SAGARA | ಸಾಗರ ನಗರಸಭೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಸದಸ್ಯರ ನಡುವೆ ಮಾತಿನ ಚಕಮಕಿ

SAGARA | ಸಾಗರ ನಗರಸಭೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಸದಸ್ಯರ ನಡುವೆ ಮಾತಿನ ಚಕಮಕಿ


ಸಾಗರ : ನಗರಸಭೆಯ ಸಾಮಾನ್ಯ ಸಭೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷದ ನಡುವೆ ಮಾತಿನ ಚಕಮಕಿ ನಡೆದಿದೆ.‌ ಸದಸ್ಯರೆಲ್ಲರೂ ಬಾವಿಗಿಳಿದು ಹೋರಾಟ ನಡೆಸಿದ್ದಾರೆ.

ನಗರಸಭೆಯ ಆಡಳಿತ ಅಧಿಕಾರಿ ಹಾಗೂ ಉಪ ವಿಭಾಗಾಧಿಕಾರಿ ಕುಮಾರಿ ಪಲ್ಲವಿ ಸಾತೇನಹಳ್ಳಿ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಸಭೆಯಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಸಭೆಯಲ್ಲಿ ಭಾಗಿಯಾಗಿದ್ದರು.

ಸಾಗರದ ಬಿ.ಹೆಚ್ ರಸ್ತೆಯಲ್ಲಿ ಜಾಗವೊಂದರ ವಿಚಾರದಲ್ಲಿ ಮಾಜಿ ಶಾಸಕರು ಸೇರಿದಂತೆ 14 ಜನರ ಮೇಲೆ ಎಫ್ಐಆರ್ ದಾಖಲಾಗಿರುತ್ತದೆ. ಇದನ್ನ ಪ್ರಶ್ನಿಸಿ ಬಿಜೆಪಿ ಸದಸ್ಯೆ ಮಧುರಾ ಶಿವಾನಂದ್ ಸಭೆಯಲ್ಲಿ ಚರ್ಚೆಗೆ ಆರಂಭಿಸುತ್ತಾರೆ. ಇದು ಸಭೆಯಲ್ಲಿ ಚರ್ಚಿಸುವ ವಿಷಯವಲ್ಲ ಎಂದು ಕಾಂಗ್ರೆಸ್ ಸದಸ್ಯೆ ಲಲಿತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ವಿಷಯ ಸೇರಿದಂತೆ ಜಿಲ್ಲಾ ಬಿಜೆಪಿ ಅಧ್ಯಕ್ಷ ಹಾಗೂ ನಗರಸಭೆಯ ಸದಸ್ಯ ಟಿ ಡಿ ಮೇಘರಾಜ್ ರವರು ಆಕ್ರೋಶ ವ್ಯಕ್ತಪಡಿಸಿ ಸಭೆಯಲ್ಲಿ ಕಾಂಗ್ರೆಸ್ ಗೆ ಬಹುಮತವಿಲ್ಲ ಮೀಸಲಾತಿ ತಂದು ಅಧ್ಯಕ್ಷರನ್ನ ಆಯ್ಕೆ ಮಾಡಿಕೊಳ್ಳಲಾಗಲಿಲ್ಲವೆಂದು ಸಭೆಗೆ ತಿಳಿಸಿದ್ದಾರೆ.

ಈ ವಿಷಯದ ಬಗ್ಗೆ ಮಾತನಾಡಿದ ಶಾಸಕ ಗೋಪಾಲ ಕೃಷ್ಣ ಬೇಳೂರು ಮಾತನಾಡಿ ಮೇಘರಾಜ್ ಅವರಿಗೆ ಈ ವಿಷಯದ ಬಗ್ಗೆ ಮಾತನಾಡಬೇಡಿ ಇದು ನ್ಯಾಯಾಲಯದಲ್ಲಿದೆ ಎಂದಾಗ ಬಿಜೆಪಿ ಅಷ್ಟು ಸದಸ್ಯರು ಬಾವಿಗೆ ಇಳಿದು ಪ್ರತಿಭಟಿಸಿದ್ದಾರೆ.

ಸದಸ್ಯರಿಗೆ ಸಮಾಧಾನ ಮಾಡಲು ಶಾಸಕ ಗೋಪಾಲಕೃಷ್ಣ ಬೇಳೂರು ಪ್ರಯತ್ನಿಸಿದ್ದಾರೆ. ನಗರಸಭೆ ಆಡಳಿತ ಅಧಿಕಾರಿ ಹೆಚ್ ನಾಗಪ್ಪ ಬಿಜೆಪಿ ಸದಸ್ಯರನ್ನ ಸಮಾಧಾನ ಪಡಿಸಿ ಅವರ ಆಸ್ಥಾನಕ್ಕೆ ಕರೆದುಕೊಂಡು ಹೋದರೆ ಕಾಂಗ್ರೆಸ್ ನ  ತಸ್ರೀಫ್ ನವರ ಮಧ್ಯಸ್ಥಿಕೆಯಲ್ಲಿ ಸಮಾಧಾನ‌ಪಡಿಸಲಾಯಿತು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

5 hours ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

5 hours ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

9 hours ago

ಈಸ್ಟ್‌ವೆಸ್ಟ್‌ ಬಸ್ ಸಂಸ್ಥೆ ಮಾಲೀಕ, ಮಾಜಿ ವಕ್ಫ್‌ ಬೋರ್ಡ್ ಅಧ್ಯಕ್ಷ ತಲ್ಕೀನ್ ಅಹ್ಮದ್ ನಿಧನ

ಈಸ್ಟ್‌ವೆಸ್ಟ್‌ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…

11 hours ago

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…

11 hours ago

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…

21 hours ago