ಲೋಕಸಭಾ ಚುನಾವಣೆಗೆ ವಿಜಯೇಂದ್ರ ಟೀಂ ರೆಡಿ – ಮಾಜಿ ಸಚಿವ ಹರತಾಳು ಹಾಲಪ್ಪ ರವರಿಗೆ ಮಹತ್ತರ ಹುದ್ದೆ | BJP
ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ನೇಮಕವಾದ ಬಳಿಕ ಬಿ.ವೈ.ವಿಜಯೇಂದ್ರ ಪಕ್ಷದ ರಾಜ್ಯ ಘಟಕಕ್ಕೆ ನೂತನ ಪದಾಧಿಕಾರಿಗಳು ಹಾಗೂ ವಿವಿಧ ಮೋರ್ಚಾಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಮಾಜಿ ಸಚಿವರಾದ ಹರತಾಳು ಹಾಲಪ್ಪ ರವರನ್ನು ರಾಜ್ಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಪದಾಧಿಕಾರಿಗಳ ವಿವರ :
ರಾಜ್ಯ ಉಪಾಧ್ಯಕ್ಷರು: ಮುರುಗೇಶ್ ನಿರಾಣಿ, ಭೈರತಿ ಬಸವರಾಜ್, ರಾಜುಗೌಡ ನಾಯಕ್, ಎನ್.ಮಹೇಶ್, ಅನಿಲ್ ಬೆನಕೆ, ಹರತಾಳು ಹಾಲಪ್ಪ, ರೂಪಾಲಿ ಸಂತೋಷ್ ನಾಯಕ್, ಡಾ.ಬಸವರಾಜ ಕೇಲಗಾರ, ಮಾಳವಿಕಾ ಅವಿನಾಶ್, ಎಂ.ರಾಜೇಂದ್ರ.
ರಾಜ್ಯ ಪ್ರಧಾನ ಕಾರ್ಯದರ್ಶಿಗಳು: ವಿ.ಸುನೀಲ್ ಕುಮಾರ್, ಪಿ.ರಾಜೀವ್, ಎನ್.ಎಸ್.ನಂದೀಶ್ ರೆಡ್ಡಿ, ಜೆ.ಪ್ರೀತಮ್ ಗೌಡ.
ಕಾರ್ಯದರ್ಶಿಗಳು:ಶೈಲೇಂದ್ರ ಬೆಲ್ದಾಳೆ, ಡಿ.ಎಸ್.ಅರುಣ್, ಬಸವರಾಜ ಮತ್ತೀಮೋಡ್, ಸಿ.ಮುನಿರಾಜು, ವಿನಯ್ ಬಿದರೆ, ಕ್ಯಾಪ್ಟನ್ ಬ್ರಿಜೇಶ್ ಚೌಟ, ಶರಣು ತಳ್ಳಿಕೇರಿ, ಲಲಿತಾ ಅನಾಪುರ, ಡಾ.ಲಕ್ಷ್ಮಿ ಅಶ್ವಿನ್ ಗೌಡ, ಅಂಬಿಕಾ ಹುಲಿನಾಯ್ಕರ್. ರಾಜ್ಯ ಖಜಾಂಚಿ: ಸುಬ್ಬ ನರಸಿಂಹ.
ಮೋರ್ಚಾಗಳ ರಾಜ್ಯ ಅಧ್ಯಕ್ಷರು:
ಮಹಿಳಾ ಮೋರ್ಚಾ-ಸಿ.ಮಂಜುಳಾ
ಯುವ ಮೋರ್ಚಾ-ಧೀರಜ್ ಮುನಿರಾಜು
ಎಸ್.ಟಿ.ಮೋರ್ಚಾ-ಬಂಗಾರು ಹನುಮಂತು
ಎಸ್.ಸಿ.ಮೋರ್ಚಾ-ಎಸ್.ಮಂಜುನಾಥ್(ಸಿಮೆಂಟ್ ಮಂಜು)
ಹಿಂದುಳಿದ ವರ್ಗಗಳ ಮೋರ್ಚಾ-ರಘು ಕೌಟಿಲ್ಯ
ರೈತ ಮೋರ್ಚಾ-ಎ.ಎಸ್.ಪಾಟೀಲ್ ನಡಹಳ್ಳಿ
ಅಲ್ಪಸಂಖ್ಯಾತ ಮೋರ್ಚಾ-ಅನಿಲ್ ಥಾಮಸ್
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್