ಸಾಮಾಜಿಕ ಜಾಲತಾಣದಲ್ಲಿ ಭದ್ರಾವತಿ ಶಾಸಕರ ವಿರುದ್ಧ ಪೋಸ್ಟ್ – ಬಿಜೆಪಿ ಕಾರ್ಯಕರ್ತನ ಕಾರು ಜಖಂ | Bdvt

ಸಾಮಾಜಿಕ ಜಾಲತಾಣದಲ್ಲಿ ಭದ್ರಾವತಿ ಶಾಸಕರ ವಿರುದ್ಧ ಪೋಸ್ಟ್ – ಬಿಜೆಪಿ ಕಾರ್ಯಕರ್ತನ ಕಾರು ಜಖಂ
ಫೇಸ್ ಬುಕ್ ನಲ್ಲಿ ಭದ್ರಾವತಿ ಶಾಸಕರ ವಿರುದ್ದ ಬರೆದುಕೊಂಡಿದ್ದ ಬಿಜೆಪಿ ಕಾರ್ಯಕರ್ತನ ಕಾರಿನ ಗ್ಲಾಜುಗಳನ್ನ ಪುಡಿ ಪುಡಿ ಮಾಡಲಾಗಿದೆ.‌ ಇದರಿಂದ ಮತ್ತೊಂದು ಬಲಪ್ರಯೋಗದ ರಾಜಕಾರಣಕ್ಕೆ ಭದ್ರಾವತಿ ಸಾಕ್ಷಿಯಾಗಿದೆ.

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ ವಿರುದ್ದ ಬರೆದುಕೊಂಡಿದ್ದ ಬಿಜೆಪಿ ಯುವ‌ ಮೋರ್ಚಾ ಕಾರ್ಯಕರ್ತ ಗೋಕುಲ್ ಅವರ ಮನೆಯ ಮುಂದೆ ನಿಂತಿದ್ದ ಸ್ವಿಫ್ಟ್ ಕಾರಿನ ಗ್ಲಾಜುಗಳನ್ನ ಒಂದೇ ಬೈಕಿನಲ್ಲಿ ಬಂದ ಮೂವರು ಕಿಡಿಗೇಡಿಗಳು ಒಡೆದುಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಬೈಕ್ ನಲ್ಲಿ ಬಂದವರು ಶಾಸಕರ ಹಿಂಬಾಲಕರು ಎಂದು ಸಹ ದೂರಲಾಗಿದೆ.

ಫೇಸ್ ಬುಕ್ ನಲ್ಲಿ ಶಾಸಕರ ವಿರುದ್ದ ಮಂಗಳೂರಿನ ದೀಪಕ್ ನವರು ಪ್ರಸ್ತಾಪಿಸಿರುವ ಓಸಿ‌, ಮಟ್ಕಾ ಕುರಿತ ವಿಡಿಯೋವನ್ನ ಹಾಕಿಕೊಂಡ ಗೋಕುಲ್  ಚುನಾವಣೆಯ ವೇಳೆ ಕೆಲಸ ಕೊಡಿಸುವುದಾಗಿ ಮತ್ತು ಎಂಪಿಎಂ ಕಾರ್ಖಾನೆ ಆರಂಭಿಸುವುದಾಗಿ ಹೇಳಿಕೊಂಡಿದ್ದ ಶಾಸಕರು, ಕಾರ್ಖಾನೆ ಆರಂಭಿಸದಿದ್ದರೆ ರಾಜಕೀಯ ನಿವೃತ್ತಿ ಘೋಷಿಸಿದ್ದರು. ಕನಕ ಮಂಟಪದಲ್ಲಿ ನಡೆದ ಕಾರ್ಯಕ್ರಮದಲ್ಲಿ  ಸಿದ್ದರಾಮಯ್ಯ, ಡಿಕೆಶಿ ಮತ್ತು ಭದ್ರಾವತಿ ಶಾಸಕರಿಗೆ ಎಂಪಿಎಂ ಆರಂಭಿಸುವುದಾಗಿ ಭರವಸೆ ನೀಡಿದ್ದರು. ಒಸಿ ಮತ್ತು ಮಟ್ಕಾ ನಿಲ್ಲಿಸಿ ಕಾರ್ಖಾನೆ ಆರಂಭಿಸಿ ಎಂದು ಗೋಕುಲ್ ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕಿಕೊಂಡಿದ್ದರು.

ಇದು ಕಾರಿನ ಗ್ಲಾಜು ಒಡೆಯಲು ಕಾರಣ ಎಂದು ಸಂತ್ರಸ್ತ ಗೋಕುಲ್ ಸುದ್ದಿಲೈವ್ ಗೆ ತಿಳಿಸಿದ್ದಾರೆ. ಕಿಡಿಗೇಡಿಗಳು ಕಾರು ಜಖಂಗೊಳಿಸುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಗೋಕುಲ್  ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ನಾಗಿದ್ದಾನೆ.

ಈ ಬಾರಿ ಗೆದ್ದರೆ, ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದರೆ ಎಂಪಿಎಂ ಕಾರ್ಖಾನೆ ಓಪನ್ ಮಾಡಿಸ್ತೀನಿ. ಕಾರ್ಖಾನೆ ಓಪನ್ ಮಾಡಿಸದಿದ್ದರೆ ರಾಜಕೀಯ ನಿವೃತ್ತಿ ತೆಗೆದುಕೊಳ್ಳುವುದಾಗಿ ಹೇಳಿದ್ದ ಶಾಸಕ ಸಂಗಮೇಶ್ವರ್ ಭದ್ರಾವತಿಯಲ್ಲಿ ಇಸ್ಪೀಟು, ಓಸಿ ಮತ್ತು ಕ್ರಿಕೆಟ್ ಬೆಡ್ಡಿಂಗ್ ಮೂಲಕ ಯುವಕರ ದಾರಿ ತಪ್ಪಿಸುತ್ತಿದ್ದಾರೆ. ಯುವಕರ ಭವಿಷ್ಯದ ಜೊತೆ ಚೆಲ್ಲಾಟ ಆಡುತ್ತಿರುವ ಶಾಸಕರು ಎಂಬುದಾಗಿ‌ ಫೇಸ್ ಬುಕ್ ನಲ್ಲಿ ಗೋಕುಲ್ ಬರೆದುಕೊಂಡಿದ್ದರು.

ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದಕ್ಕೆ ಗೋಕುಲ್ ಕಾರು ಜಖಂ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ಘಟನೆ ಕುರಿತು ನ್ಯೂಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಶಿವಮೊಗ್ಗದಲ್ಲಿ ರೌಡಿಶೀಟರ್ ‘ಕುಳ್ಳಿ ಕಿರಣ್’ ಬರ್ಬರ ಹತ್ಯೆ; ಪ್ರಮುಖ ಆರೋಪಿ ಉಮೇಶ್ ಮೇಲೆ ಪೊಲೀಸ್ ಫೈರಿಂಗ್

ಶಿವಮೊಗ್ಗದಲ್ಲಿ ರೌಡಿಶೀಟರ್ ‘ಕುಳ್ಳಿ ಕಿರಣ್’ ಬರ್ಬರ ಹತ್ಯೆ; ಪ್ರಮುಖ ಆರೋಪಿ ಉಮೇಶ್ ಮೇಲೆ ಪೊಲೀಸ್ ಫೈರಿಂಗ್ Shivamogga rowdy sheeter…

2 hours ago

ಜಂಬಳ್ಳಿ ಅರಣ್ಯದಲ್ಲಿ ಕಾರು ಬಿಟ್ಟು ನಾಪತ್ತೆಯಾಗಿದ್ದ ಕುಡುಮಲ್ಲಿಗೆ ಸೊಸೈಟಿ ಸಿಇಒ ಮದನ್ ಸುರಕ್ಷಿತ ಪತ್ತೆ

ಜಂಬಳ್ಳಿ ಅರಣ್ಯದಲ್ಲಿ ಕಾರು ಬಿಟ್ಟು ನಾಪತ್ತೆಯಾಗಿದ್ದ ಕುಡುಮಲ್ಲಿಗೆ ಸೊಸೈಟಿ ಸಿಇಒ ಮದನ್ ಸುರಕ್ಷಿತ ಪತ್ತೆ Kudumallige Society CEO Madan,…

3 hours ago

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು ರಿಪ್ಪನ್ ಪೇಟೆ : ಬಾಳಿನ…

17 hours ago

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ BJP leaders in Sagar have…

17 hours ago

ಈದ್ ಮಿಲಾದ್ ಮೆರವಣಿಗೆಯಲ್ಲಿ ಮಾದಕ ವ್ಯಸನ ವಿರುದ್ಧ ಸಮರ: ‘ಗಾಂಜಾ ಬೇಡ ಬ್ರೋ’ ಅಭಿಯಾನಕ್ಕೆ ಭರ್ಜರಿ ಸ್ಪಂದನೆ

ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…

24 hours ago

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…

2 days ago