ಗ್ರಾಮೀಣ ಶಾಲಾ ಮಕ್ಕಳು ಪ್ರತಿಭಾವಂತರು – ಶಾಸಕ ಆರಗ ಜ್ಞಾನೇಂದ್ರ
ರಿಪ್ಪನ್ಪೇಟೆ : ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಯ ಮಕ್ಕಳು ಪ್ರತಿಭಾವಂತರು. ಅದು ಅನಾವರಣಗೊಳ್ಳಲು ಸೂಕ್ತ ಪರಿಸರ ಒದಗಿಸುವುದು ಶಿಕ್ಷಕರ ಕರ್ತವ್ಯ ಎಂದು ಮಾಜಿ ಗೃಹ ಸಚಿವ ಹಾಗೂ ಶಾಸಕ ಆರಗ ಜ್ಞಾನೇಂದ್ರ ಅಭಿಪ್ರಾಯಪಟ್ಟರು.
ಸಮೀಪದ ಕಾರೆಮಟ್ಟಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಶಾಲಾ ವಾರ್ಷಿಕೋತ್ಸವ ಸಮಾರಂಭ ಹಾಗೂ ರಜತ ಮಹೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿ ಗ್ರಾಮೀಣ ಪ್ರದೇಶದ ಶಾಲೆ ಕಾರೆಮಟ್ಟಿಯಲ್ಲಿ ವಾರ್ಷಿಕೋತ್ಸವದ ಅಂಗವಾಗಿ ಆಯೋಜಿಸಿರುವ ಈ ಅದ್ದೂರಿ ಕಾರ್ಯಕ್ರಮ ಎಲ್ಲಾ ಶಾಲೆಗಳಿಗೂ ಮಾದರಿಯಾಗಬೇಕು ಎಂದರು.
ಕುವೆಂಪು, ಮಾಸ್ತಿ, ಕಾರಂತರು ಹಳ್ಳಿಯಲ್ಲಿ ಹುಟ್ಟಿ ಮಹಾನ್ ಸಾಧನೆ ಮಾಡಿದ್ದಾರೆ, ತಾಯಿ ಮಗುವಿಗೆ ಹಾಲುಣಿಸುವಾಗಲೇ ಸಂಸ್ಕಾರಗಳನ್ನು ಕಲಿಸಬೇಕು. ಭಾರತ ಸಂಸ್ಕೃತಿ, ಸಂಸ್ಕಾರಗಳ ಪ್ರತೀಕವಾಗಿದೆ. ಇತ್ತೀಚಿನ ದಿನಗಳಲ್ಲಿ ವಿದ್ಯಾವಂತರಿಂದಲೇ ನೈತಿಕ ಮೌಲ್ಯಗಳು ನಶಿಸುತ್ತಿವೆ ಎಂದು ಕಳವಳ ವ್ಯಕ್ತ ಪಡಿಸಿದರು.
ಸರ್ಕಾರಿ ಶಾಲೆಯಲ್ಲಿ ಶಿಕ್ಷಣ ಪಡೆದು ವಿದ್ಯಾವಂತನಾಗಿ ಉತ್ತಮ ನೌಕರಿ ಪಡೆದು ಕೆಲವರು ಬ್ರೀಟೀಷರಂತೆ ವರ್ತಿಸುತ್ತಾರೆ,ಉತ್ತಮ
ಶಿಕ್ಷಣ ಐಪಿಎಸ್ ,ಐಎಎಸ್ ,ವಕೀಲ , ಪೊಲೀಸ್ ರಂತಹ ಅಧಿಕಾರಿಗಳನ್ನು ರೂಪಿಸುತ್ತೆ ಆದರೆ ಯೋಗ್ಯವಾದ ಮನುಷ್ಯನನ್ನು ರೂಪಿಸದೇ ಇರುವುದೇ ದುರದೃಷ್ಟಕರವಾಗಿದೆ,ಬಡವರ ರಕ್ತ ಹೀರುವ ಅಂತಕರಣವಿಲ್ಲದ ವಿದ್ಯಾವಂತರು ಬ್ರೀಟೀಷರಿಗೆ ಸಮ ಎಂದು ಆರಗ ಜ್ಞಾನೇಂದ್ರ ಅಭಿಪ್ರಾಯ ಪಟ್ಟರು.
ಇದೇ ಸಂಧರ್ಭದಲ್ಲಿ ಶಾಲೆಯ ರಜತ ಮಹೋತ್ಸವ ಅಂಗವಾಗಿ ಶಾಲೆಗೆ ಸೇವೆ ಸಲ್ಲಿಸಿದ ಹಲವರನ್ನು ಸನ್ಮಾನಿಸಲಾಯಿತು.ಗ್ರಾಮದ ಶತಾಯುಷಿ ಬಂಗಾರಮ್ಮ ರವರನ್ನು ಪ್ರೀತಿ ಪೂರ್ವಕವಾಗಿ ಗೌರವಿಸಿ ಸನ್ಮಾನಿಸಲಾಯಿತು.
ಶಾಲಾಭಿವೃದ್ದಿ ಸಮಿತಿಯ ಅಧ್ಯಕ್ಷ ಅರವಿಂದ್ ಭಟ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.
ಈ ಸಂಧರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಮೂರ್ತಿ,ಚಿಕಜೇನಿ ಗ್ರಾಪಂ ಅಧ್ಯಕ್ಷ ಎನ್ ಪಿ ರಾಜು , ಉಪಾಧ್ಯಕ್ಷೆ ಸುಜಾತ ಸದಸ್ಯರಾದ ಭದ್ರಪ್ಪಗೌಡ , ನಳಿನಿ ನೌಕರರ ಸಂಘದ ನಿರ್ದೇಶಕ ಜಗದೀಶ್ ಕಾಗಿನೆಲೆ , ಶಿಕ್ಷಕರಾದ ಉಮೇಶ್ ಹಾಗೂ ಇನ್ನಿತರರಿದ್ದರು.
ಶಾಲೆಯ ಮುಖ್ಯ ಶಿಕ್ಷಕ ಮಂಜುನಾಥ್ ಸ್ವಾಗತಿಸಿದರು,ಶಿಕ್ಷಕ ಪ್ರಶಾಂತ್ ವಾರ್ಷಿಕ ವರದಿ ವಾಚಿಸಿದರು ,ಶಿಕ್ಷಕಿ ಆಶಾರಾಣಿ ನಿರೂಪಿಸಿದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್