯಕ್ತಿಯೊಬ್ಬನ ಮೊಬೈಲ್ ಹಾಗೂ ಹಣ ಮತ್ತು ಆಭರಣ ಕಿತ್ತುಕೊಂಡು ಹೋಗಿರುವ ಕೇಸ್ವೊಂದು ದಾಖಲಾಗಿತ್ತು. ಬ್ಯಾಂಕ್ ಲೋನ್ ನೀಡುವವರು ಎಂದು ಹೇಳಿಕೊಂಡು ಒಳಕ್ಕೆ ನುಗ್ಗಿದ್ದ ಆರೋಪಿಗಳು ಈ ಕೃತ್ಯವೆಸಗಿದ್ದರು. ಸದ್ಯ ಪ್ರಕರಣವನ್ನು ಹೊಳೆಹೊನ್ನೂರು ಪೊಲೀಸರು ಭೇದಿಸಿದ್ದಾರೆ.
ದಿನಾಂಕ: 11-12-2023 ರಂದು ಹೊಳೆಹೊನ್ನೊರು ಪೊಲೀಸ್ ಸ್ಟೇಷನ್ ವ್ಯಾಪ್ತಿಯ ಬೀ ಬೀರನಹಳ್ಳಿ ಗ್ರಾಮದಲ್ಲಿ ವ್ಯಕ್ತಿಯೊಬ್ಬರ ಮನೆಗೆ ಅಪರಿಚಿತರು ನುಗ್ಗಿ ಆತನ ಮೇಲೆ ಹಲ್ಲೆ ಮಾಡಿ ನಗದು, ಬಂಗಾರದ ಆಭರಣ ಹಾಗೂ ಮೊಬೈಲ್ ಅನ್ನು ಕಿತ್ತುಕೊಂಡು ಹೋಗಿರುತ್ತರೆಂದು ನೀಡಿದ ದೂರಿನ ಮೇರೆಗೆ ಹೊಳೆಹೊನ್ನೂರು ಪೊಲೀಸ್ ಸ್ಟೇಷನ್ ಗುನ್ನೆ ಸಂಖ್ಯೆ 0367/2023 ಕಲಂ 394 ಐ.ಪಿ.ಸಿ ರೀತ್ಯಾ ಪ್ರಕರಣ ದಾಖಲಿಸಿ ಕೊಳ್ಳಲಾಗಿತ್ತು.
ಈ ಕೇಸ್ನ ಸಂಬಂಧ ಹೊಳೆಹೊನ್ನೂರು ಠಾಣಾ ಪೊಲೀಸ್ ನಿರೀಕ್ಷಕರಾದ ಆರ್ ಎಲ್ ಲಕ್ಷ್ಮೀಪತಿ ರವರ ನೇತೃತ್ವದಲ್ಲಿ, ಚಂದ್ರಶೇಖರ ಪಿ.ಎಸ್.ಐ ರಮೇಶ ಪಿ.ಎಸ್.ಐ ಹಾಗೂ ಸಿಬ್ಬಂದಿಗಳಾದ ಹೆಚ್. ಸಿ ಲಿಂಗೇಗೌಡ, ಮಂಜುನಾಥ, ಕುಮಾರ,ಪ್ರಸನ್ನ, ಮತ್ತು ಪಿಸಿ ವಿಶ್ವನಾಥ, ಚಂದ್ರಶೇಖರ್ ಮತ್ತು ಪ್ರಮೋದ ರವರನ್ನೊಳಗೊಂಡ ತನಿಖಾ ತಂಡವನ್ನು ರಚನೆಯಾಗಿತ್ತು.
ಸದ್ಯ ತನಿಖಾ ತಂಡವು ದಿನಾಂಕ: 21-12-2023 ರಂದು ಪ್ರಕರಣದ ಆರೋಪಿತರಾದ 1)ದರ್ಶನ್ ಪಿ @ ದರ್ಶಿ, 22 ವರ್ಷ, ಹಳೇ ಭಂಡಾರಹಳ್ಳಿ ಭದ್ರಾವತಿ ಮತ್ತು 2) ವಿಜಯ @ವಿಜಿ, 23 ವರ್ಷ, ಹಳೇ ಭಂಡಾರಹಳ್ಳಿ ಭದ್ರಾವತಿ ರವರನ್ನು ದಸ್ತಗಿರಿ ಮಾಡಿ, ಆರೋಪಿತರಿಂದ ಅಂದಾಜು ಮೌಲ್ಯ 15000/- ರೂ ಗಳ 3 ಗ್ರಾಂ ಬಂಗಾರದ ಆಭರಣವನ್ನು ಅಮಾನತ್ತು ಪಡಿಸಿಕೊಂಡಿದೆ.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್