ಹಳ್ಳಿ ಮಕ್ಕಳ ರಂಗ ಹಬ್ಬದ ಸಮಾರೋಪ ಹಾಗೂ ಬಸವ ಜಯಂತಿ ಸಂಭ್ರಮೋತ್ಸವ|Ripponpet
“ಹಳ್ಳಿ ಮಕ್ಕಳ ರಂಗ ಹಬ್ಬದ ಸಮಾರೋಪ ಹಾಗೂ ಬಸವ ಜಯಂತಿ ಸಂಭ್ರಮೋತ್ಸವ’’ ಇಂದಿನ ಮಕ್ಕಳಲ್ಲಿ ಸಂಸ್ಕೃತಿ ಸಂಸ್ಕಾರ ಅರಿವಿಲ್ಲದಂತಾಗಿದೆ :ಡಾ. ಶ್ರೀ ಗುರು ನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿ. ರಿಪ್ಪನ್ಪೇಟೆ;- ಆಧುನಿಕ ತಂತ್ರಜ್ಞಾನದ ಅಡಿಯಲ್ಲಿ ಶಿಕ್ಷಣ ಪಡೆಯುತ್ತಿರುವ ಇಂದಿನ ಮಕ್ಕಳಲ್ಲಿ ಸಂಸ್ಕೃತಿ ಹಾಗೂ ಸಂಸ್ಕಾರ ಇಲ್ಲದಂತಾಗಿದೆ.ಇತ್ತೀಚಿನ ದಿನಗಳಲ್ಲಿ ನಾಟಕ ರಂಗಕಲೆ ಜಾನಪದ ತತ್ವ ಪದಗಳಿಂದ ನಮ್ಮ ಕಲೆ ಸಂಸ್ಕೃತಿ ಗಳು ಜೀವಂತವಾಗಿ ಉಳಿದಿದ್ದು ಅದನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ನಿಟ್ಟಿನಲ್ಲಿ ಮಕ್ಕಳ ರಂಗ ಹಬ್ಬ ಪ್ರೇರಕವೆಂದು ಮಳಲಿಮಠದ ಡಾ.ಗುರುನಾಗಭೂಷಣ…