Ripponpete | ಜಮೀನು ವ್ಯಾಜ್ಯ – ವ್ಯಕ್ತಿಯೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ – ಪ್ರಕರಣ ದಾಖಲು
ಜಮೀನು ವ್ಯಾಜ್ಯದ ಹಿನ್ನಲೆಯಲ್ಲಿ ವ್ಯಕ್ತಿಯೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಗರ್ತಿಕೆರೆ ಗ್ರಾಪಂ ವ್ಯಾಪ್ತಿಯ ಮಳಲಿಕೊಪ್ಪದಲ್ಲಿ ನಡೆದಿದೆ.
ಮಳಲಿಕೊಪ್ಪದ ನಾಗೇಶ್ ಗಂಭೀರ ಗಾಯಗೊಂಡ ವ್ಯಕ್ತಿಯಾಗಿದ್ದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ.
ಘಟನೆಗೆ ಸಂಬಂದಿಸಿದಂತೆ ರಿಪ್ಪನ್ಪೇಟೆ ಪೊಲೀಸ್ ಠಾಣೆಯಲ್ಲಿ ಮಳಲಿಕೊಪ್ಪದ ಯೋಗೇಂದ್ರಪ್ಪ ಹಾಗೂ ಸರಸ್ವತಿ ಎಂಬುವವರ ವಿರುದ್ದ ಪ್ರಕರಣ ದಾಖಲಾಗಿದೆ.
ಘಟನೆಯ ಹಿನ್ನಲೆ :
ಹಲ್ಲೆಗೊಳಗಾದ ನಾಗೇಶ್ ಹಾಗೂ ಯೋಗೇಂದ್ರಪ್ಪ ರವರ ಕುಟುಂಬಕ್ಕೂ ಜಮೀನು ವಿಚಾರವಾಗಿ ಮನಸ್ತಾಪವಿದ್ದು 01/12/2023 ರಂದು ಮಳಲಿಕೊಪ್ಪ ಗ್ರಾಮದ ಸರ್ವೆ ನಂ 54ರ ಭತ್ತದ ಗದ್ದೆಯಲ್ಲಿ ಹೋಗುತಿದ್ದಾಗ ಗಾಯಾಳು ನಾಗೇಶ್ ಚಿಕ್ಕಪ್ಪನಾದ ಯೋಗೇಂದ್ರಪ್ಪ ಮತ್ತು ಅವರ ಹೆಂಡತಿ ಸರಸ್ಕೃತಿ ಕ್ಷುಲ್ಲಕ ಕಾರಣಕ್ಕೆ ಅವಾಚ್ಯವಾಗಿ ನಿಂದಿಸಿ ನಾಗೇಶ್ ಮೇಲೆ ಬೇಲಿಯ ಗೂಟದಿಂದ ಎಡ ಕೈ ,ತಲೆ ಹಾಗೂ ಎಡ ಕಿವಿ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ.
ಗಲಾಟೆಯ ಶಬ್ದ ಕೇಳಿ ನಾಗೇಶ್ ತಂದೆ ಲಿಂಗಪ್ಪ ಬಂದು ಜಗಳ ಬಿಡಿಸಿದ್ದಾರೆ. ನಂತರ ಆರೋಪಿತರು ಇನ್ನು ಮುಂದೆ ಜಮೀನಿಗೆ ಕಾಲಿಟ್ಟರೆ ನಿನಗೆ ಇದೇ ದೊಣ್ಣೆಯಿಂದ ಹೊಡೆದು ಸಾಯಿಸುವುದಾಗಿ ಜೀವ ಬೆದರಿಕೆ ಹಾಕಿರುತ್ತಾರೆ,
ಹಲ್ಲೆಯಿಂದ ಗಾಯಗೊಂಡಿದ್ದ ಗಾಯಾಳು ನಾಗೇಶ್ ರನ್ನು ತಕ್ಷಣ ಹೊಸನಗರ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ 108 ವಾಹನದಲ್ಲಿ, ಶಿವಮೊಗ್ಗ ಮೆಗಾನ್ ಆಸ್ಪತ್ರೆಗೆ ಒಳರೋಗಿಯಾಗಿ ಚಿಕಿತ್ಸೆಗೆ ದಾಖಲಿಸಲಾಗಿದೆ.ಘಟನೆಯಲ್ಲಿ ಗಾಯಾಳುವಿನ ಎಡಗೈ ಮುರಿತವಾಗಿದೆ.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್