Headlines

ಹಳ್ಳಿ ಮಕ್ಕಳ ರಂಗ ಹಬ್ಬದ ಸಮಾರೋಪ ಹಾಗೂ ಬಸವ ಜಯಂತಿ ಸಂಭ್ರಮೋತ್ಸವ|Ripponpet

“ಹಳ್ಳಿ ಮಕ್ಕಳ ರಂಗ ಹಬ್ಬದ ಸಮಾರೋಪ ಹಾಗೂ ಬಸವ ಜಯಂತಿ ಸಂಭ್ರಮೋತ್ಸವ’’ ಇಂದಿನ ಮಕ್ಕಳಲ್ಲಿ ಸಂಸ್ಕೃತಿ ಸಂಸ್ಕಾರ ಅರಿವಿಲ್ಲದಂತಾಗಿದೆ :ಡಾ. ಶ್ರೀ ಗುರು ನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿ. ರಿಪ್ಪನ್‌ಪೇಟೆ;- ಆಧುನಿಕ ತಂತ್ರಜ್ಞಾನದ ಅಡಿಯಲ್ಲಿ ಶಿಕ್ಷಣ ಪಡೆಯುತ್ತಿರುವ ಇಂದಿನ ಮಕ್ಕಳಲ್ಲಿ ಸಂಸ್ಕೃತಿ ಹಾಗೂ  ಸಂಸ್ಕಾರ ಇಲ್ಲದಂತಾಗಿದೆ.ಇತ್ತೀಚಿನ ದಿನಗಳಲ್ಲಿ  ನಾಟಕ ರಂಗಕಲೆ ಜಾನಪದ ತತ್ವ ಪದಗಳಿಂದ ನಮ್ಮ ಕಲೆ ಸಂಸ್ಕೃತಿ ಗಳು ಜೀವಂತವಾಗಿ ಉಳಿದಿದ್ದು ಅದನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ನಿಟ್ಟಿನಲ್ಲಿ ಮಕ್ಕಳ ರಂಗ ಹಬ್ಬ ಪ್ರೇರಕವೆಂದು ಮಳಲಿಮಠದ ಡಾ.ಗುರುನಾಗಭೂಷಣ…

Read More

ಸಾಗರದ ಪ್ರತಿಷ್ಠಿತ RBD ಗ್ರೂಪ್ಸ್ ನ ಮಹೇಶ್ ಮತ್ತು ಜಲೀಲ್ ನೂರಾರು ಅಭಿಮಾನಿಗಳೊಂದಿಗೆ ಕಾಂಗ್ರೆಸ್ ಸೇರ್ಪಡೆ

ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆ ದಿನಕಳೆದಂತೆ ರಂಗೇರುತಿದ್ದು ಅಭಿವೃದ್ದಿಗಿಂತ ಪ್ರೀತಿ ವಿಶ್ವಾಸಕ್ಕೆ ನಮ್ಮ ಸಹಕಾರ ಎಂದು ಕ್ಷೇತ್ರದ ಜನ ತೀರ್ಮಾನ ಮಾಡಿದಂತೆ ಭಾಸವಾಗುತಿದ್ದು ಆ ನಿಟ್ಟಿನಲ್ಲಿ ಯುವಕ ಯುವತಿಯರಿಂದ ಹಿಡಿದ್ದು ವೃದ್ದರವರೆಗೂ ಬೇಳೂರು ಗೋಪಾಲಕೃಷ್ಣ ರವರಿಗೆ ಬೆಂಬಲ ಸೂಚಿಸುತ್ತಿರುವುದು ಎದ್ದು ಕಾಣುತ್ತಿದೆ. ಹೌದು ಸಾಗರದ ಪ್ರಖ್ಯಾತ ಉದ್ಯಮಿಗಳಾದ RBD ಡೆವಲಪರ್ಸ್ ನ  ಜಲೀಲ್ ಮತ್ತು ಮಹೇಶ್ ಇವರು ಸಾಗರ ಕ್ಷೇತ್ರದಾದ್ಯಂತ ಹಲವಾರು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಂಡು ಕ್ಷೇತ್ರದಾದ್ಯಂತ ಹಲವು ಅಭಿಮಾನಿಗಳನ್ನು ಹೊಂದಿದ್ದಾರೆಯೇ ಹೊರತು ಯಾವುದೇ ಪಕ್ಷಗಳಲ್ಲಿ ಗುರುತಿಸಿಕೊಂಡವರಲ್ಲ…

Read More

ರಿಪ್ಪನ್‌ಪೇಟೆ : ಪದವಿ‌ ಕಾಲೇಜಿನ ಆವರಣದಲ್ಲಿ ಜೇನು ದಾಳಿ – ಹಲವು ವಿದ್ಯಾರ್ಥಿಗಳಿಗೆ ಗಾಯ|Bee attack

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪಟ್ಟಣದ ಸರ್ಕಾರಿ ಪದವಿ ಕಾಲೇಜು ಅವರಣದಲ್ಲಿ ಜೇನುನೊಣಗಳು ದಾಳಿ ಮಾಡಿದ್ದರಿಂದ ಸುಮಾರು 13 ಮಂದಿ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಪಟ್ಟಣದ ಸರ್ಕಾರಿ ಪದವಿ ಕಾಲೇಜಿನ ಆವರಣದಲ್ಲಿ ಇಂದು ಬೆಳಿಗ್ಗೆ ಜೇನುಹುಳುಗಳು ದಾಳಿ ಮಾಡಿದ್ದರಿಂದ 13 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಗಾಯಗೊಂಡ ವಿದ್ಯಾರ್ಥಿಗಳಿಗೆ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗಿದೆ. ಅವರ ಸ್ಥಿತಿ ಗಂಭೀರವಾಗಿರದಿದ್ದರೂ, ಅವರಲ್ಲಿ ಹಲವರಿಗೆ ಜೇನುನೊಣಗಳು ಕುಟುಕಿದ ಜಾಗದ ಸುತ್ತಲೂ ಭಾರಿ ಊತ ಕಂಡುಬಂದಿದೆ. ಆಗಿದ್ದೇನು? ಕಳೆದೊಂದು ತಿಂಗಳಿನಿಂದ ಕಾಲೇಜಿಗೆ…

Read More

ಸಿಗಂದೂರು ಬಳಿ ಪ್ರವಾಸಿಗರ ಬಸ್ ಪಲ್ಟಿ – ಓರ್ವ ಸಾವು|accident

ಸಾಗರ :  ತಾಲೂಕಿನ ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆಂದು ಬಂದಿದ್ದ ಪ್ರವಾಸಿಗರ ಬಸ್ ಪಲ್ಟಿಯಾಗಿ ತೋಟಕ್ಕೆ ಬಿದ್ದಿದ್ದು ಪ್ರವಾಸಿಗರಲ್ಲಿ ಓರ್ವ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಓರ್ವ ವೃದ್ದೆ ಸಾವನ್ನಪ್ಪಿರುವಾಗಿದೆ ತಿಳಿದುಬಂದಿದೆ. ಇಲ್ಲಿನ ಸಂಕಣ್ಣ ಶಾನುಬೋಗ್​ ಪಂಚಾಯ್ತಿ ವ್ಯಾಪ್ತಿಯಲ್ಲಿ ಹೊಸಕೊಪ್ಪ ತಿರುವಿನಲ್ಲಿ ಘಟನೆ ಸಂಭವಿಸಿದೆ.  ಬೆಳಗ್ಗಿನ ಜಾವ 5 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಬಸ್ ರಸ್ತೆ ಪಕ್ಕ ಇಳಿಜಾರಿನಲ್ಲಿದ್ದ ತೋಟಕ್ಕೆ ಉರುಳಿಸಿದೆ.  ಚಾಲಕ ನಿದ್ರೆ ಮಂಪರಿನಲ್ಲಿದ್ದಿದ್ದು ಘಟನೆಗೆ ಕಾರಣ ಎನ್ನಲಾಗುತ್ತಿದ್ದು, ತಿರುವಿನಲ್ಲಿ ವಾಹನದ ಅಪಘಾತವಾಗಿದೆ ಎಂದು ಹೇಳಲಾಗುತ್ತಿದೆ. ಘಟನೆಯ…

Read More

IPLಬೆಂಗಳೂರು – ರಾಜಸ್ಥಾನ ಪಂದ್ಯಾವಳಿಯಲ್ಲಿ ಸಾಗರ ಕಾಂಗ್ರೆಸ್ ಅಭ್ಯರ್ಥಿ ಬೇಳೂರು ಪ್ಲೇ ಕಾರ್ಡ್ ಪ್ರದರ್ಶನ

ಸಾಗರ : ವಿಧಾನಸಭಾ ಚುನಾವಣೆ ಈ ಬಾರಿ ಕದನ ಕುತೂಹಲವಾಗಿದೆ. ಅದರಲ್ಲೂ ಮಲೆನಾಡಿನ ಕ್ಷೇತ್ರಗಳು ರಣ ರೋಚಕವಾಗಿದೆ. ಅದರಲ್ಲೂ ಸಾಗರದಲ್ಲಿ ಚುನಾವಣೆ ಕಾವು ರಂಗೇರಿದೆ.  ಬೇಳೂರು ಗೋಪಾಲಕೃಷ್ಣ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದು ಬಿಜೆಪಿ ಅಭ್ಯರ್ಥಿಯಾಗಿ ಹರತಾಳು ಹಾಲಪ್ಪನವರ ನಡುವೆ ಈ ಬಾರಿ ಸೆಣಸಾಟ ಜೋರಾಗಿದೆ. ಇನ್ನು ಇಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನೆಡೆದ ಆರ್ ಸಿ ಬಿ ಮತ್ತು ರಾಜಸ್ಥಾನದ ಪಂದ್ಯದ ವೇಳೆ ಸಾಗರದ ಕಾಂಗ್ರೆಸ್ ಅಭ್ಯರ್ಥಿ ಗೋಪಾಲಕೃಷ್ಣ ಬೇಳೂರಿನ ಪ್ಲೆ ಕಾರ್ಡ್ ಹಿಡಿದು ಸಾಗರದ ಬಾಳೆಗುಂಡಿ…

Read More

ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಸಿಲಿಂಡರ್ ತುಂಬಿದ್ದ ಲಾರಿ ಪಲ್ಟಿ – ತಪ್ಪಿದ ಭಾರಿ ಅನಾಹುತ|accident

ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಸಿಲಿಂಡರ್ ತುಂಬಿದ್ದ ಲಾರಿಯೊಂದು ಪಲ್ಟಿಯಾದ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಗೌತಮಪುರ ಬಳಿ ನಡೆದಿದೆ. ಆನಂದಪುರ ಸಮೀಪದಲ್ಲಿ ಗ್ಯಾಸ್ ಸಿಲಿಂಡರ್ ತುಂಬಿಸಿಕೊಂಡು ಹೋಗುತ್ತಿದ್ದ ಲಾರಿಯು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿರುತ್ತಾನೆ. ಮಂಗಳೂರಿನಿಂದ ರಾಣೆಬೆನ್ನೂರಿಗೆ ಹೋಗುವ ಗ್ಯಾಸ್ ಸಿಲಿಂಡರ್ ತುಂಬಿದ  ಲಾರಿ ಗೌತಮಪುರ ಸಮೀಪದ ಬೀರನ ಕಣವಿಯ ತಿರುವಿನಲ್ಲಿ ಪಲ್ಟಿಯಾಗಿದೆ. 372 ಗ್ಯಾಸ್ ಸಿಲಿಂಡರ್ ಗಳನ್ನು ತುಂಬಿಕೊಂಡು ಹೋಗುತಿದ್ದ ಲಾರಿ ಚಾಲಕ…

Read More

ರಿಪ್ಪನ್‌ಪೇಟೆ : ಗ್ರಾಪಂ ಮಾಜಿ ಉಪಾಧ್ಯಕ್ಷೆ ಖತೀಜಾಬಿ ರೆಹಮಾನ್ ನಿಧನ|Ripponpet

ರಿಪ್ಪನ್‌ಪೇಟೆ : ಗ್ರಾಪಂ ಮಾಜಿ ಉಪಾಧ್ಯಕ್ಷೆ ಖತೀಜಾಬಿ ರೆಹಮಾನ್ ನಿಧನ ರಿಪ್ಪನ್‌ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆ ನಿವಾಸಿ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷೆ ಖತೀಜಾಬಿ ರೆಹಮಾನ್ ವಯೋಸಹಜ ಮೃತಪಟ್ಟಿದ್ದಾರೆ. ರಿಪ್ಪನ್‌ಪೇಟೆ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿದ್ದ ದಿವಂಗತ ಡಾ.ಅಬೂಬಕರ್ ರವರ ತಾಯಿಯಾದ ಖತೀಜಾಬಿ ರೆಹಮಾನ್ 2001 ರಲ್ಲಿ ಬರುವೆ 3 ವಾರ್ಡ್ ನ ಗ್ರಾಪಂ ಸದಸ್ಯರಾಗಿ ಆಯ್ಕೆಯಾಗಿ ಗ್ರಾಪಂ ಉಪಾಧ್ಯಕ್ಷರಾಗಿದ್ದರು.2003 ರಲ್ಲಿ ಜೆಡಿಎಸ್ ಪಕ್ಷದಿಂದ ತಾಲೂಕ್ ಪಂಚಾಯತ್ ಚುನಾವಣೆಗೆ ಸ್ಪರ್ಧಿಸಿದ್ದರು. ಮೃತರು ಏಳು ಜನ ಪುತ್ರರು ಹಾಗೂ…

Read More

ರಿಪ್ಪನ್‌ಪೇಟೆ : ಸಿದ್ದಪ್ಪನಗುಡಿ ಬಳಿ ಅಕ್ರಮ ಮದ್ಯ ವಶ – ವಾಹನ ಸಮೇತ ಓರ್ವನ ಬಂಧನ|excise

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಅಬಕಾರಿ ಇಲಾಖೆ ಹದ್ದಿನ ಕಣ್ಣಿಟ್ಟಿದ್ದು ಶಿವಮೊಗ್ಗ ಜಿಲ್ಲೆಯ ಹೊಸನಗರ (Hosanagara) ತಾಲೂಕಿನ ರಿಪ್ಪನ್‌ಪೇಟೆಯ ಸಿದ್ದಪ್ಪನಗುಡಿ ಬಳಿ ಅಬಕಾರಿ ಅಧಿಕಾರಿಗಳು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನ ಸಮೇತ ಅಕ್ರಮ ಮದ್ಯವನ್ನು(liquor) ವಶಕ್ಕೆ ತೆಗೆದುಕೊಂಡು ಆರೋಪಿಯನ್ನು ಬಂಧಿಸಿದ್ದಾರೆ. ರಿಪ್ಪನ್‌ಪೇಟೆ ಸಮೀಪದ ಸಿದ್ದಪ್ಪನಗುಡಿ ಸರ್ಕಲ್ ನಲ್ಲಿ ಅಬಕಾರಿ ಅಧಿಕಾರಿಗಳು ರಸ್ತೆಗಾವಲು ನಡೆಸುತ್ತಿರುವಾಗ ಅಕ್ರಮವಾಗಿ ಬೈಕ್ ನಲ್ಲಿ ಸುಮಾರು 25.92 ಲೀಟರ್ ಮದ್ಯವನ್ನು ಸಾಗಾಟ ನಡೆಸುತ್ತಿದ್ದು  ಅಕ್ರಮ ಮದ್ಯ,ಬೈಕ್ ನ್ನು ವಶಪಡಿಸಿಕೊಂಡಿದ್ದಾರೆ.ಆರೋಪಿಯನ್ನು ಬಂಧಿಸಿದ್ದಾರೆ. ಆಯುಕ್ತರು ಮಂಗಳೂರು…

Read More

23 ಕೋಟಿ ಮೌಲ್ಯದ ಚಿನ್ನ ಸೀಜ್

ತರೀಕೆರೆಯಲ್ಲಿ ಚುನಾವಣಾ ಸಿಬ್ಬಂದಿ  ಭರ್ಜರಿ ಬೇಟೆಯಾಡಿದ್ದಾರೆ. ಬರೋಬ್ಬರಿ 23 ಕೋಟಿ ಮೌಲ್ಯದ ಚಿನ್ನ ಜಪ್ತಿ ಮಾಡಿದ್ದಾರೆ. ಸೀಜ್​ ಆದ ಬಂಗಾರದ ತೂಕ 40 ಕೆ.ಜಿ.  ಚಿಕ್ಕಮಗಳೂರು ಜಿಲ್ಲೆ  ತರೀಕೆರೆ ತಾಲೂಕಿನ ಎಂ.ಸಿ ಹಳ್ಳಿ ಪೋಲಿಸ್ ಚೆಕ್ ಪೋಸ್ಟ್ ನಲ್ಲಿ ಚೆಕ್ ಪೋಸ್ಟ್ ನಲ್ಲಿ ಬರೋಬ್ಬರಿ 40 ಕೆ.ಜಿ ಚಿನ್ನಾಭರಣಗಳನ್ನು ವಶಕ್ಕೆ ಪಡೆಯಲಾಗಿದೆ.   ಚಿನ್ನವನ್ನು ಕಂಟೇನರ್‌ನಲ್ಲಿ ಸಾಗಿಸಲಾಗುತ್ತಿತ್ತು.ಚೆಕ್‌ಪೋಸ್ಟ್‌ನಲ್ಲಿ ಕಂಟೇನರ್‌ ತಡೆದು ತಪಾಸಣೆ ನಡೆಸಿದಾಗ ಆಭರಣಗಳು ಸಾಗಿಸುತ್ತಿರುವುದು ಕಂಡುಬಂದಿದೆ. ಆಭರಣಗಳಿಗೆ ಪೂರಕವಾಗಿ ಯಾವುದೇ ದಾಖಲೆಗಳು ನೀಡದೇ ಹಿನ್ನೆಲೆಯಲ್ಲಿ ಅದನ್ನು ಸೀಜ್​…

Read More

ರಿಪ್ಪನ್ ಪೇಟೆ ಯಲ್ಲಿ ಸಡಗರ-ಸಂಭ್ರಮದಿಂದ ರಂಜಾನ್ ಆಚರಣೆ – ಪರಸ್ಪರ ಸಾಮರಸ್ಯದಿಂದ ಸಮಾಜದಲ್ಲಿ‌ ನೆಮ್ಮದಿ ಸಾಧ್ಯ : ಮುನೀರ್ ಸಖಾಫ಼ಿ|Ramadan

ರಿಪ್ಪನ್ ಪೇಟೆ : ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿ ಹಾಗೂ ಮೆಕ್ಕಾ ಮಸ್ಜಿದ್ ನ ಮುಸ್ಲಿಂ ಬಾಂಧವರುಗಳು ಧರ್ಮಗುರುಗಳಾದ  ಮುನೀರ್ ಸಖಾಫಿ ಮತ್ತು ಮುಪ್ತಿ ಇಜ್ ಹಾರ್ ಅಹಮದ್ ರವರ ನೇತೃತ್ವದಲ್ಲಿ ರಂಜಾನ್ ಹಬ್ಬವನ್ನು ಸಡಗರ ಹಾಗೂ ಸಂಭ್ರಮದಿಂದ ಆಚರಿಸಿದರು. ಹೊಸನಗರ ರಸ್ತೆಯಿಂದ ಮೆರವಣಿಗೆ ಹೊರಟು ಸಾಗರ ರಸ್ತೆಯಲ್ಲಿರುವ ಈದ್ಗಾ ಮೈದಾನಕ್ಕೆ ತೆರಳಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಕಳೆದ ಒಂದು ತಿಂಗಳಿನಿಂದ ಉಪವಾಸ ಹಾಗೂ ಧಾರ್ಮಿಕ ಆಚರಣೆಗಳ ವಿಧಿವಿಧಾನಗಳನ್ನು ಪಾಲಿಸಿದ ಅವರುಗಳು ಶುಕ್ರವಾರ ಚಂದ್ರದರ್ಶನವಾದ ಹಿನ್ನೆಲೆಯಲ್ಲಿ  ಇಂದು…

Read More