Ripponpete | ಜಿ.ಎಸ್.ಬಿ.ಸಮಾಜದವರಿಂದ ಸಂಸದ ಬಿ.ವೈ.ರಾಘವೇಂದ್ರರಿಗೆ ಸನ್ಮಾನ
ರಿಪ್ಪನ್ಪೇಟೆ;-ಜಿ.ಎಸ್.ಬಿ.ಸಮಾಜದವರಿಗೆ ಸರ್ಕಾರದಿಂದ ಅನುದಾನ ಕೊಟ್ಟಿಲ್ಲ ಮುಂದಿನ ದಿನಗಳಲ್ಲಿ ಆ ಸಮಾಜದವರಿಗೂ ಸರ್ಕಾರದ ಆನುದಾನವನ್ನು ಕೊಡಿಸುವುದಾಗಿ ಶಿವಮೊಗ್ಗ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಹೇಳಿದರು.
ರಿಪ್ಪನ್ಪೇಟೆಯ ಜಿ.ಎಸ್.ಬಿ.ಕಲ್ಯಾಣ ಮಂದಿರದಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಭಾಗವಹಿಸಿದ ಸಂದರ್ಭದಲ್ಲಿ “ಜಿ.ಎಸ್.ಬಿ.ಸಮಾಜದವರ ಸನ್ಮಾನ ಸ್ವೀಕರಿಸಿ ಮಾತನಾಡಿ ಜಿಲ್ಲೆಯಲ್ಲಿನ ಸಣ್ಣ ಪುಟ್ಟ ಜನಾಂಗದ ಸಮಾಜಭಾಂದವರು ಸಮುದಾಯ ಭವನ ನಿರ್ಮಾಣಕ್ಕಾಗಿ ಸರ್ಕಾರದ ಅನುದಾನವನ್ನು ಪಡೆದಿದ್ದಾರೆ.ಅದರೆ ಜಿ.ಎಸ್.ಬಿ.ಸಮಾಜದವರಿಗೆ ಮಾತ್ರ ಆನುದಾನ ನೀಡುವಲ್ಲಿ ನಿರ್ಲಕ್ಷಿಸಿದಂತಾಗಿದೆ.ಮುಂದಿನ ದಿನಗಳಲ್ಲಿ ಆ ಸಮಾಜಕ್ಕೂ ಅನುದಾನ ಕೊಡಿಸುವ ಭರವಸೆಯನ್ನು ಸಂಸದ ರಾಘವೇಂದ್ರ ನೀಡಿದರು.
ಜಿ.ಎಸ್.ಬಿ.ಸಮಾಜದ ಅಧ್ಯಕ್ಷ ಗಣೇಶ ಎನ್ ಕಾಮತ್,ಮಾಜಿ ಸಚಿವ ಹರತಾಳು ಹಾಲಪ್ಪ, ಜಿಲ್ಲಾ ಬಿಜೆಪಿ ಅಧ್ಯಕ್ಷ ಟಿ.ಡಿ.ಮೇಘರಾಜ್,ಕಾರ್ತಿಕ್ ಹಾಗೂ ಜಿ.ಎಸ್.ಬಿ.ಸಮಾಜದ ಪ್ರಮುಖರು ಪಾಲ್ಗೊಂಡಿದ್ದರು.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್