SAND MAFIA | ಪತ್ರಕರ್ತರನ್ನು ಖರೀದಿಸಲು ಹೊರಟ್ರಾ ಮರಳು ದಂಧೆಕೋರರು..!!?

SAND MAFIA | ಪತ್ರಕರ್ತರ ಖರೀದಿಸಲು ಹೊರಟ್ರಾ ಮರಳು ದಂಧೆಕೋರರು..!!?


ಹೊಸನಗರ : ತಾಲೂಕಿನಾದ್ಯಂತ ಅಕ್ರಮ ಮರಳು ಸಾಗಾಟವನ್ನು ಬುಡ ಸಮೇತ ಕಿತ್ತು ಹಾಕಬೇಕೆಂಬ ಸಂಕಲ್ಪದಲ್ಲಿರುವ ಜನಸಂಗ್ರಾಮ ಪರಿಷತ್ ನ ಗಿರೀಶ್ ಆಚಾರ್ ಹೋರಾಟಕ್ಕೆ ತಾಲೂಕಿನ ನೈಜ ಪತ್ರಕರ್ತರು ಬೆಂಬಲವಾಗಿ ನಿಂತಿದ್ದಾರೆ.

ಇದರಿಂದ ತಾಲೂಕಿನಾದ್ಯಂತ ಅಕ್ರಮ ಮರಳು ಸಾಗಾಟ ಕಡಿಮೆಯಾಗಿದ್ದು ಮರಳು ದಂಧೆಕೋರರ ನಿದ್ದೆಗೆಡಿಸಿದೆ ಈ ಹಿನ್ನಲೆಯಲ್ಲಿ ಹೊಸನಗರದಲ್ಲಿ ಗುರುವಾರ ಮರಳು ದಂಧೆಕೋರರ ರಹಸ್ಯ ಸಭೆ ನಡೆದಿದೆ ಎಂದು ಬಲ್ಲ ಮೂಲಗಳಿಂದ ಮಾಹಿತಿ ತಿಳಿದುಬಂದಿದೆ.

ಈ ರಹಸ್ಯ ಸಭೆಯಲ್ಲಿ ಹೊಸನಗರ ತಾಲೂಕಿನ ಕೆಲವು ಪತ್ರಕರ್ತರುಗಳಿಗೆ ಕಪ್ಪ ಕಾಣಿಕೆಯನ್ನು ಮುಟ್ಟಿಸೋಣ ಗಿರೀಶ್ ಆಚಾರ್ ಒಬ್ಬನೇ ಹೋರಾಟ ಮಾಡಿಕೊಂಡಿರಲಿ ಎಂಬ ತೀರ್ಮಾನ ಕೈಗೊಂಡಿದ್ದಾರೆ ಎನ್ನಲಾಗುತ್ತಿದೆ.

ಸರ್ಕಾರದ ನಾಲ್ಕನೇ ಅಂಗವನ್ನೆ ಖರೀದಿಗೆ ಹೊರಟಿದ್ದಾರೆ ಎಂದರೆ ಮರಳು ದಂಧೆಕೋರರ ಅಕ್ರಮಗಳ ಬಾಹುಳ್ಯ ಎಷ್ಟಿರಬಹುದು….

ಈಗಾಗಲೇ ಖಡಕ್ ಪೊಲೀಸ್ ಅಧಿಕಾರಿ ಡಿವೈಎಸ್ಪಿ ಗಜಾನನ ವಾಮನ ಸುತಾರ ಮಾರ್ಗದರ್ಶನದಲ್ಲಿ ಹೊಸನಗರ ಪಿಎಸ್‌ಐ ಶಿವಾನಂದ್ ಕೆ ಹಾಗೂ ರಿಪ್ಪನ್‌ಪೇಟೆ ಪಿಎಸ್‌ಐ ಪ್ರವೀಣ್ ಎಸ್ ಪಿ ಮರಳು ದಂಧೆಗೆ ಕಡಿವಾಣ ಹಾಕಿದ್ದು ಹೊಸನಗರ ಹಾಗೂ ರಿಪ್ಪನ್‌ಪೇಟೆಯಲ್ಲಿ ಪ್ರಮುಖ ಸ್ಥಳಗಳಲ್ಲಿ ಬ್ಯಾರಿಕೇಡ್ ಅಳವಡಿಸಿದ್ದಾರೆ.

ಒಟ್ಟಾರೆಯಾಗಿ ಅಕ್ರಮಗಳನ್ನು ಪ್ರಶ್ನಿಸುವ ಪತ್ರಕರ್ತರನ್ನು ಆಮಿಷಕ್ಕೆ ಒಳಪಡಿಸಿ ಸಾಮಾಜಿಕ ಹೋರಾಟಗಾರ ಗಿರೀಶ್ ಆಚಾರ್ ರಂತವರನ್ನು ಮಟ್ಟಹಾಕಬೇಕೆಂಬ ಮರಳು ದಂಧೆಕೋರರ ಪ್ರಯತ್ನ ಫಲಿಸುತ್ತದೆಯೋ‌ ಇಲ್ಲವೋ ಕಾದು ನೀಡಬೇಕಾಗಿದೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಈದ್ ಮಿಲಾದ್ ಹಿನ್ನೆಲೆ: ಶಿವಮೊಗ್ಗ ಜಿಲ್ಲೆಯಲ್ಲಿ ಬೈಕ್ ರ್ಯಾಲಿ, ಡಿಜೆ, ಸಿಡಿಮದ್ದು ನಿಷೇಧ – ಡಿಸಿ ಆದೇಶ

ಈದ್ ಮಿಲಾದ್ ಹಿನ್ನೆಲೆ: ಶಿವಮೊಗ್ಗ ಜಿಲ್ಲೆಯಲ್ಲಿ ಬೈಕ್ ರ್ಯಾಲಿ, ಡಿಜೆ, ಸಿಡಿಮದ್ದು ನಿಷೇಧ - ಡಿಸಿ ಆದೇಶ Shivamogga district…

8 hours ago

ದೀರ್ಘಕಾಲದಿಂದ ಗೈರುಹಾಜರಾಗಿದ್ದ ಮಕ್ಕಳನ್ನು ಶಾಲೆಗೆ ಮರಳಿ ಕರೆತರಲು ಜಾಗೃತಿ ಅಭಿಯಾನ

ದೀರ್ಘಕಾಲದಿಂದ ಗೈರುಹಾಜರಾಗಿದ್ದ ಮಕ್ಕಳನ್ನು ಶಾಲೆಗೆ ಮರಳಿ ಕರೆತರಲು ಜಾಗೃತಿ ಅಭಿಯಾನ Awareness campaign conducted by Government High School,…

8 hours ago

ದುರಾಸೆ ಗೆಲ್ಲಲಿಲ್ಲ, ಪ್ರಾಮಾಣಿಕತೆ ಸೋಲಲಿಲ್ಲ! ಚಿನ್ನದ ಸರ ಮರಳಿಸಿ ಎಲ್ಲರ ಹೃದಯ ಗೆದ್ದ ಗುರುಶಕ್ತಿ ಬಸ್ ಸಿಬ್ಬಂದಿಗಳು

ದುರಾಸೆ ಗೆಲ್ಲಲಿಲ್ಲ, ಪ್ರಾಮಾಣಿಕತೆ ಸೋಲಲಿಲ್ಲ! ಚಿನ್ನದ ಸರ ಮರಳಿಸಿ ಎಲ್ಲರ ಹೃದಯ ಗೆದ್ದ ಗುರುಶಕ್ತಿ ಬಸ್ ಸಿಬ್ಬಂದಿಗಳು Gold mangalsutra…

9 hours ago

ರಿಪ್ಪನ್ ಪೇಟೆ : ಕೂಲಿ ಕೆಲಸಕ್ಕೆಂದು ಬಂದಿದ್ದ ಬಾಲಕಿಗೆ ಕಂಟಕವಾದ ಕಾಮುಕನಿಂದ ಲೈಂಗಿಕ ದೌರ್ಜನ್ಯ, ಗರ್ಭಿಣಿ! ಆರೋಪಿಯ ಬಂಧನ

ರಿಪ್ಪನ್ ಪೇಟೆ : ಕೂಲಿ ಕೆಲಸಕ್ಕೆಂದು ಬಂದಿದ್ದ ಬಾಲಕಿಗೆ ಕಂಟಕವಾದ ಕಾಮುಕನಿಂದ , ಗರ್ಭಿಣಿ! ಆರೋಪಿಯ ಬಂಧನ A 16-year-old minor…

9 hours ago

ರಿಪ್ಪನ್‌ಪೇಟೆ ಪೊಲೀಸ್ ಜೀಪ್‌ಗೆ ಅಪರಿಚಿತ ವಾಹನ ಡಿಕ್ಕಿ: ಮರಕ್ಕೆ ಅಪ್ಪಳಿಸಿದ ಜೀಪ್, ತಪ್ಪಿದ ಭಾರಿ ಅನಾಹುತ

ರಿಪ್ಪನ್‌ಪೇಟೆ ಪೊಲೀಸ್ ಜೀಪ್‌ಗೆ ಅಪರಿಚಿತ ವಾಹನ ಡಿಕ್ಕಿ: ಮರಕ್ಕೆ ಅಪ್ಪಳಿಸಿದ ಜೀಪ್, ತಪ್ಪಿದ ಭಾರಿ ಅನಾಹುತ A major disaster…

14 hours ago

ತುಂಗಾ ನದಿಗೆ ಮೂವರು ಮಕ್ಕಳೊಂದಿಗೆ ಹಾರಿದ ತಾಯಿ : ಇಬ್ಬರು ಹೆಣ್ಣು ಮಕ್ಕಳಿಗಾಗಿ ಶೋಧ ಮುಂದುವರಿಕೆ

ತುಂಗಾ ನದಿಗೆ ಮೂವರು ಮಕ್ಕಳೊಂದಿಗೆ ಹಾರಿದ ತಾಯಿ : ಇಬ್ಬರು ಹೆಣ್ಣು ಮಕ್ಕಳಿಗಾಗಿ ಶೋಧ ಮುಂದುವರಿಕೆ Mother and three…

15 hours ago