ಹೊಸನಗರದಲ್ಲಿ ಪ್ರಪ್ರಥಮವಾಗಿ ಕ್ರೈಸ್ತ ಯುವತಿ ಮಂಡಳಿಯವರಿಂದ ಪುರುಷ ದಿನಾಚರಣೆ ಸಂಭ್ರಮ
ಹೊಸನಗರ : ಪಟ್ಟಣದ ಸಂತ ಅಂತೋನಿ ದೇವಾಲಯದ ಸಭಾಂಗಣದಲ್ಲಿ ಇಂದು ಕ್ರೈಸ್ತ ಯುವತಿ ಸಂಘದವರು ಹೊಸನಗರದಲ್ಲಿ ಪ್ರಪ್ರಥಮವಾಗಿ ಪುರುಷರ ದಿನಾಚರಣೆಯನ್ನು ಆಚರಿಸಿದರು
ಸಮಾರಂಭವನ್ನು ಸಂತ ಅಂತೋನಿ ದೇವಾಲಯದ ಧರ್ಮ ಗುರುಗಳಾದ ರೆ ಫಾ ಸೈಮನ್ ಹೊರಟರವರು ದೀಪ ಬೆಳಗಿ ಉದ್ಘಾಟಿಸಿ ಪುರುಷರ ತ್ಯಾಗ ಮನೋಭಾವ ಬೆಲೆಕಟ್ಟಲಾಗದಂತಹ ಆಸ್ತಿಯಾಗಿದ್ದಾರೆ.ಪುರುಷರು ಸಂಬಂಧ ಭಾವನೆಗಳ ಮೂಲಕ ಆದರ್ಶ ಪ್ರಾಯರಾಗಿ ಸದೃಢ ಕುಟುಂಬ ರೂಪಿಸಿಕೊಂಡು ಉತ್ತಮ ಜೀವನ ನಡೆಸುವಂತೆ ಕರೆ ನೀಡಿದರು
ಪುರುಷರ ದಿನಾಚರಣೆ ಅಂಗವಾಗಿ ಯುವತಿ ಮಂಡಳಿಯವರು ವಿಶೇಷ ಆಟೋಟ ಸ್ಪರ್ಧೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರು
ಕಾರ್ಯಕ್ರಮದಲ್ಲಿ ಹಿರಿಯ ಧರ್ಮಗುರುಗಳಾದ ರೆ ಫಾ ಅಂತೋನಿ ಡಿಸೋಜ ರೆ ಫಾ ರೋಮನ್ಪಿಂಟೋ ಹೋಲಿ ರೆಡಿಮರ್ ವಿದ್ಯಾಸಂಸ್ಥೆಯ ಪ್ರಾಂಶುಪಾಲೆ ಸಿಸ್ಟರ್ ರುಫಿನಾ ಪೀಟರ್ ಸಿಕ್ವೇರಾ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದರು.
ಅನಿತಾ ಪಿಂಟೋ ಸ್ವಾಗತಿಸಿದರೆ ಪಟ್ಟಣ ಪಂಚಾಯತಿ ಸದಸ್ಯೆ ಸಿಂಥಿಯಾ ಕಾರ್ಯಕ್ರಮ ನಿರೂಪಿಸಿದರು
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್