ಹುಂಚ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯದರ್ಶಿ ಎರಡು ತಿಂಗಳಿಂದ ನಾಪತ್ತೆ – ಲಾಕರ್ ಗಳ ಬೀಗ ಒಡೆದ ಅಧಿಕಾರಿಗಳು
ರಿಪ್ಪನ್ಪೇಟೆ : ಹುಂಚ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯದರ್ಶಿ ನಾಪತ್ತೆಯಾಗಿದ್ದು ಈ ಹಿನ್ನಲೆಯಲ್ಲಿ ಅಧಿಕಾರಿಗಳು ಸಂಘಕ್ಕೆ ಸಂಬಂದಿಸಿದ ಲಾಕರ್ ಬೀಗ ಒಡೆದು ಪರಿಶೀಲನೆ ನಡೆಸಿರುವ ಘಟನೆ ನಡೆದಿದೆ.
ಕಳೆದ ಎರಡು ತಿಂಗಳಿಂದ ಕಾರ್ಯದರ್ಶಿ ಸಂತೋಷ್ ಕೃಷ್ಣನಾಯ್ಕ್ ಕಛೇರಿಗೆ ಹಾಜರಾಗದೇ ನಾಪತ್ತೆಯಾಗಿರುವ ಹಿನ್ನಲೆಯಲ್ಲಿ ಅಡಳಿತ ಮಂಡಳಿಯವರು ಸಾಗರ ಸಹಕಾರ ಸಂಘಗಳ ಸಹಾಯಕ ನಿಂಬಂಧಕರಿಗೆ ಮತ್ತು ಡಿ.ಆರ್.ಇವರಿಗೆ ದೂರು ನೀಡಿದ ಮೇರೆಗೆ ಶಿವಮೊಗ್ಗ ಜಿಲ್ಲಾ ಡಿ.ಆರ್.ಅದೇಶದಂತೆ ಇಂದು ಅಡಳಿತ ಮಂಡಳಿಯವರ ಸಮ್ಮುಖದಲ್ಲಿ ಲಾಕರ್ಗಳ ಬೀಗ ಒಡೆದು ಪರಿಶೀಲನೆ ನಡೆಸಲಾಗಿದೆ.
ಕಳೆದ ಸೆಪ್ಟಂಬರ್ –ಆಕ್ಟೋಬರ್ ತಿಂಗಳಿಂದ ಇಲ್ಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯನಿರ್ವಾಹಕ ಅಧಿಕಾರಿ ಸಂತೋಷ ಕೃಷ್ಣ ನಾಯ್ಕ್ ಎಂಬುವರು ಸಹಕಾರ ಸಂಘಕ್ಕೆ ಆನಧಿಕೃತವಾಗಿ ಗೈರು ಹಾಜರಾಗಿದ್ದು ಇದರಿಂದಾಗಿ ಸಂಘದ ಷೇರುದಾರ ಸದಸ್ಯರುಗಳಲ್ಲಿ ಸಾಕಷ್ಟು ಗೊಂದಲಕ್ಕೆ ಕಾರಣವಾಗಿ ನಮ್ಮ ಸಂಘದಲ್ಲಿ ಲಕ್ಷಾಂತರ ರೂಪಾಯಿಗಳ ಅವ್ಯವಹಾರ ನಡೆದಿದೆ ಎಂದು ಗುಸು ಗುಸು ಸುದ್ದಿ ಹರಡುತ್ತಿದ್ದಂತೆ ಸಂಘದ ಅಡಳಿತ ಮಂಡಳಿಯವರು ಸಂಘದ ಕಾರ್ಯದರ್ಶಿಯವರ ಸಂಪರ್ಕಕ್ಕೆ ಸಾಕಷ್ಟು ಪ್ರಯತ್ನ ನಡೆಸಲಾಗಿ ವಿಫಲವಾದರೂ.ನಂತರ ಷೇರುದಾರರಿಗೆ ಉತ್ತರಿಸಲಾಗದೇ ಕೊನೆಗೆ ಬೇರೆ ದಾರಿ ಕಾಣದೇ ಸಂಬಂಧಿಸಿದ ಸಾಗರ ಸಹಕಾರ ಸಂಘಗಳ ಸಹಾಯಕ ನಿರ್ದೇಶಕರಿಗೆ ಮತ್ತು ಜಿಲ್ಲಾ ಸಹಕಾರ ಸಂಘಗಳ ಡಿ.ಆರ್.ಇವರಿಗೆ ಲಿಖಿತ ದೂರು ಅರ್ಜಿಯನ್ನು ಸಲ್ಲಿಸಿದರ ಮೇರೆಗೆ ಡಿ.ಆರ್.ರವರು ಪೊಲೀಸ್ ಇಲಾಖೆಯವರ ಸಹಾಯದೊಂದಿಗೆ ಸಹಕಾರ ಸಂಘದ ಲಾಕರ್ನಲ್ಲಿನ ದಾಖಲೆ ಪತ್ರಗಳನ್ನು ಪರಿಶೀಲನೆ ನಡೆಸುವಂತೆ ಆದೇಶಿಸಿತ್ತು.
ಸದರಿ ಅದೇಶದಂತೆ ಇಂದು ಸಹಕಾರ ಸಂಘದ ಕ್ಷೇತ್ರಾಧಿಕಾರಿ ವೆಂಕಟಚಲಪತಿಯವರ ನೇತೃತ್ವದಲ್ಲಿ ಇಂದು ಅಡಳಿತ ಮಂಡಳಿಯವರ ಸಮ್ಮುಖದಲ್ಲಿ ಲಾಕರ್ ಒಡೆದು ಪರಿಶೀಲನೆ ನಡೆಸಿದರು.ಅವ್ಯವಹಾರದ ಮೊತ್ತದ ಬಗ್ಗೆ ಆಂತರಿಕ ಲೆಕ್ಕಪರಿಶೀಲನಾ ವರದಿಯನ್ನಾದರಿಸಿ ಬಹಿರಂಗ ಪಡಿಸಲಾಗುವುದೆಂದು ಮಧ್ಯಮ ಪ್ರತಿನಿಧಿಗಳಿಗೆ ವಿವರಿಸಿದರು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಯದುವೀರ,ಉಪಾಧ್ಯಕ್ಷ ಕಟ್ಟೆ ಹೆಚ್.ಆರ್.ರಾಘವೇಂದ್ರ, ಅಭಿಷೇಕ್ ,ಕಿರಣ್ ಬಿ ಡಿ
ಸೇರಿದಂತೆ ಸಂಘದ ಸರ್ವಸದಸ್ಯರು ಹಾಜರಿದ್ದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್