ಶಾಸಕ ಹರತಾಳು ಹಾಲಪ್ಪ ವಿರುದ್ದ ಯಡಿಯೂರಪ್ಪ ರವರ ಬಳಿ ದೂರು ಸಲ್ಲಿಸಿದ ಬಿಜೆಪಿ ಮುಖಂಡರು|BJP
ಶಾಸಕ ಹಾಲಪ್ಪ ವಿರುದ್ಧ ಬಿಎಸ್ವೈಗೆ ದೂರು ಸಾಗರ ಶಾಸಕ ಹರತಾಳು ಹಾಲಪ್ಪನ ವರಿಗೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ತಪ್ಪಿಸುವ ನಿಟ್ಟಿನಲ್ಲಿ ಬಿಜೆಪಿಯ ಹಲವು ಘಟಾನು ಘಟಿ ನಾಯಕರು, ಸಂಘದ ಹಿರಿಯರು ಸದ್ದಿಲ್ಲದೆ ಕೆಲಸ ಮಾಡುತ್ತಿದ್ದಾರೆ. ಶನಿವಾರ ಶಿಕಾರಿಪುರದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂ ರಪ್ಪ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರರನ್ನು ಭೇಟಿ ಮಾಡಿದ ವಿರೋಧಿ ಬಣ ಬಹಳಷ್ಟು ಹೊತ್ತು ಚರ್ಚೆ ನಡೆಸಿದೆ. ಮುಖ್ಯವಾಗಿ ಎಲ್ಲರ ಮಾತುಗಳನ್ನೂ ಬಿಎಸ್ವೈ, ಸಮಾಧಾನ…