Ripponpete | ಬೈಕ್ ಅಪಘಾತದಲ್ಲಿ ಯುವಕ ಸಾವು ಪ್ರಕರಣ – ಅಪಘಾತವೆಸಗಿ ಪರಾರಿಯಾಗಿದ್ದ ಕಾರನ್ನು ಪತ್ತೆ ಹಚ್ಚಿದ ಪೊಲೀಸರು
ರಿಪ್ಪನ್ಪೇಟೆ : ಇಲ್ಲಿನ ಸಮೀಪದ ವಡಗೆರೆ ಶಾಲೆಯ ಮುಂಭಾಗದಲ್ಲಿ ಬೈಕ್ ಅಪಘಾತವಾಗಿ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ಘಟನೆಗೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು ಹಿಟ್ ಆಂಡ್ ರನ್ ಮಾಡಿದ್ದ ಕಾರನ್ನು ರಿಪ್ಪನ್ಪೇಟೆ ಪೊಲೀಸರು ಪತ್ತೆ ಹಚ್ಚಿದ್ದಾರೆ.
ಆವಿನಹಳ್ಳಿ ಸಮೀಪದ ಕುರುವಂತೆ ಗ್ರಾಮದ ನವೀನ್ ಕುಮಾರ್ ಇಂದು ಸಂಜೆ ವಡಗೆರೆ ಶಾಲೆ ಮುಂಭಾಗದಲ್ಲಿ ಅಪಘಾತವಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದರು.
ಆದರೆ ಅಪಘಾತ ಹೇಗೆ ನಡೆದಿದೆ ಎಂಬುವುದು ಸ್ಪಷ್ಟವಾಗಿರಲಿಲ್ಲ , ಕೆಲವೊಬ್ಬರು ಸ್ಕಿಡ್ ಆಗಿದೆ ,ಜಾನುವಾರು ಅಡ್ಡ ಬಂದಿದೆ ,ವಾಹನ ಡಿಕ್ಕಿಯಾಗಿದೆ ಎಂಬ ಊಹಾಪೋಹಗಳು ಎದ್ದಿದ್ದವು ಆದರೆ ರಿಪ್ಪನ್ಪೇಟೆ ಪಿಎಸ್ಐ ಪ್ರವೀಣ್ ಎಸ್ ಪಿ ನೇತ್ರತ್ವದ ಸಿಬ್ಬಂದಿಗಳ ತಂಡ ಹಿಟ್ ಅಂಡ್ ರನ್ ಮಾಡಿದ್ದ ರಿಪ್ಪನ್ಪೇಟೆಯ ಮಾರುತಿ ಎರ್ಟಿಗಾ( KA15 P 0345) ಕಾರನ್ನು ಪತ್ತೆ ಹಚ್ಚಿ ಸೀಜ್ ಮಾಡುವುದರ ಮೂಲಕ ಈ ಗೊಂದಲಕ್ಕೆ ತೆರೆ ಎಳೆದಿದ್ದಾರೆ.
ಮಾರುತಿ ಎರ್ಟಿಗಾ ಕಾರಿನ ಚಾಲಕ ಅಪಘಾತವೆಸಗಿ ಯುವಕ ಸಾವನ್ನಪ್ಪಿರುವುದನ್ನು ಕಂಡು ಸ್ಥಳದಿಂದ ಪರಾರಿಯಾಗಿದ್ದನು ಇದರಿಂದ ಯುವಕ ನವೀನ್ ಕುಮಾರ್ ಸಾವಿನ ಬಗ್ಗೆ ಹಲವಾರು ಅನುಮಾನಗಳು ಮೂಡಿತ್ತು.
ಒಟ್ಟಾರೆಯಾಗಿ ಅಪಘಾತ ನಡೆದು ಕೆಲವೇ ಘಂಟೆಗಳ ಅಂತರದಲ್ಲಿ ಪರಾರಿಯಾಗಿದ್ದ ಕಾರನ್ನು ಪತ್ತೆ ಹಚ್ಚಿರುವ ರಿಪ್ಪನ್ಪೇಟೆ ಪೊಲೀಸರ ಕಾರ್ಯ ವೈಖರಿಗೆ ಪ್ರಶಂಸೆ ವ್ಯಕ್ತವಾಗಿದೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್