ತೀರ್ಥಹಳ್ಳಿ : ಈ ವರ್ಷದ ಮೊದಲ ಮಂಗನ ಕಾಯಿಲೆ (KFD) ಪ್ರಕರಣ ಪತ್ತೆಯಾಗಿದ್ದು, ತೀರ್ಥಹಳ್ಳಿ (Thirthahalli) ತಾಲ್ಲೂಕಿನ ಶೇಡ್ಗಾರ್ (Shedgar) ಬಳಿಯ ಅತ್ತಿಸರ ಗ್ರಾಮದ 53 ವರ್ಷದ ಮಹಿಳೆಗೆ ಆರ್ಟಿಸಿಪಿಆರ್ನಲ್ಲಿ ಪಾಸಿಟಿವ್ ಬಂದಿದೆ.
ಪಾಸಿಟಿವ್ ಬಂದ ಮಹಿಳೆ ಆರೋಗ್ಯ ಸ್ಥಿರವಾಗಿದ್ದು ಅವರನ್ನು ತೀರ್ಥಹಳ್ಳಿ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಅತ್ತಿಸರ ಕಾಡಂಚಿನ ಗ್ರಾಮವಾಗಿದ್ದು ಈ ಹಿಂದೆಯು ಈಭಾಗದಲ್ಲಿ ಕೆಎಫ್ಡಿ ಪ್ರಕರಣಗಳು ಕಂಡುಬಂದಿವೆ.
ಕೆಲ ದಿನಗಳ ಹಿಂದೆ ಕೊಪ್ಪ ತಾಲ್ಲೂಕಿನ ಗುಣವಂತೆ ಗ್ರಾಮದ ವ್ಯಕ್ತಿಯೊಬ್ಬರಿಗೆ ಪಾಸಿಟಿವ್ ಬಂದಿತ್ತು. ಮೊದಲನೆ ಟೆಸ್ಟ್ ನನಲ್ಲಿ ನೆಗೆಟಿವ್, ಎರಡನೇ ಟೆಸ್ಟ್ ನಲ್ಲಿ ಪಾಸಿಟಿವ್ ಬಂದಿದ್ದರಿಂದ ಅದನ್ನು ಆರೋಗ್ಯ ಇಲಾಖೆ ಪರಿಗಣಿಸಿರಲಿಲ್ಲ. ಅತ್ತಿಸರದಲ್ಲಿ ಪಾಸಿಟಿವ್ ಬಂದಿದ್ದು ಅರೋಗ್ಯ ಇಲಾಖೆ ಕಾಡಂಚಿನ ಗ್ರಾಮದ ಜನರಲ್ಲಿ ಜಾಗೃತಿಗೆ ಮುಂದಾಗಿದೆ. ಜನರು ಸಹಕಾರ ನೀಡಿದರೆ ಈ ಬಾರಿ ಕೂಡ ಕೆಎಫ್ಡಿಯನ್ನು ಯಶಸ್ವಿಯಾಗಿ ಎದುರಿಸಬಹುದು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್