ಕಳ್ಳತನ ಪ್ರಕರಣ ಹೆಚ್ಚುತ್ತಿದ್ದರೂ ಕೈಕಟ್ಟಿ ಕುಳಿತ ಪೊಲೀಸರು; ಗ್ರಾಮಸ್ಥರ ಪ್ರತಿಭಟನೆ
ಸಾಗರ : ಎಡಜಿಗಳೇಮನೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಕಳೆದ ಒಂದು ತಿಂಗಳಿಂದಲೂ ನಡೆಯುತ್ತಿರುವ ಕಳ್ಳತನ ಪ್ರಕರಣಗಳಲ್ಲಿ ಸೂಕ್ತ ಕ್ರಮಕ್ಕೆ ಪೊಲೀಸರು ಮುಂದಾಗುತ್ತಿಲ್ಲ ಎಂದು ಆರೋಪಿಸಿ ಎಡಜಿಗಳೇಮನೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಗ್ರಾಮಸ್ಥರು ಡಿವೈಎಸ್ಪಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.
ಎಡಜಿಗಳೇಮನೆ ಗ್ರಾಮದ ಸುಮಾರು ೫೦ಕ್ಕೂ ಹೆಚ್ಚಿನ ಗ್ರಾಮಸ್ಥರ ತಂಡದ ನೇತೃತ್ವ ವಹಿಸಿ ಮಾತನಾಡಿದ ತಾಲೂಕು ಪಂಚಾಯ್ತಿ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ, ಸಾಗರ ನಗರದಿಂದ ಕೆಲವೇ ಕಿಲೋಮೀಟರ್ ಅಂತರದಲ್ಲಿರುವ ಇಜೆ ಮನೆಯಲ್ಲಿ ಒಂದು ತಿಂಗಳಿಂದ ನಿರಂತರವಾಗಿ ಸರಣಿ ಕಳ್ಳತನ ನಡೆಯುತ್ತಿದೆ. ಅಲ್ಲದೆ ಹಾಡುಹಗಲೇ ಕೆಲವು ಮನೆಯಲ್ಲಿ ಕಳ್ಳತನ ನಡೆಸುತ್ತಿದ್ದಾರೆ. ಆದರೆ ಈವರೆಗೆ ಕಳ್ಳರನ್ನು ಪೋಲೀಸರು ಹಿಡಿಯಲಿಲ್ಲ ಏಕೆ ಎಂದು ಪ್ರಶ್ನಿಸಿದರು.
ಕೆಲವು ದಿನಗಳ ಹಿಂದೆ ಶ್ಯಾಂ ಗುಡಿಗಾರ್ ಅವರ ಮನೆಯ ಹಿಂದುಗಡೆ ಬಾಗಿಲ ಹತ್ತಿರ ಹೊಂಚು ಹಾಕಿ ಕುಳಿತಿದ್ದವರನ್ನು ಸಾಕ್ಷಿ ಸಮೇತವಾಗಿ ಊರಿನ ಗ್ರಾಮಸ್ಥರು ಹಿಡಿದರು. ಅಲ್ಲದೆ ವಾಹನವನ್ನು ಜೀವದ ಹಂಗು ತೊರೆದು ಅಡ್ಡಗಟ್ಟಿ ಹಿಡಿದು ಪೋಲೀಸರಿಗೆ ಒಪ್ಪಿಸಿದರೂ ಸಹ ಕೇವಲ ಒಂದೇ ದಿನದಲ್ಲಿ ಮೂವರನ್ನು ಬಿಟ್ಟು ಕಳಿಸಿದ್ದರ ಹಿನ್ನಲೆ ಏನು? ಯಾವ ಒತ್ತಡದಲ್ಲಿ ಗ್ರಾಮಸ್ಥರು ಹಿಡಿದು ಕೊಟ್ಟವರ ಮೇಲೆ ದುರ್ಬಲ ಕೇಸ್ ಹಾಕಿ ವಾಪಾಸು ಕಳಿಸಿದ್ದು ಈ ಬಗ್ಗೆ ಪೋಲೀಸ್ ಅಧಿಕಾರಿಗಳು ಗ್ರಾಮಸ್ಥರಿಗೆ ಉತ್ತರವನ್ನು ನೀಡಬೇಕು ಎಂದು ಆಗ್ರಹಿಸಿದರು.
ಗ್ರಾಮಸ್ಥರು ಹಿಡಿದುಕೊಟ್ಟವರ ಮೇಲೆ ಎಫ್ಐಆರ್ ಹಾಕಲಾಗಿದೆ. ಈ ಬಗ್ಗೆ ವಿಚಾರಣೆಯು ನಡೆಯುತ್ತಿದೆ. ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಲೀಸ್ ತಂಡವನ್ನು ರಚನೆ ಮಾಡಲಾಗಿದೆ. ಆದಷ್ಟು ಬೇಗ ಕಳ್ಳರನ್ನು ಹಿಡಿಯುತ್ತೇವೆ. ಇನ್ನು ಮುಂದೆ ನಗರದ ಹೊರವಲಯಗಳಲ್ಲಿ ರಾತ್ರಿ ಸಮಯದಲ್ಲಿ ಪೋಲೀಸ್ ಬೀಟ್ ನಡೆಯುತ್ತದೆ. ಯಾರೇ ರಸ್ತೆ ಬದಿಯಲ್ಲಿ ಮದ್ಯ ಸೇವಿಸುವುದು, ಇನ್ನಿತರ ಅಪರಾಧ ಮಾಡುತ್ತಿದ್ದರೆ ಕೂಡಲೇ ಅವರ ಮೇಲೆ ಕೇಸ್ ಹಾಕಲಾಗುವುದು. ಅಲ್ಲದೆ ಸಾರ್ವಜನಿಕರು ನಿಮ್ಮ ಮನೆಯ ಸುತ್ತಮುತ್ತ ಹಾಗೂ ಎಲ್ಲಿಯೇ ಆದರೂ ಅನುಮಾನಾಸ್ಪದವಾಗಿ ತಿರುಗುವ ಹಾಗೂ ಜ್ಯೆಲಿಗೆ ಹೋಗಿ ಈಗ ಮತ್ತೆ ಅಪರಾಧ ಮಾಡುತ್ತಿದ್ದರೆ ಅಂತವರ ಬಗ್ಗೆ ನಮಗೆ ಮಾಹಿತಿ ನೀಡಿ ಮಾಹಿತಿ ನೀಡಿದವರ ಹೆಸರು ಗೌಪ್ಯವಾಗಿಡಲಾಗುವುದು. ಎಡಜಿಗಳೇಮನೆ ವ್ಯಾಪ್ತಿಯಲ್ಲಿ ಪೋಲೀಸ್ ಕಣ್ಗಾವಲು ಹಾಕಲಾಗುವುದು. ಕಳ್ಳರನ್ನು ಶೀಘ್ರದಲ್ಲಿಯೇ ಬಂಧಿಸುತ್ತೇವೆ ಎಂದು ಭರವಸೆಯನ್ನು ನೀಡಿದರು.
ಈ ಸಂದರ್ಭದಲ್ಲಿ ಎಂ.ಜಿ.ಕೃಷ್ಣಮೂರ್ತಿ, ಗಗನ್ ಆಚಾರ್ಯ, ಗ್ರಾಪಂ ಸದಸ್ಯ ರವಿ ಸೆಟ್ಟಿಸರ, ಎಸ್.ಪಿ.ಲಕ್ಷ್ಮೀನಾರಾಯಣ, ಉದಯ ಕರ್ಕಿಕೊಪ್ಪ, ಮಹೇಶ, ಪ್ರವೀಣ್ ಸೆಟ್ಟಿಸರ, ಮಧುರಾ ಬೆಂಕಟವಳ್ಳಿ, ಪ್ರೇಮ, ಲೀಲಾವತಿ, ಚೈತ್ರ ಮಾವಿನಕುಳಿ ಇನ್ನಿತರ ಗ್ರಾಮಸ್ಥರು ಹಾಜರಿದ್ದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್