ಯಾವುದೇ ಕಾರಣಕ್ಕೂ ಬಿಜೆಪಿ ಪಕ್ಷ ತೊರೆಯುವುದಿಲ್ಲ : ಬಾಳೂರು ಗ್ರಾಪಂ ಮಾಜಿ ಆಧ್ಯಕ್ಷ ಹೆಚ್.ಎಸ್.ಕೃಷ್ಣಮೂರ್ತಿ ಗೌಡ
ರಿಪ್ಪನ್ಪೇಟೆ;- ಇತ್ತೀಚೆಗೆ ಕಾಂಗ್ರೇಸ್ ಪಕ್ಷದ ಮುಖಂಡರು ನಮ್ಮ ಮನೆಗೆ ಭೇಟಿ ನೀಡಿ ನನ್ನನ್ನು ಕಾಂಗ್ರೇಸ್ ಪಕ್ಷ ಸೇರ್ಪಡೆಯಾಗುವಂತೆ ಒತ್ತಾಯಿಸಿದರು ಅದರೆ ನಾನು ಬಿಜೆಪಿಯ ತತ್ವಸಿದ್ದಾಂತ ಮತ್ತು ಕ್ಷೇತ್ರದ ಶಾಸಕ ಹರತಾಳು ಹಾಲಪ್ಪನವರ ಆಭಿವೃದ್ದಿ ಕಾರ್ಯಗಳನ್ನು ಮೆಚ್ಚಿಕೊಳ್ಳುವುದರೊಂದಿಗೆ ಅವರ ಆಭಿಮಾನಿಯಾಗಿರುವ ನಾನು ಬಿಜೆಪಿ ಪಕ್ಷವನ್ನು ಬಿಟ್ಟು ಕಾಂಗ್ರೇಸ್ ಪಕ್ಷಕ್ಕೆ ಸೇರ್ಪಡೆಯಾಗಿಲ್ಲ ಎಂದು ಬಾಳೂರು ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷ ಹೆಚ್.ಎಸ್.ಕೃಷ್ಣಮೂರ್ತಿಗೌಡ್ರು ಸ್ಪಷ್ಟ ಪಡಿಸಿದ್ದಾರೆ. ಮಾದ್ಯಮದವರೊಂದಿಗೆ ಮಾತನಾಡಿ ಕೆಲವರು ನಾನು ಕಾಂಗ್ರೇಸ್ ಪಕ್ಷ ಸೇರಿದ್ದಾರೆಂದು ಸುಳ್ಳು ಅಪಪ್ರಚಾರ ಮಾಡುತ್ತಿದ್ದಾರೆಂದು ತಿಳಿದು…