Ripponpete | ಜುಮ್ಮಾ ಮಸೀದಿ ಮುಂಭಾಗ ತೆರೆಯಲು ಹೊರಟಿದ್ದ ಸಿಎಲ್ 7 ಬಾರ್ ರದ್ದು – ಶಾಸಕರಿಗೆ ಅಭಿನಂದನೆ
ರಿಪ್ಪನ್ಪೇಟೆ : ಪಟ್ಟಣದ ಹೊಸನಗರ ರಸ್ತೆಯ ಜುಮ್ಮಾ ಮಸೀದಿ ಮುಂಭಾಗದ ಖಾಸಗಿ ಕಟ್ಟಡದಲ್ಲಿ ತೆರೆಯಲು ಹೊರಟಿದ್ದ ಸಿಎಲ್ 7 ಬಾರ್ ಅಂಡ್ ರೆಸ್ಟೋರೆಂಟ್ ಗೆ ವ್ಯಾಪಕ ವಿರೋದ ವ್ಯಕ್ತವಾದ ಹಿನ್ನೆಲೆಯಲ್ಲಿ ಕಟ್ಟಡದ ಮಾಲೀಕ ಬಾಡಿಗೆ ಕರಾರನ್ನು ರದ್ದು ಪಡಿಸಿದ್ದಾರೆ.
ಈ ಹಿನ್ನಲೆಯಲ್ಲಿ ಇಂದು ಜುಮ್ಮಾ ಮಸೀದಿ ಸಮಿತಿ ವತಿಯಿಂದ ಮಸೀದಿಯ ಮುಂಭಾಗ ಬಾರ್ ತೆರೆಯದಂತೆ ಅವಿರತವಾಗಿ ಶ್ರಮಿಸಿ ಸಮಾಜದೊಂದಿಗೆ ಸಹಕರಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ ರವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಜನವರಿ 30 ರಂದು ಜಿಲ್ಲಾ ಅಬಕಾರಿ ಜಿಲ್ಲಾಧಿಕಾರಿಗಳು ಏಕಾಏಕಿ ಮದ್ಯದಂಗಡಿಗೆ ಪರವಾನಿಗೆ ನೀಡುವ ಹುನ್ನಾರದಲ್ಲಿ ಸರ್ಕಾರಕ್ಕೆ ಸುಳ್ಳು ಮಾಹಿತಿ ನೀಡಿ ಜುಮ್ಮಾ ಮಸೀದಿಗೂ ರಾಯಲ್ ಕಂಫರ್ಟ್ ಕಟ್ಟಡಕ್ಕೂ ಕೇವಲ 60 ಮೀಟರ್ ಅಂತರದಲ್ಲಿದ್ದರೂ ಅಬಕಾರಿ ನಿಯಮವನ್ನು ಗಾಳಿಗೆ ತೋರಿ ಅವೈಜ್ಞಾನಿಕವಾಗಿ ಅಂಗಡಿ ಆರಂಭಕ್ಕೆ ಹಸಿರು ನಿಶಾನೆ ತೋರಿರುವ ಕ್ರಮವನ್ನು ವಿರೋಧಿಸಿ ಮುಸ್ಲಿಂ ಮಹಿಳೆಯರು ಸೇರಿದಂತೆ ಸರ್ವಪಕ್ಷಗಳ ಮುಖಂಡರು ಪಕ್ಷಾತೀತವಾಗಿ ಪ್ರತಿಭಟನೆ ನಡೆಸಿದ್ದರು.
ನಂತರ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ್ದ ತಹಶೀಲ್ದಾರ್ ವಿಎಸ್ ರಾಜೀವ್ ಮನವಿಯನ್ನು ಸ್ವೀಕರಿಸಿ ಸ್ಥಳ ಪರಿಶೀಲನೆ ನಡೆಸಿ ಯಾವುದೇ ಕಾರಣಕ್ಕೂ ಪ್ರಾರ್ಥನಾ ಮಂದಿರದ ಬಳಿ ಬಾರ್ ತೆರವಿಗೆ ಅವಕಾಶ ನೀಡುವುದಿಲ್ಲವೆಂದು ಭರವಸೆ ನೀಡಿದ್ದರು.
ನಂತರದಲ್ಲಿ ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಛೇರಿಗೆ ಪಟ್ಟಣದಿಂದ ಸರ್ವಪಕ್ಷಗಳ ನಿಯೋಗ ತೆರಳಿ ಯಾವುದೇ ಕಾರಣಕ್ಕೂ ಪ್ರಾರ್ಥನಾ ಮಂದಿರದ ಸನಿಹದಲ್ಲಿ ಸಿಎಲ್-7 ಮದ್ಯದಂಗಡಿ ತೆರೆಯಲು ಅನುಮತಿ ನೀಡಬಾರದು ಎಂದು ಆಗ್ರಹಿಸಿ ಮನವಿ ಸಲ್ಲಿಸಲಾಗಿತ್ತು ಹಾಗೇಯೆ ಕೂಡಾ ಜಿಲ್ಲಾ ಅಧಿಕಾರಿಗಳು ಜನಸಾಮಾನ್ಯರ ವಿರೋಧವಿದ್ದಲಿ ಅಂಗಡಿ ಅರಂಭಿಸುವುದಿಲ್ಲ ಎಂದು ಭರವಸೆಯನ್ನು ಸಹ ನೀಡಿದ್ದರು.
ಆದರೆ ಪ್ರಕರಣ ಕೋರ್ಟ್ ಮೆಟ್ಟಿಲೇರಿ ಇನ್ನೇನೂ ಬಾರ್ ತೆರೆಯುತ್ತಾರೆ ಎನ್ನಲಾಗುತಿತ್ತು ಆದರೆ ಇಂತಹ ಸೂಕ್ಷ್ಮ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಯಾವುದೇ ಕಾರಣಕ್ಕೂ ಜುಮ್ಮಾ ಮಸೀದಿ ಮುಂಭಾಗದಲ್ಲಿ ಬಾರ್ ತೆರೆಯಲು ಅವಕಾಶ ನೀಡುವುದಿಲ್ಲ ಎಂದು ಪಟ್ಟು ಹಿಡಿದು ಸಂಬಂದಿಸಿದ ಸಚಿವರಿ ಅಧಿಕಾರಿಗಳಿಗೆ ಸೂಚಿಸಿದ್ದರು.
ಸದರಿ ಕಟ್ಟಡದ ಮಾಲೀಕ ಬಾರ್ ಮಾಲೀಕನೊಂದಿಗೆ ಮಾಡಿಕೊಂಡಿದ್ದ ಬಾಡಿಗೆ ಕರಾರು ಪತ್ರವನ್ನು ರದ್ದುಗೊಳಿಸುವುದರ ಮೂಲಕ ಸಾರ್ವಜನಿಕರ ಒಂದು ವರ್ಷದ ಹೋರಾಟಕ್ಕೆ ಜಯ ಸಿಕ್ಕಿದಂತಾಗಿದೆ.
ಇಂದು ಸಾಗರಕ್ಕೆ ತೆರಳಿದ ಜುಮ್ಮಾ ಮಸೀದಿ ಸಮಿತಿಯ ಅಧ್ಯಕ್ಷರು ಹಾಗೂ ಸದಸ್ಯರು ಶಾಸಕ ಬೇಳೂರು ಗೋಪಾಲಕೃಷ್ಣರವರನ್ನು ಸನ್ಮಾನಿಸಿ ಗೌರವಿಸಿ ಧನ್ಯವಾದಗಳನ್ನು ತಿಳಿಸಿದ್ದಾರೆ.
ಈ ಸಂಧರ್ಭದಲ್ಲಿ ಜುಮ್ಮಾ ಮಸೀದಿ ಅಧ್ಯಕ್ಷರಾದ ಮಹಮ್ಮದ್ ರಫ಼ಿ ,ಈದ್ ಮಿಲಾದ್ ಸಮಿತಿ ಅಧ್ಯಕ್ಷ ಮೈದೀನ್ ,ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಮೀರ್ ಹಂಜಾ , ಗ್ರಾಪಂ ಸದಸ್ಯ ಆಸೀಫ಼್ , ಹಾಗೂ ಇನ್ನಿತರರಿದ್ದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್