Ripponpete | ಕೆಂಚನಾಲ ವ್ಯಾಪ್ತಿಯಲ್ಲಿ ಕಾಡಾನೆಗಳ ದಾಳಿ – ಸ್ಥಳಕ್ಕಾಗಮಿಸದೇ ಅರಣ್ಯಾಧಿಕಾರಿಗಳ ನಿರ್ಲಕ್ಷ್ಯ | ನರಬಲಿಗಾಗಿ ಕಾಯುತ್ತಿದೆಯಾ ಅರಣ್ಯ ಇಲಾಖೆ
ರಿಪ್ಪನ್ಪೇಟೆ : ಇಲ್ಲಿನ ಕೆಂಚನಾಲ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಆಲವಳ್ಳಿ ಗ್ರಾಮದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಾಡಾನೆ ದಾಳಿ ನಡೆಸಿ ರೈತರ ಬೆಳೆಗಳನ್ನು ನಾಶಪಡಿಸಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ.
ಶುಕ್ರವಾರ ರಾತ್ರಿ ಘಟನೆ ನಡೆದಿದ್ದು ಸ್ಥಳೀಯರು ಆತಂಕದಲ್ಲಿ ಮುಂಜಾನೆಯೇ ಸ್ಥಳೀಯ ಅರಣ್ಯ ಸಿಬ್ಬಂದಿಗಳಿಗೆ ಮಾಹಿತಿ ತಿಳಿಸಿದರೂ ಸ್ಥಳಕ್ಕೆ ಬರಲು ಮೀನಮೇಷ ಎಣಿಸಿದ್ದಾರೆ,ಇಲಾಖೆಯವರು ನರಬಲಿಗಾಗಿ ಕಾಯುತ್ತಿದ್ದಾರೋ ಏನೋ..? ಎಂದು ಸ್ಥಳೀಯರು ಆರೋಪಿಸುತಿದ್ದಾರೆ
ಆಲುವಳ್ಳಿ ಗ್ರಾಮದ ಕಮದೂರು, ಮೂಡಾಗಲು, ಬಂಕಾಪುರ ಬಳಿ ಕಾಡಾನೆಗಳು ಲಗ್ಗೆಯಿಟ್ಟು ಅಡಿಕೆ, ಬಾಳೆ ತೋಟ ಧ್ವಂಸಗೊಳಿಸಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ.
ಆಲವಳ್ಳಿಯ ಮಲ್ಲಿಕಾರ್ಜುನ ಮತ್ತು ಮಲ್ಲೇಶ್ ಎಂಬುವರ ಅಡಿಕೆ ತೋಟಕ್ಕೆ ನುಗ್ಗಿ ಬಾಳೆ ಗಿಡವನ್ನು ಮುರಿದು ಹಾಕಿ ಸಾಕಷ್ಟು ನಷ್ಟ ಮಾಡಿವೆ. ಇನ್ನೂ ಬಂಕಾಪುರ, ಮೂಡಾಗಲು ಬಳಿಯ ಕಲ್ಲುಕೆರೆಯಲ್ಲಿ ನೀರು ಕುಡಿದು ನಾಗಾರ್ಜುನಸ್ವಾಮಿ ಎಂಬುವರ ಅಡಿಕೆ ತೋಟದಲ್ಲಿ ತಿರುಗಾಡಿರುವುದರೊಂದಿಗೆ ತೋಟದಲ್ಲಿನ ಹಸಿ ಹುಲ್ಲು ಮೇಯ್ದುಕೊಂಡು ತಂತಿ ಬೇಲಿ ದಾಟಿಕೊಂಡು ಸಂಪರ್ಕ ರಸ್ತೆಯಲ್ಲಿ ಹೋಗಿರುತ್ತವೆಂದು ಹೆಜ್ಜೆ ಗುರುತಿನಿಂದ ತಿಳಿಯಬಹುದಾಗಿದೆ.
ರಾತ್ರಿ ಕಾಡಾನೆ ದಾಳಿಯಾಗಿದ್ದು ಆತಂಕ್ಕೊಳಗಾದ ಸ್ಥಳೀಯರು ಮುಂಜಾನೆಯೇ ಈ ಬಗ್ಗೆ ಅರಸಾಳು ಅರಣ್ಯಾಧಿಕಾರಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ಮಾಹಿತಿ ತಿಳಿಸಿದ್ದರೂ ಸ್ಥಳಕ್ಕೆ ಶನಿವಾರ 11 ರ ಸುಮಾರಿಗೆ ಬಂದು ಕಾಟಾಚಾರಕ್ಕೆ ಸ್ಥಳ ಪರಿಶೀಲಿಸಿ ತೆರಳಿದ್ದಾರೆ, ಯಾವ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡದೇ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಸ್ಥಳೀಯರು ಆರೋಪಿಸುತಿದ್ದಾರೆ.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್